ಗುಬ್ಬಿ | ಬಗರ್‌ಹುಕುಂ ಸಾಗುವಳಿ ಸಕ್ರಮಗೊಳಿಸಲು ಪ್ರತಿಭಟನೆ : ಪತ್ರ ಚಳುವಳಿ ನಡೆಸಿ ಪ್ರಾಂತ ರೈತ ಸಂಘದಿಂದ ಹಕ್ಕೊತ್ತಾಯ

Date:

ಬಗರ್ ಹುಕುಂ ಸಾಗುವಳಿ ಭೂಮಿಯ ಪಹಣಿಯಲ್ಲಿ ಅರಣ್ಯ ಇಂಡೀಕರಣ ರದ್ದುಪಡಿಸಿ ಸರ್ಕಾರಿ ಕಂದಾಯ ಭೂಮಿಯಾಗಿ ಮರು ಸ್ಥಾಪಿಸಲು ಹಾಗೂ ಸಕ್ರಮ ಕೋರಿ ಸಲ್ಲಿಸಿದ್ದ ಬಡ ರೈತರ ಅರ್ಜಿಯನ್ನ ಮಾನ್ಯ ಮಾಡಿ ಕೂಡಲೇ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ನೂರಾರು ರೈತರು ಗುಬ್ಬಿ ತಾಲೂಕು ಕಚೇರಿ ಮುಂದೆ ಜಮಾಯಿಸಿ ದಿಡೀರ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಮೆರವಣಿಗೆಯಲ್ಲಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಬಗರ್ ಹುಕುಂ ಸಾಗುವಳಿದಾರರ ಹೋರಾಟ ಸಮಿತಿ, ಕರ್ನಾಟಕ ಪ್ರಾಂತ ರೈತ ಸಂಘ ನೂರಾರು ರೈತರು ಸಾಗುವಳಿ ಭೂಮಿ ಸಕ್ರಮ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪತ್ರ ಚಳವಳಿಗೆ ಚಾಲನೆ ನೀಡಿದರು.

ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಮಾತನಾಡಿ, “ರಾಜ್ಯದಲ್ಲಿ 14 ಲಕ್ಷಕ್ಕೂ ಅಧಿಕ ಮಂದಿ ಬಡ ರೈತರ ಬಗರ್ ಹುಕುಂ ಅರ್ಜಿ ಹಾಗೆಯೇ ಸರ್ಕಾರದ ಮುಂದಿದೆ. ಒಂದೂವರೆ ವರ್ಷ ಕಳೆದರೂ ಅಕ್ರಮ ಸಕ್ರಮ ಮಾಡುವ ಮಾತಿಲ್ಲ. ಚುನಾವಣಾ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲ. ಈ ಹಿಂದೆ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡದೆ ಉಳ್ಳವರಿಗೆ ಭೂಮಿ ಹಂಚಲಾಗಿದೆ. ಈ ಮಧ್ಯೆ ಮಹಾರಾಜರ ನೋಟಿಫಿಕೇಷೆನ್ ಬಗ್ಗೆ ಮಾತನಾಡುತ್ತಿದ್ದಾರೆ. ಹಾಗಾದರೆ ಉಳುವವನೇ ಭೂಮಿಯ ಒಡೆಯ ಕಾನೂನು ಎಲ್ಲಿ ಹೋಯ್ತು. ಅರಣ್ಯದಲ್ಲಿ ಕೃಷಿ ಮಾಡಲು ಬಳಸಿರುವ ಭೂಮಿ ಅನುಭವದಲ್ಲಿರುವ ರೈತರಿಗೆ ವಿತರಣೆ ಮಾಡಿ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಮೂಲಕ ಸಂದೇಶ ಕೊಡೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 08 07 at 5.04.35 PM

ಜಿಲ್ಲಾ ಕಾರ್ಯದರ್ಶಿ ಅಜ್ಜಪ್ಪ ಮಾತನಾಡಿ, “ಸಮಿತಿಗೆ ಅತೀ ಹೆಚ್ಚು ಅರ್ಜಿ ತುಮಕೂರು ಜಿಲ್ಲೆಯಲ್ಲಿ ಪೆಂಡಿಂಗ್ ಇದೆ. ನಮ್ಮ ತಾಲೂಕಿನಲ್ಲಿ 60 ಸಾವಿರ ಅರ್ಜಿಗೆ ಉತ್ತರ ಸಿಕ್ಕಿಲ್ಲ. ಅರ್ಹರಿಗೆ ಭೂಮಿ ನೀಡದೆ ಅನುಭವದಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ನಡೆದಿದೆ. ಚುನಾಯಿತ ಪ್ರತಿನಿಧಿಗಳು ಬಡವರ ಪರ ದನಿ ಎತ್ತಿಲ್ಲ. ಅಮೃತ ಕಾವಲು ಎಂದು ಪ್ರಾಣಿಗಳ ಹೆಸರಿನಲ್ಲಿ ಭೂಮಿ ಉಳಿಸುವ ವೇಗದಲ್ಲಿ ಸತ್ತವನ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ನೀಡುತ್ತಿಲ್ಲ” ಎಂದು ಕಿಡಿಕಾರಿ, “ಕೂಡಲೇ ವಾಸ್ತವದಲ್ಲಿ ಹತ್ತಾರು ವರ್ಷದಿಂದ ಕೃಷಿ ನಡೆಸಿರುವ ಬಡ ರೈತರನ್ನು ಅರ್ಹತೆ ಆಧಾರದ ಮೇಲೆ ಹಕ್ಕುಪತ್ರ ನೀಡಬೇಕು” ಎಂದು ಆಗ್ರಹಿಸಿದರು.

ಪ್ರಾಂತ ರೈತ ಸಂಘದ ಸದಸ್ಯರು ತಹಶೀಲ್ದಾರ್ ಬಿ.ಆರತಿ ಅವರಿಗೆ ಮನವಿಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ ಗುಬ್ಬಿ ತಾಲೂಕು ಅಧ್ಯಕ್ಷ ದೊಡ್ಡನಂಜಯ್ಯ, ತಾಲೂಕು ಕಾರ್ಯದರ್ಶಿ ಬಸವರಾಜು, ಬಗರ್ ಹುಕುಂ ಹೋರಾಟ ಸಮಿತಿಯ ಅಧ್ಯಕ್ಷ ನಾಗರಾಜು, ಮುಖಂಡರಾದ ರಾಜಮ್ಮ, ಎಸ್.ಕೆ.ಕೃಷ್ಣಮೂರ್ತಿ, ರೇಣುಕಮ್ಮ, ಬಸವರಾಜು, ನರಸಿಂಹಮೂರ್ತಿ ಇತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...