ಗುಬ್ಬಿ | ಒಳ ಮೀಸಲಾತಿ ಜಾರಿಗೊಳಿಸಿ ಇಲ್ಲವೇ ಅಧಿಕಾರದಿಂದ ಕೆಳಗಿಳಿಯಿರಿ: ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಒತ್ತಾಯ

Date:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಆಯಾ ರಾಜ್ಯಗಳಿಗೆ ಆದೇಶ ನೀಡಿದ್ದರೂ ಕೂಡ ಇಲ್ಲಿಯವರೆಗೂ ಪರಿಶಿಷ್ಟರ ಮೀಸಲು ವರ್ಗೀಕರಣದ ಬಗ್ಗೆ ಆಸಕ್ತಿ ತೋರದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕು ಇಲ್ಲವೇ ಕುರ್ಚಿ ಖಾಲಿ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಒತ್ತಾಯಿಸಿದರು.

ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಡೆಯಲಿರುವ ಬೃಹತ್ ತಮಟೆ ಚಳುವಳಿಗೆ ತೆರಳಲು ಗುಬ್ಬಿ ಬಸ್ ನಿಲ್ದಾಣದ ಬಳಿ ಜಮಾಯಿಸಿ ತಮಟೆ ಬಡಿಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಿದ್ರಾ ಸ್ಥಿತಿಯಲ್ಲಿರುವ ಸರ್ಕಾರಕ್ಕೆ ತಮಟೆ ಚಳವಳಿ ನಡೆಸುವ ಮೂಲಕ ಎಚ್ಚರಿಸುವ ಕೆಲಸಕ್ಕೆ ಮುಂದಾಗಿದ್ದು ಎಚ್ಚರಗೊಂಡು ಈ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸದಿದ್ದರೆ ಬೀದಿಗಿಳಿದು ಹೋರಾಟಕ್ಕೆ ಮುಂದಾಗಲಾಗುವುದು ಎಂದು ಎಚ್ಚರಿಕೆ ನೀಡಿದರು.

ದಲಿತ ಮುಖಂಡ ಜಿ.ಎಚ್.ಜಗನ್ನಾಥ್ ಮಾತನಾಡಿ ಮಾನ್ಯ ಸರ್ವೋಚ್ಚ ನ್ಯಾಯಾಲಯ ಕಳೆದ ಮೂರು ತಿಂಗಳ ಹಿಂದೆಯೇ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ಕುರಿತು ಪರಿಶಿಷ್ಟರಿಗೆ ನ್ಯಾಯ ದೊರಕಿಸಿ ಕೊಡುವಂತೆ ಆದೇಶಿಸಿದ್ದರೂ ಕೂಡ ಇಲ್ಲಿಯವರೆಗೂ ಯಾವುದೇ ಕ್ರಮಕ್ಕೆ ಮುಂದಾಗದ ಸರ್ಕಾರದ ವಿರುದ್ಧ ಇಂದು ಜಿಲ್ಲಾದ್ಯಂತ ತಮಟೆ ಚಳವಳಿ ನಡೆಸುವ ಮೂಲಕ ಎಚ್ಚರಿಕೆಯ ಸಂದೇಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಸಂಸ ತಾಲ್ಲೂಕು ಸಂಚಾಲಕ ಕಡಬ ಶಂಕರ್ ಮಾತನಾಡಿ ತುಳಿತಕ್ಕೆ ಒಳಗಾದ ಸಮುದಾಯದಲ್ಲಿ ತೀರಾ ನಿಕೃಷ್ಟ ಬದುಕು ಕಂಡ ಮಾದಿಗ ಸಮಾಜ ರಾಜ್ಯದಲ್ಲಿ ಅತಿ ಹೆಚ್ಚು ಸಂಖ್ಯೆಲ್ಲಿದ್ದಾರೆ. ಈ ಒಳಮೀಸಲಾತಿ ಜಾರಿಯಾದಲ್ಲಿ ಮುಖ್ಯವಾಹಿನಿಗೆ ಬರಲು ಅನುವು ಆಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಂತೆ ತಳಮಟ್ಟದ ನಮ್ಮ ಸಮುದಾಯ ಸ್ವಾಭಿಮಾನಿ ಜೀವನಕ್ಕೆ ಈ ಮೀಸಲಾತಿ ಜಾರಿಯಾಗಬೇಕು. ಕೂಡಲೇ ರಾಜ್ಯ ಸರ್ಕಾರ ನ್ಯಾಯಾಲಯ ಆದೇಶದಂತೆ ಯಥಾವತ್ತಾಗಿ ಜಾರಿ ಮಾಡಿ ದಲಿತರ ಬದುಕಿಗೆ ಅರ್ಥ ನೀಡಿ ಎಂದು ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಈಶ್ವರಯ್ಯ, ದೇವರಾಜು, ಕಲ್ಲೇಶ್, ನಟರಾಜು,ರವಿಕುಮಾರ್, ಯೋಗೀಶ್, ಮಲ್ಲಿಕಾರ್ಜುನಯ್ಯ, ರಂಗಸ್ವಾಮಿ, ರಾಮಚಂದ್ರ, ಸೋಮಶೇಖರ್, ರವಿಕುಮಾರ್ ಕಲ್ಲೂರ್, ಯೋಗೀಶ್, ಸಂತೋಷ್, ಭರತ್ ಹಾಗೂ ಹಾಗೂ ಇನ್ನಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...