ಗುಬ್ಬಿ | ಸರ್ಕಾರಿ ಆಸ್ಪತ್ರೆ, ಶಾಲೆ, ಅಂಗನವಾಡಿ ಕಟ್ಟಡಗಳು ಶೀಘ್ರದಲ್ಲಿ ನಿರ್ಮಾಣ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಗುಬ್ಬಿ ತಾಲ್ಲೂಕಿನಲ್ಲಿ ಈಗಾಗಲೇ ಮಂಜೂರಾದ 75 ಶಾಲಾ ಕೊಠಡಿಗಳು, 95 ಅಂಗನವಾಡಿ ಕೇಂದ್ರ ಕಟ್ಟಡಗಳು ಹಾಗೂ ಸರ್ಕಾರಿ ಆಸ್ಪತ್ರೆಯ ನೂತನ ಕಟ್ಟಡಗಳು ಶೀಘ್ರದಲ್ಲಿ ಜನರ ಬಳಕೆಗೆ ಸಿದ್ಧವಾಗಲಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಭರವಸೆ ನೀಡಿದರು.

ತಾಲ್ಲೂಕಿನ ಅಡಗೂರು, ಚಿಕ್ಕೋನಹಳ್ಳಿ ಪಾಳ್ಯ ಗ್ರಾಮದಲ್ಲಿ 2.60 ಕೋಟಿ ವ್ಯಯದ ರಸ್ತೆ ಅಭಿವೃದ್ಧಿ ಹಾಗೂ ಮಡೇನಹಳ್ಳಿ ಗ್ರಾಮದಲ್ಲಿ 4 ಕೋಟಿ ವೆಚ್ಚದ ಸರ್ಕಾರಿ ಆಸ್ಪತ್ರೆ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು 28 ಅಂಗನವಾಡಿ ಕಟ್ಟಡಗಳಿಗೆ ಸ್ವಂತ ಜಾಗವಿಲ್ಲದೆ ವಿಳಂಬವಾಗಿದೆ. ಶೀಘ್ರದಲ್ಲಿ ಈ ಕಟ್ಟಡಕ್ಕೂ ಸ್ಥಳ ಹುಡುಕಿ ಕೆಲಸ ಮಾಡಲಾಗುತ್ತದೆ. ಈ ಜೊತೆಗೆ ಎಚ್ ಎ ಎಲ್ ಘಟಕ ನೀಡುವ ಸಿಆರ್ ಎಫ್ ಫಂಡ್ ಪ್ರಸ್ತುತ ಸಾಲಿನಲ್ಲಿ ಅಧಿಕ ಹಣ ನೀಡಲಿದೆ ಎಂದರು.

ಏರ್ ಪೋರ್ಟ್ ನಿರ್ಮಾಣಕ್ಕೂ ಸೂಕ್ತ ಸ್ಥಳ ಪರಿಶೀಲನೆ ನಡೆದಿದೆ. ಜಿಲ್ಲಾ ಸಚಿವರು ಈ ಬಗ್ಗೆ ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ನಿರ್ಮಾಣಕ್ಕೆ ಪಟ್ಟಣಕ್ಕೆ ಸಮೀಪದ ಸ್ಥಳ ಹುಡುಕಾಟ ನಡೆದಿದೆ. ಸುಮಾರು 5 ಎಕರೆ ಜಮೀನು ಅವಶ್ಯವಿದೆ. ಈಗಾಗಲೇ ಆಶ್ರಯ, ವಸತಿ ನಿಲಯಗಳು, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗೆ ಸ್ಥಳ ನೀಡಲಾಗಿದೆ. ಅಲ್ಲಲ್ಲಿ ಇರುವ ಸರ್ಕಾರಿ ಜಾಗ ಸರ್ಕಾರಿ ಉದ್ದೇಶಕ್ಕೆ ಮೀಸಲಿಟ್ಟು ಪಹಣಿ ದಾಖಲೆ ಮಾಡಲಾಗುತ್ತಿದೆ. ಸರ್ಕಾರ ಕೂಡಾ ಸರ್ಕಾರಿ ಜಮೀನು ಒತ್ತುವರಿ ನಡೆಯದಂತೆ ಅಗತ್ಯ ಕ್ರಮ ಕೈಗೊಂಡಿದೆ. ಈ ವೇಳೆ ಜಿ.