ಗುಬ್ಬಿ | ಸಮಗ್ರ ಪೋಷಕಾಂಶದಿಂದ ಅಧಿಕ ಇಳುವರಿ : ಡಿ.ಲೋಕೇಶ್

Date:

   ಪ್ರತಿಯೊಬ್ಬ ರೈತರು ಸಮಗ್ರ ಪೋಷಕಾಂಶಗಳನ್ನು ಬೆಳೆಗಳಿಗೆ ಒದಗಿಸಿದಾಗ ಮಾತ್ರ ಅಧಿಕ ಇಳುವರಿ ಪಡೆಯುವ ಜೊತೆಗೆ ಆರ್ಥಿಕವಾಗಿ ಅಭಿವೃದ್ಧಿಯಾಗಬಹುದು ಎಂದು ಸಂಪನ್ಮೂಲ ವ್ಯಕ್ತಿ ಡಿ.ಲೋಕೇಶ್ ತಿಳಿಸಿದರು.

ತಾಲ್ಲೂಕಿನ ಕಡಬ ಗ್ರಾಮದ ಸಮುದಾಯ ಭವನದಲ್ಲಿ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ ಪೋಷಕಾಂಶ ಮತ್ತು ಸಮಗ್ರ ಕೀಟ ನಿರ್ವಹಣೆ ಕುರಿತು ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ರೈತರು ತಮ್ಮ ಜಮೀನಿನ ಮಣ್ಣನ್ನು ಎರಡು ವರ್ಷಕ್ಕೆ ಒಮ್ಮೆ ಪರೀಕ್ಷೆ ಮಾಡಿಸಿ, ಇದರ ಆಧಾರದಲ್ಲಿ ಪ್ರಧಾನ, ಲಘು ಹಾಗೂ ಸೂಕ್ಷ್ಮ ಪೋಷಕಾಂಶ ಯಾವ ಪ್ರಮಾಣದಲ್ಲಿ ಅಗತ್ಯವಿದೆ ಎಂಬುದನ್ನು ವಿಜ್ಞಾನಿಗಳ ಸಲಹೆಯಂತೆ ಗೊಬ್ಬರಗಳನ್ನು ಹಾಕಿದರೆ ಅಧಿಕ ಇಳುವರಿಯನ್ನು ಪಡೆಯಬಹುದು. 

ಪ್ರಗತಿಪರ ರೈತ ಕನ್ನಡ ತಾಲ್ಲೂಕು ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಶಿವಲಿಂಗಯ್ಯ ಮಾತನಾಡಿ, ಯುವ ರೈತರು ದುಶ್ಚಟಗಳಿಗೆ ಬಲಿಯಾಗದೆ ಸಾವಯವ ಕೃಷಿ ಮಾಡಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಾವುಗಳು ಹಿಂದಿನ ಪದ್ದತಿಗಳನ್ನು ಅಳವಡಿಸಿಕೊಂಡು ಆಹಾರಗಳನ್ನು ಉತ್ಪಾದನೆ ಮಾಡಿ ಸೇವನೆ ಮಾಡಿದಾಗ ಮಾತ್ರ ಆರೋಗ್ಯದ ಮೇಲೆ ಖರ್ಚು ಮಾಡುವ ಹಣವನ್ನು ಉಳಿಸಬಹುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಎನ್.ಆರ್.ಎಲ್.ಐ.ಎಫ್.ಸಿ ಸಿಂಧೂ, ಆತ್ಮ ಯೋಜನೆಯ ಸಹಾಯಕ ತಾಂತ್ರಿಕ ಅಧಿಕಾರಿ ಹರೀಶ್, ಕೃಷಿ ಸಖಿಯರಾದ ಜಾನಕಿ, ಲಕ್ಷ್ಮೀ, ನೇತ್ರಾವತಿ, ವೀಣಾ, ಪಶುಸಖಿಯರಾದ ಪುಷ್ಪಲತ, ನಾಗಮಣಿ, ಶ್ವೇತ,ಪ್ರಗತಿಪರ ರೈತರು, ಒಕ್ಕೂಟದ ಸದಸ್ಯರು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...