ಗುಬ್ಬಿ | ಅಧಿಕ ಮಳೆ ಹಿನ್ನಲೆ ಸಹಾಯವಾಣಿ ಕೇಂದ್ರ ಪ್ರಾರಂಭ : ತಹಶೀಲ್ದಾರ್ ಬಿ.ಆರತಿ.

Date:

ಹವಾಮಾನ ಇಲಾಖೆ ಮುನ್ಸೂಚನೆ ಮೇರೆಗೆ ಅಧಿಕ ಮಳೆ ಬರುವ ಹಿನ್ನಲೆ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಗುಬ್ಬಿ ತಾಲ್ಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಸಂಭವಿಸುವ ಅನಾಹುತಗಳಿಗೆ ಸ್ಪಂದಿಸಲು ಹಾಗೂ ಸಾರ್ವಜನಿಕರ ನೆರವಿಗೆ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ತಾಲ್ಲೂಕು ಕಚೇರಿಯಲ್ಲಿ 08131-222234 ಸಂಖ್ಯೆಗೆ ನೆರೆ ಹಾವಳಿ ಬಗ್ಗೆ ಮಾಹಿತಿ ತಿಳಿಸಲು ಮನವಿ ಮಾಡಿದರು.

ಐದು ದಿನಗಳ ಕಾಲ ಮಳೆ ಬರುವ ಮಾಹಿತಿ ಹವಾಮಾನ ಇಲಾಖೆ ರವಾನಿಸಿದೆ. ಇದೇ ಆಧಾರದ ಮೇರೆಗೆ ಜಿಲ್ಲೆಯಲ್ಲಿ ಮಳೆ ಬರುವ ಹಿನ್ನಲೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ತಾಲ್ಲೂಕಿನಲ್ಲಿ ಸಹ ಅಧಿಕ ಮಳೆ ಬರುವ ನಿರೀಕ್ಷೆ ಇದ್ದು ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಶಾಲಾ ಮಕ್ಕಳ ಬಗ್ಗೆ ಪೋಷಕರು ಹಾಗೂ ಶಿಕ್ಷಕ ವರ್ಗ ನಿಗಾ ವಹಿಸಬೇಕಿದೆ. ಶಾಲೆಯ ಸಮೀಪದಲ್ಲೇ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಮಕ್ಕಳು ನೀರಿನ ರಭಸದ ಅರಿವು ಇಲ್ಲದೆ ನೀರಿನತ್ತ ಹೋಗುವ ಕಾರಣ ಹೆಚ್ಚಿನ ಗಮನಹರಿಸಬೇಕಿದೆ. ಈ ಜೊತೆಗೆ ಸಾರ್ವಜನಿಕರು ಅನಾವಶ್ಯಕ ಓಡಾಟ ನಿಲ್ಲಿಸಬೇಕು. ಹಳೇ ಮರದ ಕೆಳಗೆ ಹಾಗೂ ಪಾಳು ಮನೆಗಳ ಬಳಿ ನಿಲ್ಲಬಾರದು. ವಾಹನ ಸಂಚಾರ ಅನಾವಶ್ಯಕ ಮಾಡಬೇಡಿ ಎಂದು ಎಚ್ಚರಿಸಿದ ಅವರು ಎಲ್ಲೇ ಅನಾಹುತ ಸಂಭವಿಸಿದರೇ ತಕ್ಷಣ ತಾಲ್ಲೂಕು ಕಚೇರಿ ಸಹಾಯವಾಣಿಗೆ ತಿಳಿಸಲು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...