ಗುಬ್ಬಿ | ಕ್ರೀಡಾ ಚಟುವಟಿಕೆಯಲ್ಲಿ ಗುಬ್ಬಿ ತಾಲೂಕು ಮುಂಚೂಣಿ : ಮುರಳೀಧರ ಹಾಲಪ್ಪ

Date:

ರಾಜ್ಯದ ಕೆಲ ಜಿಲ್ಲೆಯಲ್ಲಿ ತುಮಕೂರು ಜಿಲ್ಲೆ ಕ್ರೀಡಾ ಚಟುವಟಿಕೆಯಲ್ಲಿ ಹೆಸರು ಗಳಿಸಿದೆ. ಆದರೆ ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರೀಡಾ ಕೋಟಾದಡಿ ಕೆಲಸ ಪಡೆದು ಬದುಕು ಕಟ್ಟಿಕೊಂಡವರ ಸಂಖ್ಯೆ ಗುಬ್ಬಿ ತಾಲ್ಲೂಕಿನಲ್ಲಿ ಸಿಗುತ್ತದೆ. ಈ ಸಾಧನೆಯ ಹಿಂದೆ ಚನ್ನಬಸವೇಶ್ವರ ಯುವಕ ಸಂಘ ಹಾಗೂ ಶಂಕರ್ ಕುಮಾರ್ ಅವರ ಶ್ರಮ ಇದೆ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಹಾಲಪ್ಪ ಸೇವಾ ಪ್ರತಿಷ್ಠಾಪನಾ ಅಧ್ಯಕ್ಷ ಮುರುಳೀಧರ ಹಾಲಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶ್ರೀ ಚನ್ನಬಸವೇಶ್ವರ ಯುವಕ ಸಂಘ ಆಯೋಜಿಸಿದ್ದ ಉಚಿತ ಬೇಸಿಗೆ ಕ್ರೀಡಾ ಶಿಬಿರ – 2025 ಮುಕ್ತಾಯ ಸಮಾರಂಭ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಈಗಿನ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಉತ್ತಮ ಕ್ರೀಡಾಪಟುಗಳು. ಅವರನ್ನು ಗುಬ್ಬಿಯ ಕ್ರೀಡಾಕೂಟಕ್ಕೆ ಕರೆದು ಸಹಕಾರ ಕೋರಿ ಕ್ರೀಡಾ ಚಟುವಟಿಕೆಗೆ ಅಗತ್ಯ ಸವಲತ್ತು ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸೂಕ್ತ ದೈಹಿಕ ಆರೋಗ್ಯ ಅವಶ್ಯವಿದೆ. ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಲ್ಲಿ ಓದುವ ಅಭ್ಯಾಸ ಹೆಚ್ಚುತ್ತದೆ. ಮಾನಸಿಕ ಸ್ಥೈರ್ಯ ತುಂಬುತ್ತದೆ. ಈ ಜೊತೆ ಹೊರಗಿನ ಪ್ರಪಂಚವನ್ನು ಅರಿಯುತ್ತಾರೆ. ಈ ನಿಟ್ಟಿನಲ್ಲಿ ಕ್ರೀಡಾಕೂಟಗಳು ಹಾಗೂ ಕ್ರೀಡಾ ತರಬೇತಿ ಶಿಬಿರಗಳು ನಿರಂತರ ನಡೆಯಬೇಕು. ಸರ್ಕಾರದ ಜೊತೆ ಕ್ರೀಡೆಗೆ ಅವಶ್ಯ ಸೌಕರ್ಯ ಒದಗಿಸಲು ಚರ್ಚೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಹಶೀಲ್ದಾರ್ ಆರತಿ.ಬಿ ಮಾತನಾಡಿ ಮಾನಸಿಕ ಒತ್ತಡ ಕಡಿಮೆ ಮಾಡುವ ಶಕ್ತಿ ಕ್ರೀಡೆಗೆ ಇದೆ. ಕ್ರೀಡೆಯಲ್ಲಿ ತೊಡಗಿದ ಮಕ್ಕಳು ಶಿಕ್ಷಣದಲ್ಲೂ ಸಹ ಸೈ ಎನಿಸಿಕೊಳ್ಳುತ್ತಾರೆ. ಸಂಕುಚಿತ ಮನೋಭಾವ ತೊಡೆದು ವಿಶಾಲ ಮನೋಭಾವ ಬೆಳೆಸಲು ಕ್ರೀಡೆ ಉತ್ತಮ ವೇದಿಕೆ. ಪಟ್ಟಣದ ಸುತ್ತಲಿನ 10 ಕಿಮೀ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಮಕ್ಕಳು ಶಿಬಿರಕ್ಕೆ ಬಂದಿದ್ದು ಉತ್ತಮ ಬೆಳವಣಿಗೆ. ಇದೇ ಮಾದರಿ ಶಿಬಿರ ವರ್ಷ ಪೂರ್ತಿ ನಡೆಸಿ ಉತ್ತಮ ಕ್ರೀಡಾಪಟುಗಳ ನಿರ್ಮಾಣ ಆಗಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯ ಜಿ.