ಗುಬ್ಬಿ | ಹಲವು ಬೇಡಿಕೆ ಈಡೇರಿಕೆಗೆ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

Date:

ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘ ಎರಡನೇ ಹಂತದ ಮುಷ್ಕರ ಆರಂಭಿಸಿದ್ದು ರಾಜ್ಯ ಸಂಘದ ಆದೇಶದಂತೆ ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ನಾಲ್ಕು ತಿಂಗಳ ಹಿಂದೆ ಮೊದಲ ಹಂತದ ಮುಷ್ಕರ ನಡೆಸಿದ್ದ ಸಂಘ ಎಂಟು ದಿನದಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿ ಮುಷ್ಕರ ತಾತ್ಕಾಲಿಕ ಅಂತ್ಯಗೊಳಿಸಲಾಗಿತ್ತು. ನಂತರ ನಾಲ್ಕು ತಿಂಗಳು ಕಳೆದರೂ ಯಾವುದೂ ನೆರವೇರದ ಹಿನ್ನಲೆ ಎರಡನೇ ಹಂತದಲ್ಲಿ ಮುಷ್ಕರ ಆರಂಭಿಸಿದ್ದು ನಮ್ಮ 30 ದಿನಗಳ ರಜೆಯ ಜೊತೆ ಧರಣಿ ನಡೆಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಪಿ.ಎಸ್. ಸುಮತಿ ಮಾತನಾಡಿ ಮೂಲಭೂತ ಸೌಕರ್ಯ ನೀಡದೆ ನಮ್ಮನ್ನು ದುಡಿಸಿಕೊಳ್ಳುವ ಸರ್ಕಾರ ಸುಸಜ್ಜಿತ ಕಚೇರಿ, ಗುಣಮಟ್ಟದ ಮೊಬೈಲ್, ಸಿಯುಜಿ ಸಿಮ್, ಡೇಟಾ, ಲ್ಯಾಪ್ ಟಾಪ್, ಸ್ಕ್ಯಾನರ್, ಪ್ರಿಂಟರ್ ಹೀಗೆ ಯಾವುದೇ ಅನುಕೂಲ ಮಾಡಿಕೊಟ್ಟಿಲ್ಲ. ಆದರೆ ಕಂದಾಯ ಇಲಾಖೆಯ 21 ಆ್ಯಪ್ ಬಳಸಿ ಸಾರ್ವಜನಿಕ ಕೆಲಸ ಮಾಡಬೇಕಿದೆ. ಈ ರೀತಿ ದುಡಿಸಿಕೊಂಡರೂ ತಾಂತ್ರಿಕ ಕೆಲಸದ ಶ್ರೇಣಿಯಲ್ಲಿ ವೇತನ ನೀಡಿಲ್ಲ. ಯಾವುದೇ ಪದೋನ್ನತಿ ನೀಡಿಲ್ಲ. ಗ್ರಾಮೀಣ ಜನರ ಮಧ್ಯೆ ಕೆಲಸ ಮಾಡುವ ಗ್ರಾಮ ಆಡಳಿತ ಅಧಿಕಾರಿಗಳ ಭದ್ರತೆಗೆ ಸರ್ಕಾರ ಯಾವ ಕಾಳಜಿ ತೋರಿಲ್ಲ. ಪತಿ ಪತ್ನಿಯ ವರ್ಗಾವಣೆ ಕೂಡಾ ಮಾಡುತ್ತಿಲ್ಲ ಎಂದು ತಮ್ಮ ಕಷ್ಟದ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಜಿ.ಎಸ್.ಅಭಿಷೇಕ್ ಮಾತನಾಡಿ ಒತ್ತಡ ಕೆಲಸ ಮಾಡುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಡಿ ದರ್ಜೆಗಿಂತ ಕೀಳಾಗಿ ನೋಡಲಾಗುತ್ತಿದೆ. ಯಾವುದೇ ಒತ್ತಡ ಕೆಲಸವನ್ನು ನಮ್ಮ ಹೆಗಲಿಗೆ ಹೊರಿಸಿ ಸಾರ್ವಜನಿಕರ ಜೊತೆ ಸಂಘರ್ಷಕ್ಕೆ ಇಳಿಯುವ ಹಂತ ತಲುಪಿದ್ದೇವೆ. ಈ ಸಮಯ ನಮ್ಮಗಳ ಮೇಲೆ ನಡೆಯುವ ದೈಹಿಕ ಹಲ್ಲೆಗೆ ಯಾರು ಹೊಣೆ. ಈ ಜೊತೆಗೆ ಸೂಕ್ತ ಸಲಕರಣೆ ಒದಗಿಸದೇ ಕೆಲಸವನ್ನು ಒತ್ತಡದಲ್ಲಿ ಮಾಡುವಂತೆ ಮಾಡಿ ಆರೋಗ್ಯ ಕಳೆದುಕೊಳ್ಳುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬಗ್ಗೆ ಸರ್ಕಾರ ಗಮನ ಹರಿಸಬೇಕು. 21 ಆ್ಯಪ್ ಕೆಲಸದ ಮಧ್ಯೆ ನಡೆಯುವ ಜಮಾಬಂದಿ, ದಪ್ತರ್, ಪ್ರೋಟೋಕಾಲ್, ಬೆಳೆ ಹಾನಿ ಸಮೀಕ್ಷೆ ಹೀಗೆ ಹಲವು ಕೆಲಸ ಕಡಿತ ಗೊಳಿಸಿ ಒತ್ತಡ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷರಾದ ತಾರಚಂದ್, ಅಪ್ಸರ, ಗೌರವಾಧ್ಯಕ್ಷ ಶಿವಕುಮಾರಸ್ವಾಮಿ, ಸಂಘಟನಾ ಕಾರ್ಯದರ್ಶಿಗಳಾದ ಆನಂದ್, ಶಶಿಕುಮಾರ್, ಪ್ರಸನ್ನ ಸೇರಿದಂತೆ ತಾಲ್ಲೂಕಿನ 50 ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...