ಗುಬ್ಬಿ | ಜೆಜೆಎಂ ಕಾಮಗಾರಿ ಕಳಪೆ ಮಾಡಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಯಾವ ಗ್ರಾಮಕ್ಕೆ ತೆರಳಿದರೂ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಬಗ್ಗೆ ದೂರುಗಳು ಬರುತ್ತಿವೆ. ಯಾರೇ ಆಗಿರಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಿ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಹೆಚ್ಚು ಕಾಮಗಾರಿ ವಹಿಸಿಕೊಂಡು ಸತೀಶ್, ರಕ್ಷಿತ್ ಎಂಬ ಗುತ್ತಿಗೆದಾರರ ಬಗ್ಗೆ ಇಂಜಿನಿಯರ್ ಪ್ರಸ್ತಾಪ ಮಾಡಿದಾಗ ಯಾರೇ ಇರಲಿ ಕೆಲಸ ಕಳಪೆ ಮಾಡಿದ್ದರೆ ಬ್ಲಾಕ್ ಲಿಸ್ಟ್ ಸೇರಿಸಬೇಕು ಹಾಗೆಯೇ ಬಿಲ್ ಮಾಡಬಾರದು ಎಂದು ತಾಕೀತು ಮಾಡಿದರು.

ಮನೆ ಮನೆಗೆ ನಳ ಸಂಪರ್ಕ ಕಾಮಗಾರಿ ಪೂರ್ಣ ಗೊಂಡ ಬಗ್ಗೆ ಚರ್ಚೆ ಮಾಡಿದ ಶಾಸಕರು ಇಂಜಿನಿಯರ್ ಮೇಲೆ ಹರಿಹಾಯ್ದರು. ಬೆಳಿಗ್ಗೆ ಎದ್ದರೆ ನಿಮ್ಮಗಳ ಮೇಲೆ ದೂರು ಮೊಬೈಲ್ ಕರೆಯಲ್ಲಿ ಬರುತ್ತಿವೆ. ಮೊದಲ ಹಂತದಲ್ಲಿ ಸಾಕಷ್ಟು ಕಳಪೆ ದೂರು ಕೇಳಿ ಬಂದಿತ್ತು. ಎರಡನೇ ಮತ್ತು ಮೂರನೇ ಹಂತದಲ್ಲಿ 278 ಕಾಮಗಾರಿ ನಡೆದಿದೆ. 13 ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರ ಮಾಡಿರುವ ಮಾಹಿತಿ ಇದೆ. ಆದರೆ ಕಾಮಗಾರಿ ಬಗ್ಗೆ ಇರುವ ದೂರು ಸರಿಪಡಿಸಿ ಹಸ್ತಾಂತರ ಮಾಡಬೇಕು. ಈ ಬಗ್ಗೆ ತಾಪಂ ಇಓ ಸ್ಥಳ ಪರಿಶೀಲಿಸಿ ನಿರ್ಧರಿಸಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂಚಾಯತ್ ರಾಜ್ ಕುಡಿಯುವ ನೀರು ಪೂರೈಕೆ ಅಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಅಂತಿಮ ನಿರ್ಧಾರ ಮಾಡಲಾಗುವುದು. ಕಳಪೆ ದೂರು ಬರುವುದು ಗಮನಿಸಿದರೆ ಎಲ್ಲೂ ಕೂತು ಎಸ್ಟಿಮೇಟ್ ರೆಡಿ ಮಾಡುತ್ತೀರಿ ಅಂತ ಅನಿಸುತ್ತೆ ಎಂದು ಕಿಡಿಕಾರಿದ ಶಾಸಕರು 43 ಲಕ್ಷ ರೂಗಳ ದುರಸ್ಥಿ ಕಾರ್ಯದ ಕ್ರಿಯಾ ಯೋಜನೆ ತಯಾರಿಸಿದ. ಇಂಜಿನಿಯರ್ ಗಳು ರಸ್ತೆಗಳನ್ನು ಪೂರ್ಣ ಗೊಳಿಸಲು ಮೀನಾ ಮೇಷ ಎಣಿಸುತ್ತೀರಿ. ಈ ಜೊತೆಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ಅಭಿವೃದ್ದಿ ಕಾಮಗಾರಿ ಗುದ್ದಲಿಪೂಜೆ ಮಾಡಿ ಕೆಲಸ ಮಾಡಲು ವಿಳಂಬ ಅನುಸರಿಸಿರುವುದು ಸಾರ್ವಜನಿಕರಲ್ಲಿ ಬೇರೆ ಆಲೋಚನೆಗೆ ಅವಕಾಶ ಆಗುತ್ತದೆ. ನಮ್ಮಗಳನ್ನು ಜನರು ನಿಂದಿಸುವ ಮುನ್ನ ಕೆಲಸ ಆರಂಭಿಸಿ ಗುಣಮಟ್ಟದ ರಸ್ತೆ ರೆಡಿ ಮಾಡಿ ಎಂದು ತಾಕೀತು ಮಾಡಿದರು.

ದೊಡ್ಡಗುಣಿ ಶಾಲೆಗೆ ಬಂದ 65 ಲಕ್ಷ ರೂಗಳನ್ನು ವಾಪಸ್ ಸರ್ಕಾರಕ್ಕೆ ಬರೆದ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತೊಂದು ಇಲಾಖೆ ಮೂಲಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಶಾಲೆ ಅಭಿವೃದ್ದಿ ಮಾಡಬೇಕಿತ್ತು ಎಂದು ತಿಳಿಸಿದ ಅವರು ಗಣಿಬಾಧಿತ ಪ್ರದೇಶಕ್ಕೆ ಇರುವ ಮೀಸಲು ಹಣದ ಕ್ರಿಯಾ ಯೋಜನೆ ಸಿದ್ಧವಾಗಿ ಆರು ವರ್ಷ ಕಳೆದರೂ ಕೆಲಸ ನಡೆದಿಲ್ಲ. ಶಾಲೆ ಕಟ್ಟಡ, ಸರ್ಕಾರಿ ಆಸ್ಪತ್ರೆ, ಬಾಧಿತ ಹಳ್ಳಿಗಳಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಹಣ ಬಿಡುಗಡೆ ಆಗುತ್ತಿಲ್ಲ. ಅಧಿಕಾರಿಗಳು ಕೆಲಸಗಳ ಕಡತವನ್ನು ಫಾಲೋಪ್ ಮಾಡಬೇಕು ಎಂದು ಸೂಚನೆ ನೀಡಿ ಆರೋಗ್ಯ ಇಲಾಖೆ ಸಮಸ್ಯೆ ಆಲಿಸಿ 68 ಡೆಂಗ್ಯೂ ಪ್ರಕರಣಗಳು, 870 ಮಂದಿಗೆ ನಾಯಿ ಕಡಿತ ಪ್ರಕರಣ ಬಗ್ಗೆ ಮಾಹಿತಿ ಪಡೆದರು. ಗುಬ್ಬಿಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳಿವೆ. ಮತ್ತೊಂದು ಅವಶ್ಯ ಯಂತ್ರ ಅಳವಡಿಸಲು ಸೂಚಿಸಿ ಮೂವರು ವೈದ್ಯರ ನೇಮಕಕ್ಕೆ ಅಧಿಕಾರಿಗಳ ಬಳಿ ಚರ್ಚಿಸುವ ಬಗ್ಗೆ ತಿಳಿಸಿದರು.

ಸಭೆಯಲ್ಲಿ ತಾಪಂ ಇಓ ಶಿವಪ್ರಕಾಶ್, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವರದಿ – ಎಸ್. ಕೆ. ರಾಘವೇಂದ್ರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...