ಆರ್.ಶಿವಕುಮಾರ್ ಮಾತನಾಡಿ ತುಮಕೂರು ಜಿಲ್ಲೆಯಲ್ಲಿ ಗ್ರಾಮೀಣ ಸೊಗಡಿನ ಕ್ರೀಡೆಗೆ ಹೆಸರು ತಂದುಕೊಟ್ಟ ಗುಬ್ಬಿ ತಾಲ್ಲೂಕು ಕೊಕ್ಕೋ ಹಾಗೂ ವಾಲಿಬಾಲ್ ಆಟಗಾರರು ಇಂದು ರಾಷ್ಟ್ರೀಯ ತಂಡದಲ್ಲಿ ಆಡಿದ್ದಾರೆ. ಗ್ರಾಮೀಣ ಮಕ್ಕಳು ಬರುವ ಡಿಗ್ರಿ ಕಾಲೇಜು ಮೈದಾನ ನೀರಿನಿಂದ ಕೂಡಿದೆ. ಇಲ್ಲಿ ಮಕ್ಕಳಿಗೆ ಕ್ರೀಡೆಗೆ ಅವಕಾಶ ಮಾಡುವ ಕೆಲಸ ಹಾಲಪ್ಪ ಅವರು ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಸಿ.ಆರ್.ಶಂಕರ್ ಕುಮಾರ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಬೇಸಿಗೆ ಶಿಬಿರ 110 ಮಕ್ಕಳಿಂದ ನಡೆದಿದೆ. ಕೊಕ್ಕೋ ಹಾಗೂ ವಾಲಿಬಾಲ್ ಕ್ರೀಡೆ ಅತ್ಯುತ್ತಮ ತರಬೇತಿ ಮೂಲಕ ಕ್ರೀಡಾಪಟುಗಳ ನಿರ್ಮಾಣ ಆಗಿದೆ. ಈ ಮಕ್ಕಳಿಗೆ ನಿರಂತರ ತರಬೇತಿ ಸಿಕ್ಕಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿ ಮಾರ್ಪಾಡು ಆಗುತ್ತಾರೆ. ಈ ನಿಟ್ಟಿನಲ್ಲಿ ದಾನಿಗಳ ಮೂಲಕ ಮಕ್ಕಳಿಗೆ ಬೆಳಿಗ್ಗೆ ಉಪಹಾರ, ಸಮವಸ್ತ್ರ ನೀಡಲಾಗಿದೆ. ಶಿಬಿರದ ಪ್ರಶಸ್ತಿಪತ್ರ ಸಹ ನೀಡಲಾಗಿದೆ. 70 ರಷ್ಟು ಗ್ರಾಮೀಣ ಭಾಗದ ಮಕ್ಕಳು ಈ ಬಾರಿ ಶಿಬಿರದಲ್ಲಿ ಇದ್ದದ್ದು ವಿಶೇಷವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಕೊಕ್ಕೋ ಹಾಗೂ ವಾಲಿಬಾಲ್ ಕ್ರೀಡಾಪಟುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಪಪಂ ಸದಸ್ಯ ಜಿ.ಸಿ.ಕೃಷ್ಣಮೂರ್ತಿ, ರಾಜ್ಯ ಕೊಕ್ಕೋ ಸಂಸ್ಥೆಯ ಉಪಾಧ್ಯಕ್ಷ ಜಿ.ವೈ.ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಚ್.ರಾಜು, ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಬಿ.ಬಸವರಾಜು, ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಜಿ.ಆರ್.ವಿಶ್ವನಾಥ್, ಗುಬ್ಬಿ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಎಚ್.ಡಿ.ಯಲ್ಲಪ್ಪ, ಹಿರಿಯ ಆಟಗಾರರಾದ ಭಾಗ್ಯಲಕ್ಷ್ಮೀ, ಜಿ.ಸಿ.ಚಂದ್ರಕಲಾ, ವಸೀಂ, ಕುಮಾರಸ್ವಾಮಿ, ಸುರೇಶ್, ಮಲ್ಲಿಕಾರ್ಜುನ್, ವಿನೋದ್, ಗಿರೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...