ಗುಬ್ಬಿ | ಅಸಮರ್ಪಕ ವಿದ್ಯುತ್ ಸರಬರಾಜು : ಸುರುಗೇನಹಳ್ಳಿ, ಮಲ್ಲಪ್ಪನಹಳ್ಳಿ ಫೀಡರ್ ಭಾಗದ ರೈತರಿಂದ ಬೆಸ್ಕಾಂ ಕಚೇರಿ ಮುತ್ತಿಗೆ

Date:

ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಜಡಿದು ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಬೆಸ್ಕಾಂ ಕಚೇರಿ ಮುಂದೆ ಜಮಾಯಿಸಿದ ನೂರಾರು ರೈತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಬಾಗಿಲು ಹಾಕಿ ಸುಮಾರು ಮೂರು ಗಂಟೆ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ವಿದ್ಯಾ ಸಾಗರ್, ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರ್ಕಾರಿ ಪೋನ್ ಕೂಡಾ ಸ್ವಿಚ್ ಆಫ್ ಮಾಡುತ್ತಾರೆ. ಸಮಸ್ಯೆ ಆಲಿಸುವವರೇ ಹೀಗೆ ಮಾಡಿದರೆ ಸಾಲ ಮಾಡಿಕೊಂಡು ಹಾಕಿಸಿದ ಬೋರ್ ವೆಲ್ ವಿಫಲವಾದರೆ ರೈತರು ಸಾಲ ತೀರಿಸಲಾಗದೆ ಮನೆ ತೋಟ ಮಾರಿಕೊಳ್ಳುವ ದುಸ್ಥಿತಿ ಎದುರಾಗಿದೆ. ಬೇಸಿಗೆ ಆರಂಭದಲ್ಲೇ ಕರೆಂಟ್ ಸಮಸ್ಯೆ ರೈತಾಪಿ ವರ್ಗವನ್ನು ಕಂಗಾಲಾಗಿಸಿದೆ. ಸುಮಾರು 20 ಗ್ರಾಮಕ್ಕೆ ಏಕಾಏಕಿ ಕರೆಂಟ್ ನೀಡುವುದು ಕಡಿಮೆ ಆಗಿದೆ. ಓವರ್ ಲೋಡ್ ಎಂಬ ಪದ ಕೇಳಿ ಜಿಗುಪ್ಸೆ ಬಂದಿದೆ. ಅರ್ಧ ಗಂಟೆ ಕರೆಂಟ್ ಬಂದರೆ ತೋಟ ಉಳಿಯುವುದು ಕಷ್ಟ. ತೆಂಗು ಅಡಿಕೆ ನಂಬಿದ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಲಪ್ಪನಹಳ್ಳಿ ಭಾಗದಲ್ಲಿ ಚಿರತೆ ಕಾಟವಿದೆ. ರಾತ್ರಿ ವೇಳೆ ಇಡೀ ಗ್ರಾಮವೇ ಕಗ್ಗತ್ತಲಲ್ಲಿ ಇದ್ದು ಸಾಕು ಪ್ರಾಣಿಗಳನ್ನು ಚಿರತೆ ಹೊತ್ತೊಯ್ದ ಘಟನೆ ಸಾಕಷ್ಟು ನಡೆದಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೇಳಿದರೆ ಸಿಸಿ ಕ್ಯಾಮೆರಾ ಹಾಕಿಸಿಕೊಳ್ಳಿ ಅನ್ನುತ್ತಾರೆ. ನಾವೇನು ಮಾಡಬೇಕು ಎಂಬುದು ಅರಿಯದಾಗಿದೆ. ಎಲ್ಲದಕ್ಕೂ ವಿದ್ಯುತ್ ಸಮಸ್ಯೆ ಮೂಲವಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಎಲ್ಲಾ ಕರೆಂಟ್ ಸಮಸ್ಯೆಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ನೀಡಬೇಕು. ಅಲ್ಲಿಯವರೆವಿಗೂ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

