ಗುಬ್ಬಿ | ಅಡಕೆಸಸಿ ಕಡಿದವ ಮನುಷ್ಯನ ತಲೆ ಕಡಿಯಬಲ್ಲ : ರೈತಸಂಘ ಜಿಲ್ಲಾಧ್ಯಕ್ಷ ಗೋವಿಂದರಾಜು ಆತಂಕ

Date:

ವೈಷಮ್ಯ ರೈತನ ಬೆಳೆ ನಾಶ ಮಾಡುವ ಮಟ್ಟಕ್ಕೆ ಬೆಳೆದಿದೆ. ಎರಡು ಬಾರಿ ಅಡಕೆಸಸಿಗಳನ್ನು ಕಡಿದ ದುಷ್ಕರ್ಮಿ ಮನುಷ್ಯನ ತಲೆ ತೆಗೆಯಲೂ ಸಿದ್ದವಿರುತ್ತಾನೆ. ಇಂತಹ ಅಪರಾಧಿಯನ್ನು ಹುಡುಕಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಒತ್ತಾಯಿಸಿದರು.

ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ಜಮಾಯಿಸಿದ ನೂರಾರು ರೈತಸಂಘದ ಕಾರ್ಯಕರ್ತರು ಮಾರಶೆಟ್ಟಿಹಳ್ಳಿ ರೈತ ಮಹೇಶ್ ಅವರ ಅಡಕೆ ಸಸಿಗಳನ್ನು ಕಡಿದ ಪ್ರಕರಣಕ್ಕೆ ನ್ಯಾಯ ಒದಗಿಸಬೇಕು. ಈ ರೀತಿಯ ಪ್ರಕರಣ ಮರುಕಳಿಸದಂತೆ ತಾಲ್ಲೂಕು ಆಡಳಿತ ಕ್ರಮ ವಹಿಸುವಂತೆ ಒತ್ತಾಯಿಸಿ ಅಡಕೆ ಸಸಿಗಳನ್ನು ಹಿಡಿದು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಒಂದು ವರ್ಷದಲ್ಲಿ ಎರಡು ಬಾರಿ 750 ಕ್ಕೂ ಅಧಿಕ ಸಸಿಗಳನ್ನು ಕಡಿದ ಆರೋಪಿಯನ್ನು ಬಂಧಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಮತ್ತೊಬ್ಬರ ಬೆಳೆ ನಾಶ ಮಾಡುತ್ತಾರೆ. ರೈತನ ಬಲಿ ಪಡೆಯಲು ತಯಾರಿರುತ್ತಾರೆ ಎಂದು ಕಿಡಿಕಾರಿದರು.

ರೈತ ವಿರೋಧಿ ನಡವಳಿಕೆಗಳು ಇತ್ತೀಚಿಗೆ ಹೆಚ್ಚುತ್ತಿದೆ. ರೈತರ ಬಗ್ಗೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ನಿಗಾವಹಿಸುತ್ತಿಲ್ಲ. ಸರ್ಕಾರ ಕೂಡ ರೈತ ವಿರೋಧಿ ನೀತಿಗಳನ್ನೇ ಅನುಷ್ಠಾನ ಮಾಡುತ್ತಿವೆ. ಎಲ್ಲವನ್ನೂ ಹೋರಾಟ ಮಾಡಿಯೇ ಕೇಳುವ ಸ್ಥಿತಿ ಬಂದಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತ ಪರ ಕೆಲಸವನ್ನು ಕೈಗೊಳ್ಳಬೇಕು. ರೈತರನ್ನು ಸಂರಕ್ಷಿಸುವ ಕೆಲಸವನ್ನು ಮಾಡಬೇಕು ಎಂದು ಒತ್ತಾಯಿಸಿದ ಅವರು ಜಿ.ಹೊಸಹಳ್ಳಿ ಸಮೀಪ ಟೋಲ್ ನಿರ್ಮಾಣ ಅವೈಜ್ಞಾನಿಕವಾಗಿದೆ. ಈ ರಸ್ತೆ ಬಹುತೇಕ ಸ್ಥಳೀಯರೇ ಬಳಸುತ್ತಾರೆ. ಯಾವ ಕೈಗಾರಿಕಾ ಪ್ರದೇಶ ಇಲ್ಲಿಲ್ಲ. ರೈತರ ವಾಹನಗಳೇ ಓಡಾಡುವ ರಸ್ತೆಗೆ ಸುಂಕ ಅಗತ್ಯವಿಲ್ಲ. ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001812210

