ಗುಬ್ಬಿ | ಹೇಮಾವತಿ ಹೋರಾಟ : ಜೈಲು ಸೇರಿ ಹೊರಬಂದವರಿಗೆ ಸನ್ಮಾನ

Date:

ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನಡೆದ ಬೃಹತ್ ರೈತ ಹೋರಾಟದಲ್ಲಿ ಪಾಲ್ಗೊಂಡು ನೀರಿಗಾಗಿ ಜೀವ ಕೊಡಲು ಸಿದ್ದರಿದ್ದ ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ಜೈಲು ಸೇರಿದ್ದರು. ಕೆಲ ದಿನಗಳ ಸೆರೆಮನೆ ವಾಸ ಅನುಭವಿಸಿ ಹೊರ ಬಂದ ನಾಲ್ವರು ಹೋರಾಟಗಾರರಿಗೆ ಆತ್ಮೀಯ ಸನ್ಮಾನ ಕಾರ್ಯಕ್ರಮ ನಾಗರೀಕರು ಆಯೋಜಿಸಿದರು.

ಗುಬ್ಬಿ ಪಟ್ಟಣದ ಗುಬ್ಬಿ ವೀರಣ್ಣ ಸರ್ಕಲ್ ಬಳಿ ನಡೆದ ಕಾರ್ಯಕ್ರಮದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ನಡೆಸಿ ಜೈಲು ಸೇರಿ ಹೊರ ಬಂದ ಆನಂದ್, ಶರತ್, ಲೋಕೇಶ್, ಚೇತನ್ ಈ ಹೋರಾಟಗಾರರಿಗೆ ಹಾಗೂ ಇವರ ಪರ ಕಾನೂನು ಹೋರಾಟ ನಡೆಸಿದ ವಕೀಲ ಎಂ.ಡಿ.ಸುರೇಶ್ ಇವರಿಗೆ ನಾಗರೀಕರ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಹೇಮಾವತಿ ನೀರಿಗಾಗಿ ಸಾವಿರಾರು ರೈತರು ಹೋರಾಟಕ್ಕೆ ಧುಮುಕಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ನಮ್ಮ ನೀರು ನಮ್ಮ ಹಕ್ಕು ಪ್ರತಿಪಾದಿಸುವ ಹೋರಾಟ ಹತ್ತಿಕ್ಕುವ ಕೆಲಸ ಪೊಲೀಸರನ್ನು ಬಳಸಿ ಸರ್ಕಾರ ಆಡಳಿತ ಅಧಿಕಾರ ದುರ್ಬಳಕೆ ಮಾಡಿತ್ತು. ಇದನ್ನು ಸಹಿಸದ ರೈತರು ಕೆಲ ಕಾಲ ಆಕ್ರೋಶ ಹೊರ ಹಾಕಿದ ಸಮಯ ಹೇಮಾವತಿ ಹೋರಾಟಗಾರರ ವಿರುದ್ಧ ಕೇಸು ದಾಖಲಿಸಿ ಕೆಲವರನ್ನು ಜೈಲಿಗೆ ಕಳಿಸಲಾಗಿತ್ತು. ಯಾವುದೇ ಅಪರಾಧ ಕೃತ್ಯ ಮಾಡದೆ ನಮ್ಮ ಜನರ ನೀರು ಉಳಿಸಲು ಜೈಲಿಗೆ ಹೋದ ಹಿನ್ನಲೆ ನಾಗರೀಕರಿಂದ ಸನ್ಮಾನ ಆಯೋಜಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಪಿ.ಬಿ.ಚಂದ್ರಶೇಖರ್ ಬಾಬು, ಸಿ.ಆರ್.ಶಂಕರಕುಮಾರ್, ಪಪಂ ಸದಸ್ಯರಾದ ಶಿವಕುಮಾರ್, ಕೃಷ್ಣಮೂರ್ತಿ, ಪಂಚಾಕ್ಷರಿ, ಯತೀಶ್, ಸಿದ್ದರಾಮಯ್ಯ, ಪ್ರಮೋದ್, ಅಖಿಲೇಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...