1001041740

ಗ್ರಾಪಂ ಮಾಜಿ ಸದಸ್ಯ ಗಂಗಾಧರ್ ಮಾತನಾಡಿ ಸರ್ಕಾರ ಏಳು ಗಂಟೆ ತ್ರೀ ಫೇಸ್ ಕರೆಂಟ್ ಎಂದು ಹೇಳಿತ್ತು. ಆದರೆ ಬೇಸಿಗೆ ಹುಟ್ಟುವ ಮುನ್ನವೇ ಕರೆಂಟ್ ಖೋತಾ ಎದುರಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮೂರು ತಾಸು ಪ್ರತಿಭಟನೆ ನಡೆಸಿದರೂ ಇಲ್ಲಿ ಕೇಳುವವರಿಲ್ಲ. ಸಹಾಯಕ ಅಭಿಯಂತರರು ಪೋನ್ ಕರೆ ಸ್ವೀಕರಿಸಲಿಲ್ಲ. ಈಗ ಬಂದೆ ಎನ್ನುತ್ತಲೇ ಮೂರು ತಾಸು ಕಳೆದಿದ್ದಾರೆ. ಕಚೇರಿ ಬಾಗಿಲು ಹಾಕಿದರೂ ಯಾಕೆ ಎಂದು ಕೇಳುವವರಿಲ್ಲ ಎಂದರೆ ಬೆಸ್ಕಾಂ ಅಧಿಕಾರಿಗಳ ಕಾರ್ಯ ವೈಖರಿ ಮೆಚ್ಚುವಂತದ್ದು ಎಂದು ವ್ಯಂಗ್ಯವಾಡಿದರು.

ಉಚಿತ ಕರೆಂಟ್ ರೈತರಿಗೆ ಬೇಕಿಲ್ಲ. ನಮ್ಮ ತೆರಿಗೆ ಹಣದಲ್ಲಿ ವೇತನ ಪಡೆಯುವ ಬೆಸ್ಕಾಂ ಅಧಿಕಾರಿಗಳು ರೈತರ ಕೆಲಸ ಮಾತ್ರ ಮಾಡುತ್ತಿಲ್ಲ. ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ದಿನವಿಡೀ ಧರಣಿ ನಡೆಸಿದರೂ ರೈತರನ್ನು ಕಡೆಗಣಿಸುವ ಕೆಲಸ ಅಧಿಕಾರಿಗಳು ಮಾಡಬಾರದು. ಅರಣ್ಯ ಪ್ರದೇಶದ ಪಕ್ಕದ ತೋಟದ ಮನೆಯಲ್ಲಿ ಚಿರತೆ ಕಾಟ ಹೆಚ್ಚಿದೆ. ಹಸು ಕರು, ಮೇಕೆ, ಕುರಿ, ನಾಯಿ ಹೊತ್ತೊಯ್ದ ಚಿರತೆ ರೈತರ ಮಕ್ಕಳನ್ನು ಬಲಿ ಪಡೆಯುವ ಕಾಲ ಸನ್ನಿಹಿತವಾಗಿದೆ. ಇದಕ್ಕೆ ಬೆಸ್ಕಾಂ ಅಧಿಕಾರಿಗಳು ನೇರ ಹೊಣೆ ಆಗಬೇಕು ಎಂದು ಕಿಡಿಕಾರಿದರು.

ಮೂರು ತಾಸು ಕಳೆದ ಬಳಿಕ ಸ್ಥಳಕ್ಕೆ ಬಂದ ಪೊಲೀಸರ ಜೊತೆ ಪ್ರತಿಭಟನಾಕಾರರು ವಾಗ್ವಾದಕ್ಕೆ ಇಳಿದರು. ನಂತರ ಧಾವಿಸಿದ ಬೆಸ್ಕಾಂ ಎಇಇ ಜಲದೀಶ್ ಅವರ ವರ್ತನೆಗೆ ಸಿಡಿಮಿಡಿಗೊಂಡ ಪ್ರತಿಭಟನಾಕಾರರು ಆಕ್ರೋಶ ಭರಿತ ಮಾತಿನ ಚಕಮಕಿ ನಡೆಸಿದರು. ನಂತರ ತಿಳಿಯಾದ ವಾತಾವರಣದಲ್ಲಿ ಚರ್ಚಿಸಿ ಸಮಸ್ಯೆ ಆಲಿಸಿದರು. ಎರಡು ಫೀಡರ್ ಗೆ ಸಮರ್ಪಕ ಕರೆಂಟ್ ತಂದು ಪ್ರತಿ ದಿನ ಮೂರು ತಾಸು ತ್ರೀ ಫೇಸ್ ಕರೆಂಟ್ ಕೊಡುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚೇತನ್ ನಾಯಕ್, ನರಸಿಂಹರಾಜು, ರಂಗಸ್ವಾಮಿ, ಬಸವರಾಜು, ಮುಳ್ಕಟ್ಟಯ್ಯ, ಮೂರ್ತಿ, ಪ್ರಕಾಶ್, ಕೃಷ್ಣಪ್ಪ, ಮಲ್ಲಿಕಾರ್ಜುನ, ಪಾತಯ್ಯ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...