ಗುಬ್ಬಿ | ತೆಂಗಿನಲ್ಲಿ ಇಳುವರಿಯನ್ನು ಹೆಚ್ಚಿಸಲು ಸಮಗ್ರ ನಿರ್ವಹಣೆ ಅಗತ್ಯ : ಪ್ರಾಧ್ಯಾಪಕ ಡಾ.ಬಿ.ಆಂಜನೇಯ ರೆಡ್ಡಿ

Date:

ತೆಂಗು ಕೃಷಿಯಲ್ಲಿ ಇಳುವರಿ ಹೆಚ್ಚಿಸಲು ಹಲವು ಕ್ರಮಗಳನ್ನು ರೈತರು ಕೈಗೊಂಡಾಗ ಮಾತ್ರ ಇಳುವರಿಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಬಹುದು ಎಂದು ಸಸ್ಯರೋಗಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಆಂಜನೇಯ ರೆಡ್ಡಿ ತಿಳಿಸಿದರು

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ಪ್ರಾದೇಶಿಕ ತೋಟಗಾರಿಕಾ ಸಂಶೋದನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ಭಾರತೀಯ ಸಾಂಬಾರು ಸಂಶೋಧನಾ ಸಂಸ್ಥೆ, ಕೋಝಿಕ್ಕೋಡು ಹಾಗೂ ಐಡಿಎಫ್ ಸುಜೀವನ ಒಕ್ಕೂಟ ಇವರ ಸಹಯೋಗದಲ್ಲಿ ಆಯೋಜಿಸಿದ್ದ ತೋಟಗಾರಿಕೆಯಲ್ಲಿ ನೂತನ ತಾಂತ್ರಿಕತೆಗಳ ಮೂಲಕ ಪರಿಶಿಷ್ಟ ಜಾತಿ ರೈತರ ಬಲವರ್ಧನೆ ಕುರಿತು ತರಬೇತಿ ಮತ್ತು ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತೆಂಗು ಬೆಳೆಯಲ್ಲಿ ಹಲವು ರೋಗಗಳಿದ್ದು ಅವುಗಳ ನಿರ್ವಹಣೆಗೆ ಸರಿಯಾಗಿ ನೀರು ಮತ್ತು ಗೊಬ್ಬರವನ್ನು ನೋಡಿದಾಗ ಮಾತ್ರ ಹಲವು ರೋಗಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ತೆಂಗಿನಲ್ಲಿ ಸುಳಿ ಕೊಳೆ ರೋಗ ತಡೆಗಟ್ಟಲು ಶೇ.1ರ ಬೋರ್ಡೋ ದ್ರಾವಣ ಅಥವಾ ಶೇ.0.3 ತಾಮ್ರದ ಆಕ್ಸ್ ಕ್ಲೋರೈಡ್ ದ್ರಾವಣದಿಂದ ರೋಗಗ್ರಸ್ತ ಭಾಗವನ್ನ ಉಪಚರಿಸಲು ಸಲಹೆ ನೀಡಿದ ಅವರು ನುಸಿ ಕೊಳೆ ರೋಗಕ್ಕೆ ಹುಳು ತಡೆಯಲು ಬೇವಿನ ಹಿಂಡಿ ಬಳಸಿ ತೆಂಗಿನಮರಗಳ ಸುತ್ತ ಹಾಕುವ ಮೂಲಕ ಕೊಳೆ ರೋಗಕ್ಕೆ ಕಡಿವಾಣ ಹಾಕಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಸಿಕೆರೆ ಸಹ ಪ್ರಾಧ್ಯಾಪಕ ಡಾ.ಎಸ್.ಕೆ.ಜಗದೀಶ್ ಮಾತನಾಡಿ ರೈತರು ತೆಂಗಿನ ತೋಟಗಳಿಗೆ ಮಣ್ಣನ್ನು ಒಡೆಯ ಬಾರದು, ಹೊಸ ಮಣ್ಣು ಹಾಕುವುದರಿಂದ ತೆಂಗಿನಲ್ಲಿ ರೋಗಗಳು ಹೆಚ್ಚುತ್ತವೆ. ತೋಟದಲ್ಲಿ ನೀರು ನಿಲ್ಲದಂತೆ ಬಸಿಗಾಲುವೆ ಮಾಡಬೇಕು. ವಿಜ್ಞಾನಿಗಳು ಶಿಫಾರಸ್ಸು ಮಾಡಿದ ರಸಗೊಬ್ಬರ ಮತ್ತು ಸಾವಯವ ಗೊಬ್ಬರಗಳನ್ನು ಹಾಕಬೇಕು ಎಂದು ತಿಳಿಸಿದರು.

ಬೆಂಗಳೂರು ಕೇಂದ್ರದ ಕೃಷಿ ಕೀಟಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಬಿ. ದೊಡ್ಡಬಸಪ್ಪ ತೆಂಗಿನಲ್ಲಿ ಬರುವ ಕೀಟಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿ, ತೆಂಗಿನಲ್ಲಿ ಪ್ರಮುಖವಾಗಿ ಕಪ್ಪು ತಲೆ ಹುಳು, ಕೆಂಪು ಮೂತಿ ಹುಳು, ನುಸಿ ಕೀಟಗಳ ನಿರ್ವಹಣೆಗೆ ಸೂಕ್ತ ಸಲಹೆ ನೀಡಿದರು.

ಕಾರ್ಯಕ್ರಮ ಸಂಯೋಜಕರಾದ ಪ್ರಾಧ್ಯಾಪಕ ಡಾ.ಪಿ.ಎಂ.ಮುನಿಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಬಡತನ ರೇಖೆಗಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ ಯವರಿಗೆ ಸೇರಿದ ರೈತರ ಬಲವರ್ಧನೆಗಾಗಿ ಇಂತಹ ಕಾರ್ಯಕ್ರಮಗಳು ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಮ್ಮ ಒಕ್ಕೂಟದ 50 ಜನ ಪರಿಶಿಷ್ಟ ಜಾತಿಯ ಸಣ್ಣ ರೈತರಿಗೆ ತಲಾ 50 ತೆಂಗಿನ ಗಿಡ ಮತ್ತು ತಲಾ 50 kg ಯ 3 ಚೀಲ ಎರಹುಳು ಗೊಬ್ಬರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಐಡಿಎಫ್ ಸಹಜೀವನ ಒಕ್ಕೂಟದ ಅಧ್ಯಕ್ಷ ಎಂ.ಎನ್.ಕುಂಭಯ್ಯ, ಜೀವನೋಪಾಯ ಅಧಿಕಾರಿ ಬಿ.ಟಿ.ಗಿರೀಶ್ ಕುಮಾರ್, ಮುದ್ದಗಂಗಯ್ಯ, ರೈತ ಉತ್ಪಾದಕರ ಕಂಪನಿಯ ಸಿಇಒ ಕುಮಾರ್, ಬಸವರಾಜು, ಲೋಕೇಶ್, ಸಿಬ್ಬಂದಿಗಳು ಹಾಗೂ ತುಮಕೂರು ಮತ್ತು ಗುಬ್ಬಿ ತಾಲ್ಲೂಕಿನ ರೈತ ಫಲಾನುಭವಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...