ತುಮಕೂರು | ಮಳೆಗೆ ಗುಬ್ಬಿ ಸರ್ಕಾರಿ ಆಸ್ಪತ್ರೆ ಜಲಾವೃತ : ರೋಗಿಗಳ ಪರದಾಟ!

Date:

ಸೋಮವಾರ ರಾತ್ರಿ ಸುರಿದ ಜೋರು ಮಳೆಗೆ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಸಂಪೂರ್ಣ ಜಲಾವೃತಗೊಂಡು ಕೆಳಂತಸ್ತಿನ ಒಳ ರೋಗಿಗಳ ವಾರ್ಡ್‌ನಲ್ಲಿದ್ದ ರೋಗಿಗಳು ಪರದಾಡಿದ ಘಟನೆ ನಡೆದಿದೆ.

ರಾತ್ರಿ 8 ಗಂಟೆಯ ಸಮಯದಲ್ಲಿ ಆರಂಭವಾದ ಮಳೆ ಒಂದೇ ವೇಗದಲ್ಲಿ ಸುರಿದು ಹೆದ್ದಾರಿ ಬದಿಯ ತಗ್ಗು ಪ್ರದೇಶದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಮಳೆ ನೀರು ಹರಿದಿದೆ. ಪ್ರತಿ ನಿಮಿಷಕ್ಕೆ ಹೆಚ್ಚಾದ ನೀರು ಅರ್ಧ ಗಂಟೆಯಲ್ಲಿ ಮೊದಲ ಅಂತಸ್ತಿನ ಕಟ್ಟಡ ತುಂಬಾ ನೀರು ಶೇಖರಣೆಯಾಗಿದೆ. ತಕ್ಷಣಕ್ಕೆ ಆತಂಕ ಮೂಡಿಸಿದ ಮಳೆ ನೀರು ನೋಡ ನೋಡುತ್ತಿದ್ದಂತೆ ಒಳ ರೋಗಿಗಳ ವಾರ್ಡ್ ಗಳತ್ತ ಹರಿದು ನಂತರ ಐಸಿಯು ಘಟಕದತ್ತ ನೀರು ಹರಿದಿದೆ.

ಒಳ ರೋಗಿಗಳ ದಾಖಲಾತಿ ಪ್ರಕಾರ 11 ಪುರುಷರು, 5 ಮಂದಿ ಮಹಿಳಾ ರೋಗಿಗಳನ್ನು ಮೇಲಂತಸ್ತಿಗೆ ಶಿಫ್ಟ್ ಮಾಡಿದ ಸಿಬ್ಬಂದಿ ತಕ್ಷಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಬೆಳಗ್ಗೆ ಮಳೆ ನೀರು ಹೊರ ಹಾಕುವ ಕೆಲಸ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001222783

100 ಹಾಸಿಗೆಯ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ಎನ್ನುವ ಅಂಶಕ್ಕೆ ಕಳಂಕವಾಗಿ ಮಳೆ ನೀರು ವ್ಯವಸ್ಥಿತವಾಗಿ ಹರಿಸುವ ಚರಂಡಿ ಇಲ್ಲದಿರುವುದು ವಿಪರ್ಯಾಸ. ಒಳ ಹೊಕ್ಕ ನೀರು ನಮಗೆ ಭಯ ತಂದಿತು ಎಂದು ರೋಗಿಗಳ ಜೊತೆ ಇದ್ದ ಸಂಬಂಧಿಕರ ಅಳಲು ತೋಡಿಕೊಂಡರು.

ಹೆದ್ದಾರಿ ರಸ್ತೆಗಿಂತ ತಗ್ಗಿನಲ್ಲಿ ಆಸ್ಪತ್ರೆಯ ಕಟ್ಟಡ ಇದ್ದು, ಈ ಹಿಂದೆ ರಸ್ತೆಯಲ್ಲಿ ಹರಿಯುವ ನೀರು ಆಸ್ಪತ್ರೆಯ ಅವರಣಕ್ಕೆ ಬರುತ್ತಿತ್ತು. ಇದರ ನಿಯಂತ್ರಣಕ್ಕೆ ಕೆಲ ತಾತ್ಕಾಲಿಕ ವ್ಯವಸ್ಥೆ ಮಾಡಿದ್ದರೂ ಜೋರು ಮಳೆಗೆ ಇಡೀ ಕಟ್ಟಡ ಜಲ ದಿಗ್ಬಂಧನಕ್ಕೆ ಒಳಗಾಯಿತು. ತಗ್ಗು ಪ್ರದೇಶದ ಕಟ್ಟಡಕ್ಕೆ ಮಳೆ ನೀರು ಬಾರದಂತೆ ಕೂಡಲೇ ವೈದ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...