ಗುಬ್ಬಿ | ಅತಿಥಿ ಶಿಕ್ಷಕರನ್ನು ಖಾಯಂ ಮಾಡುವ ಬಗ್ಗೆ ಸರ್ಕಾರ ಆಲೋಚಿಸಬೇಕು : ಮುರಳೀಧರ ಹಾಲಪ್ಪ

Date:

ಸಾವಿರಾರು ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಮೂಲಕ ಸರ್ಕಾರಿ ಉರ್ದು ಶಾಲೆಯೊಂದು ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಕೌಶಲ್ಯಾಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಸಿ.ಎಸ್.ಪುರ ಹೋಬಳಿಯ ದೊಳ್ಳೇನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತಿದ್ದ ಅವರು ಒಂದು ಮನೆ ನಿಬಾಯಿಸುವುದೇ ಕಷ್ಟದ ಕೆಲಸವಾಗಿರುವ ಈ ಸಂದರ್ಭದಲ್ಲಿ ನೂರು ವರ್ಷಗಳ ಕಾಲ ಶಾಲೆಯನ್ನು ಜೋಪಾನವಾಗಿ ಕಾಪಾಡಿಕೊಂಡು ಬಂದಿರುವುದು ಕಷ್ಟದ ಕೆಲಸ. ಈ ಶಾಲೆಯಲ್ಲಿ ಪಾಠ ಮಾಡಿ, ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ ಎಲ್ಲಾ ಶಿಕ್ಷಕರೂ ಅಭಿನಂದನೆಗೆ ಆರ್ಹರು ಎಂದರು.

ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಒಂದೊಂದೇ ಮುಚ್ಚುತ್ತಿರುವ ಈ ಕಾಲದಲ್ಲಿ ನೂರಾರು ವಿದ್ಯಾರ್ಥಿಗಳಿರುವ ಈ ಶಾಲೆಗೆ ಒಬ್ಬರು ಮಾತ್ರ ಖಾಯಂ ಶಿಕ್ಷಕರಿದ್ದರೆ, ಉಳಿದವರು ಅತಿಥಿ ಶಿಕ್ಷಕರಾಗಿದ್ದಾರೆ. ಹತ್ತು ಹದಿನೈದು ವರ್ಷಗಳಿಂದ ಸರ್ಕಾರಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಶಿಕ್ಷಕರು ಖಾಯಂ ಆದರೆ ಅವರ ವೃತ್ತಿ ಜೀವನ ಚೆನ್ನಾಗಿರುವುದರ ಜೊತೆಗೆ ಮಕ್ಕಳ ಭವಿಷ್ಯವೂ ಉಜ್ವಲವಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡಬೇಕಾಗಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶತಮಾನ ತುಂಬಿರುವ ದೊಳ್ಳೇನಹಳ್ಳಿ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಲವಾರು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿದೆ. ಶಾಲಾ ಕೊಠಡಿಗಳು ಶಿಥಿಲಗೊಂಡಿವೆ. ಮಕ್ಕಳಿಗೆ ಸರಿಯಾದ ಶೌಚಾಲಯವಿಲ್ಲ. ಹಾಗಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಿಇಓ ಅವರು ಇತ್ತ ಗಮನಹರಿಸಿ ಮಕ್ಕಳಿಗೆ ಅಗತ್ಯವಾಗಿ ಬೇಕಾಗಿರುವ ಬೋಧನಾ ಕೊಠಡಿ, ಪೀಠೋಪಕರಣ, ಪಾಠೋಪಕರಣಗಳನ್ನು ನೀಡಿ, ಮಕ್ಕಳ ಸಮಗ್ರ ವಿಕಾಸಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.

ವೇದಿಕೆಯಲ್ಲಿ ಶಾಲೆಯ ಎಸ್ ಡಿಎಂಸಿ ಅದ್ಯಕ್ಷ ಸವೂದ್, ಶಾಲೆಯ ಶಿಕ್ಷಕ ವೃಂದದವರು, ಸಾವಿರಾರು ಹಳೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ವೇದಿಕೆಯಲ್ಲಿ ಜರುಗಿದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...