ಹೊಸಹಳ್ಳಿ ಬಳಿ 10 ಎಕರೆ, ಮತ್ತಿಕೆರೆ ಬಳಿ 20 ಎಕರೆ ವಸತಿ ಶಾಲೆಗಳಿಗೆ ಜಾಗ ಮೀಸಲಿಡಲಾಗಿದೆ ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಮುನಿರತ್ನ ಪ್ರಕರಣ ಪ್ರತಿಕ್ರಿಯೆ ನೀಡಿದ ಅವರು ತಪ್ಪು ಮಾಡದೆ ಇದ್ದರೆ ಯಾರೂ ಪೊಲೀಸ್ ದೂರು ನೀಡುವುದಿಲ್ಲ. ಅಧಿಕಾರ ಇದ್ದಾಗ ಒಬ್ಬರ ಮೇಲೆ ಮತ್ತೊಬ್ಬರ ಆರೋಪ ಕೇಸು ಎಂಬುದು ರಾಜಕಾರಣದಲ್ಲಿ ಮಾಮೂಲಿ ಎನಿಸಿದೆ ಎಂದರು. ಕಳ್ಳಿಪಾಳ್ಯದಿಂದ ಅಡಗೂರು ತಲುಪುವ ರಸ್ತೆ ಹಾಗೂ ಚಿಕ್ಕೋನಹಳ್ಳಿಪಾಳ್ಯ ನಡುವಲಪಾಳ್ಯ ರಸ್ತೆಗೆ 2.60 ಕೋಟಿ ನೀಡಲಾಗಿದೆ. ಬೇಡಿಕೆಯ ಈ ರಸ್ತೆ ಗುಣಮಟ್ಟದಲ್ಲಿ ಅಭಿವೃದ್ದಿಪಡಿಸಲು ಸೂಚಿಸಿದ್ದು, ಹೇಮಾವತಿ ನೀರು ತಾಲ್ಲೂಕಿನ ಬಹುತೇಕ ಕೆರೆಗಳಿಗೆ ಹರಿದು ತುಂಬಿದೆ. ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೂ ಅಂತರ್ಜಲ ನೀರು ನೀಡುವ ಅಜ್ಜಮ್ಮನ ಕೆರೆ ತುಂಬಿ ಕೋಡಿ ಬಿದ್ದ ಕಾರಣ ಬಾಗಿನ ಅರ್ಪಿಸಿ ಗಂಗಾಪೂಜೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಉಂಡೆ ರಾಮಣ್ಣ, ಮುಳುಕಟ್ಟಯ್ಯ ಯು.ರಾಜಣ್ಣ, ಬಸವರಾಜ್, ಸಿ.ಜಿ.ಲೋಕೇಶ್, ಪಪಂ ಸದಸ್ಯ ರೇಣುಕಪ್ರಸಾದ್, ಜಿಲ್ಲಾ ಆರೋಗ್ಯಾಧಿಕಾರಿ ಚಂದ್ರಶೇಖರ್, ತಾಲ್ಲೂಕು ಆರೋಗ್ಯಾಧಿಕಾರಿ ಬಿಂದುಮಾಧವ, ಕಟ್ಟಡ ಗುತ್ತಿಗೆ ಏಜೆನ್ಸಿಯ ಈಶ್ವರ್, ಕೋದಂಡರಾಮಯ್ಯ ಸೇರಿದಂತೆ ಜಿ.ಹೊಸಹಳ್ಳಿ ಮತ್ತು ಹೇರೂರು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...