ಗುಬ್ಬಿ | ಜಿಡಿಪಿ ಪಟ್ಟಿಯಲ್ಲಿ ಭಾರತ ನಾಲ್ಕನೇ ದೇಶ : ನಿರ್ಮಲಾನಂದನಾಥ ಸ್ವಾಮೀಜಿ

Date:

ಭಾರತ ದೇಶ ಜಿಡಿಪಿಯಲ್ಲಿ ನಾಲ್ಕನೇ ಸ್ಥಾನವಿದ್ದು 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಗುಬ್ಬಿ ತಾಲೂಕಿನ ಕೆ ಜಿ ಟೆಂಪಲ್ ನಲ್ಲಿ ಕಾಳಿಕಂಟೇಶ್ವರಿ ಪತ್ತಿನ ಸಹಕಾರ ಸಂಘ ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮಾಂತರ ಭಾಗದಲ್ಲಿ ಸಹಕಾರ ಸಂಘ ರಚನೆ ಗ್ರಾಮೀಣ ರೈತರ ಆರ್ಥಿಕ ಸಬಲತೆಗೆ ಕಾರಣವಾಗಲಿದೆ. ಆರ್ಥಿಕ ವಹಿವಾಟು ಬಡ ರೈತರ ಸಂಕಷ್ಟಕ್ಕೆ ನೆರವಾಗಲಿ ಎಂದು ಆಶಿಸಿದರು.

ಅಮೆರಿಕಾದಂತಹ ದೇಶಗಳು ನಮ್ಮ ದೇಶದ ಮೇಲೆ ಸವಾರಿ ಮಾಡಲು ಕಾರಣವೇ ಆರ್ಥಿಕ ಹಿನ್ನಡೆ ಕಾರಣವಿತ್ತು. ಈಗ ಅಬಿವೃದ್ದಿ ಪಥದಲ್ಲಿ ಭಾರತ ದಾಪುಗಾಲು ಹಾಕಿದೆ. ಆರ್ಥಿಕವಾಗಿ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ಸಹ ಉತ್ತಮ ಮಾರ್ಗವಾಗಿದೆ. ನಮ್ಮ ದೇಶದಲ್ಲಿ ಶೇ 50 ರಷ್ಟು ರೈತರು ದುಡಿಮೆ ಮಾಡುತ್ತಿದ್ದರು. ಅವರ ಆರ್ಥಿಕತೆಯ ಪ್ರಮಾಣ ಮಾತ್ರ ಶೇ.18 ರಷ್ಟು ಮಾತ್ರ ಇತ್ತು. ಈ ನಿಟ್ಟಿನಲ್ಲಿ ಸಹಕಾರ ಸಂಘ ರೈತರು ಬೆಳೆಯುವಂತಹ ಕೆಲಸಕ್ಕೆ ಕೈ ಹಾಕಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾವೇ ಬೆಳೆದ ಬೆಳೆಗಳನ್ನು ಬಳಸಿಕೊಂಡು ಉಪ ಉತ್ಪನ್ನಗಳನ್ನು ತಯಾರಿಸುವಂತಹ ಕೆಲಸಗಳು ನಡೆಯಬೇಕಾಗಿದೆ. ಇನ್ನೂ
ರೈತರು ಈ ದೇಶದ ಬೆನ್ನೆಲುಬಾಗಿದ್ದು ಯಾವುದೇ ಕಾರಣಕ್ಕೂ ತಮ್ಮ ಭೂಮಿಯನ್ನ ಮಾರಾಟ ಮಾಡುವಂತಹ ತಪ್ಪನ್ನು ಯಾರೂ ಮಾಡಬೇಡಿ.
ರೈತರು ಕಷ್ಟಪಟ್ಟು ದುಡಿಯುತ್ತಿದ್ದು ಅದನ್ನು ಉಳಿಸಿಕೊಳ್ಳುವ ಕೆಲಸವನ್ನು ಸಹ ಮಾಡಬೇಕಾಗಿದೆ. ಗ್ರಾಮಾಂತರದಲ್ಲಿ ಇರುವಂತಹ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಸಹ ಮಾಡಬೇಕಿದ್ದು
ಉತ್ತಮವಾದ ಆಹಾರ ಮೂಲಕ ಆರೋಗ್ಯ ಸಂಪಾದಿಸಿ ಎಂದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮಾತನಾಡಿ ಈ ದೇಶದ ರೈತರು ಈ ದೇಶದ ಜೀವನಾಡಿಯಾಗಿದ್ದು ಅವರನ್ನು ಗೌರವಿಸುವಂತಹ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ರೈತರು ಬಲಿಷ್ಠರಾದಾಗ ಮಾತ್ರ ದೇಶವು ಸಹ ಬಲಿಷ್ಠವಾಗುತ್ತದೆ ನಮ್ಮ ಹೋರಾಟಗಳು ನಿರಂತರವಾಗಿದ್ದರು ರೈತರು ಯಾವುದೇ ಕಾರಣಕ್ಕೂ ರೈತ ಜೀವನದಿಂದ ವಿಮುಕ್ತಿ ಆಗದೆ ಅದರಲ್ಲಿಯೇ ಮುಂದುವರಿಯಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಾಖಾಮಠದ ಮಂಗಳನಾಥ ಸ್ವಾಮೀಜಿ, ಅರೆ ಶಂಕರ ಮಠದ ಸಿದ್ದರಾಮಯ್ಯ ಚೈತನ್ಯ ಸ್ವಾಮೀಜಿ, ಶಾಸಕ ಎಸ್.ಆರ್.ಶ್ರೀನಿವಾಸ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ.ಗೋವಿಂದರಾಜು, ತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಎನ್.ವೆಂಕಟೇಗೌಡ, ಡಾ.ನಾಗಭೂಷಣ್ ಸೇರಿದಂತೆ ಸ್ಥಳೀಯ ಮುಖಂಡರುಗಳು, ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...