ಗುಬ್ಬಿ | ಜೆಜೆಎಂ ಕಾಮಗಾರಿ ಪ್ರಗತಿ ಪರಿಶೀಲನೆ : ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ್ ತರಾಟೆ

Date:

ಕಳೆದೆರಡು ವರ್ಷಗಳಿಂದ ಜಲ ಜೀವನ್ ಮಿಶನ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಮಗಾರಿ ವಿಳಂಬ, ಅರ್ಧಕ್ಕೆ ನಿಲ್ಲಿಸಿದ ಕೆಲಸ, ಹಸ್ತಾಂತರಕ್ಕೆ ಮೀನಾ ಮೇಷ ಎಣಿಸುತ್ತಿರುವ ಬಗ್ಗೆ ಗ್ರಾಪಂ ಅಧಿಕಾರಿಗಳು, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತರಾಟೆ ತೆಗೆದುಕೊಂಡರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಆಯೋಜಿಸಿದ್ದ ಹರ್ ಘರ್ ಜಲ್ ಕೆಲಸದ ಬಗ್ಗೆ ಸಂಪೂರ್ಣ ತಾಲ್ಲೂಕಿನ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲಸಗಳ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು ತಾಂತ್ರಿಕ ಸಮಸ್ಯೆ ಬಗ್ಗೆ ಆಲಿಸಿದ್ದೇನೆ. ಆದರೆ ಕಳಪೆ ಗುಣಮಟ್ಟದ ಕೆಲಸದ ಬಗ್ಗೆ ಗ್ರಾಮಸ್ಥರಿಂದ ದೂರು ಬರುತ್ತಿವೆ. ಇಂತಹ ಕಾಮಗಾರಿ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ಇನ್ನೂ ಹದಿನೈದು ದಿನದಲ್ಲಿ ಬಾಕಿ ಕೆಲಸ ಹಾಗೂ ದುರಸ್ಥಿ ಮಾಡಿಸಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು ಎಂದು ತಾಕೀತು ಮಾಡಿದರು.

ಪ್ರತಿ ಹೋಬಳಿ ಮಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕೆಲಸಗಳ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಲಾಯಿತು. ಶೇಕಡಾ 70 ರಷ್ಟು ಕೆಲಸ ಮುಗಿದಿದ್ದರೂ ದೂರುಗಳು ಬಂದಿವೆ. ಕೆಲಸ ಮುಗಿದು ನೀರು ಪೂರೈಕೆ ಮಾಡುತ್ತಿರುವ ಗ್ರಾಮಗಳಿಗೆ ಪಿಡಿಓ ಸ್ಥಳ ಪರಿಶೀಲನೆ ಮಾಡಿ ಹಸ್ತಾಂತರ ಮಾಡಿಕೊಳ್ಳಬೇಕು ಎಂದು ತಿಳಿಸಿ ಕೆಲವಡೆ ಕೊರೆದ ಬೋರ್ ವೆಲ್ ವಿಫಲವಾಗಿದೆ. ಮತ್ತೇ ಕೆಲ ಗ್ರಾಮದಲ್ಲಿ ಕುಡಿಯಲು ಯೋಗ್ಯವಿಲ್ಲ ಎಂಬ ಪರೀಕ್ಷೆ ಫಲಿತಾಂಶ ಬಂದಿದೆ. ಇಂತಹ ಕಡೆ ಕೂಡಲೇ ಮತ್ತೊಂದು ಬೋರ್ ವೆಲ್ ವ್ಯವಸ್ಥೆ ಮಾಡಿ ನೀರು ಸರಬರಾಜು ಮಾಡುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001628971

ಚರ್ಚೆಯ ಸಮಯದಲ್ಲಿ ಗುತ್ತಿಗೆದಾರರು ತಮ್ಮ ಅಹವಾಲು ಹೇಳಿಕೊಂಡರು. ತುಮಕೂರು ಜಿಲ್ಲೆಯಲ್ಲಿ ನಮ್ಮ ಹಣದಲ್ಲಿ ಶೇಕಡಾ 35 ರಷ್ಟು ಹಣ ಹಿಡಿಯುತ್ತಿದ್ದಾರೆ. ಹಾಸನ ಮತ್ತು ರಾಮನಗರ ಜಿಲ್ಲೆಯಲ್ಲಿ ಇಎಂಡಿ, ಎಫ್ ಎಸ್ ಟಿ ಹೆಸರಿನಲ್ಲಿ ಹಣ ಹಿಡಿದಿಲ್ಲ. ಆದರೆ ತುಮಕೂರು ಜಿಲ್ಲೆಯ ಮಾತ್ರ ಹಿಡಿದಿದ್ದಾರೆ. ಈ ಜೊತೆಗೆ ಎಲ್ಲಾ ಸಮಸ್ಯೆಗೆ ಗುತ್ತಿಗೆದಾರರೇ ಹೊಣೆ ಮಾಡುತ್ತಿದ್ದಾರೆ. ಯಾವ ಅಧಿಕಾರಿಯೂ ಜವಾಬ್ದಾರಿ ಹೊರದೆ ಎಲ್ಲಾ ಕಾರಣಕ್ಕೂ ಶನೇಶ್ವರ ಹೊಣೆ ಎನ್ನುತ್ತಿದ್ದಾರೆ ಎಂದು ಗುತ್ತಿಗೆದಾರ ಪರವಾಗಿ ರೇಣುಕಾ ಪ್ರಸಾದ್ ಕಿಡಿಕಾರಿದರು.