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ಅಡಕೆಗಿಡಗಳು ರೈತನ ದೈವ ಸ್ವರೂಪವಾಗಿದೆ. ಕಷ್ಟಪಟ್ಟು ಬೆಳೆದ ಅಡಕೆಸಸಿಗಳನ್ನು ನಿರ್ದಾಕ್ಷಿಣ್ಯವಾಗಿ ಕಡಿದ ಮನುಷ್ಯನನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಚೆನ್ನಾಗಿ ಬೆಳೆದ ಸಸಿಗಳು ಕಟುಕರಿಗೆ ಕಣ್ಣು ಕುಕ್ಕಿತ್ತು ಎನಿಸಿದೆ. ಏಕಾಏಕಿ ರಾತ್ರಿ ಸಸಿ ಮಣ್ಣು ಪಾಲು ಮಾಡಿದ್ದು ರೈತ ದ್ವೇಷಿ ಅನಿಸುತ್ತಿದೆ. ದ್ವೇಷ ಅಸೂಯೆಗೆ ಈ ರೀತಿ ಬೆಳೆ ನಾಶ ಸರಿಯಲ್ಲ. ಕೂಡಲೇ ಪ್ರಕರಣದ ಆರೋಪಿ ಬಂಧಿಸಬೇಕು ಎಂದು ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ಮಾರಶೆಟ್ಟಿಹಳ್ಳಿ ರೈತ ಮಹೇಶ್ ಅವರ ಅಡಕೆಸಸಿಗಳನ್ನು ಕಡಿದ ಪ್ರಕರಣ ಎರಡು ಬಾರಿ ನಡೆದಿದೆ. ತಾಲ್ಲೂಕಿನಲ್ಲಿ ಪದೇ ಪದೇ ಇಂತಹ ಘಟನೆ ನಡೆದಿವೆ. ಒಂದೂವರೆ ವರ್ಷದಲ್ಲಿ 6 ಪ್ರಕರಣ ನಮ್ಮಲ್ಲಿ ನಡೆದಿದೆ. ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ತಾಲ್ಲೂಕು ಆಡಳಿತ ಎಚ್ಚೆತ್ತು ರೈತರ ಬೆಳೆ ಕಾಪಾಡಬೇಕು. ಬೆಳೆ ನಾಶದಿಂದ ಮನನೊಂದ ರೈತ ಮತ್ತೊಂದು ಆತ್ಮಹತ್ಯೆ ದಾರಿ ಆಯ್ಕೆ ಮಾಡುತ್ತಾನೆ. ಮತ್ತೊಂದು ಪ್ರಕರಣ ನಡೆದರೆ ತಾಲ್ಲೂಕು ಆಡಳಿತವೇ ನೇರ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ರೈತರ ಬಗ್ಗೆ ಯಾವ ಇಲಾಖೆಯು ಕುಂದು ಕೊರತೆಗಳ ಸಭೆ ನಡೆಸುತ್ತಿಲ್ಲ. ಕೂಡಲೇ ರೈತ ಪರ ನಿಲ್ಲದಿದ್ದರೆ ಆಯಾ ಕಚೇರಿ ಮುಂದೆ ಧರಣಿ ನಡೆಸುವುದು ಖಚಿತ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತಸಂಘದ. ಶಿವಕುಮಾರ್, ಯತೀಶ್, ಕುಮಾರಸ್ವಾಮಿ, ಬಸವರಾಜು, ಸತ್ತಿಗಪ್ಪ, ದಲಿತ ಮುಖಂಡ ಬಸವರಾಜು, ಸಂತ್ರಸ್ತ ಮಹೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...