ಗುತ್ತಿಗೆದಾರರ ಸಮಸ್ಯೆ ಆಲಿಸಿದ ಶಾಸಕರು ಕೆಲಸ ಎರಡು ವರ್ಷದವರೆಗೆ ವಿಳಂಬ ಮಾಡಿ ನಿಗದಿತ ಸಮಯಕ್ಕೆ ಹಸ್ತಾಂತರ ಮಾಡದ ಬಗ್ಗೆ ತಿಳಿದೇ ಅಧಿಕಾರಿಗಳು ಗುತ್ತಿಗೆದಾರರ ಹಣ ಹಿಡಿದಿದ್ದಾರೆ. ವಿಳಂಬವಾಗಿ ಸಮಸ್ಯೆ ಎದುರಾದಲ್ಲಿ ದುರಸ್ಥಿ ಮಾಡಲಿ ಎಂದು ಗುತ್ತಿಗೆದಾರರ ಹಣ ಹಿಡಿದಿದ್ದಾರೆ. ಇನ್ನೂ ಹೆಚ್ಚಿನ ಸಮಯ ಪಡೆಯದೆ ಕೂಡಲೇ ಕೆಲಸ ಮುಗಿಸಿ ಪಂಚಾಯಿತಿಗೆ ಹಸ್ತಾಂತರ ಮಾಡಿ ಬಿಲ್ ಪಡೆದುಕೊಳ್ಳಲು ಸೂಚಿಸಿ, ಹಸ್ತಾಂತರ ಪಡೆಯಲು ಪಿಡಿಓಗಳು ನಿಧಾನ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಡಬ ಹೋಬಳಿ ಲಿಂಗಮ್ಮನಹಳ್ಳಿ, ಚಾಕೇನಹಳ್ಳಿ, ಇಸ್ಲಾಂ ನಗರ ಗ್ರಾಮದಲ್ಲಿ ಬೋರ್ ಹಾಗೂ ಪೈಪ್ ಲೈನ್ ಸಮಸ್ಯೆ ಕೂಡಲೇ ಬಗೆಹರಿಸಬೇಕು. ಕೆಲಸವನ್ನೇ ಆರಂಭಿಸದ, ಅರ್ಧಕ್ಕೆ ಕೈ ಬಿಟ್ಟ ಗುತ್ತಿಗೆದಾರರ ಮೇಲೆ ಕ್ರಮ ವಹಿಸಬೇಕು. ಇದೆಲ್ಲಾ ಕೆಲಸಗಳಿಗೆ ವಿಳಂಬಕ್ಕೆ ವಿದ್ಯುತ್ ಸಂಪರ್ಕ ನೀಡದಿರುವುದು ಕಾರಣ. ಪರಿವರ್ತಕ ಅಳವಡಿಕೆಗೆ ಬೆಸ್ಕಾಂ ಹಾಗೂ ಕುಡಿಯುವ ನೀರು ನೈರ್ಮಲ್ಯ ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿ, ಗುತ್ತಿಗೆದಾರರು ವಿಳಂಬ ಅನುಸರಿಸಿ ಬಿಲ್ ಆಗಲಿಲ್ಲ ಅಂತ ಊರು ಬಿಡುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ಆಗಬಾರದು. ಕೂಡಲೇ ಕೆಲಸವನ್ನು ಪೂರ್ಣಗೊಳಿಸಿ ಎಂದು ಹೇಳಿದರು.

ಸಭೆಯಲ್ಲಿ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಇಇ ಕುಮಾರಸ್ವಾಮಿ, ತಾಪಂ ಇಓ ಶಿವಪ್ರಕಾಶ್, ಎಇಇ ನಟರಾಜ್, ಎಇ ಲಿಂಗರಾಜ್ ಶೆಟ್ಟಿ ಸೇರಿದಂತೆ ಎಲ್ಲಾ ಪಿಡಿಓಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...