ಗುಬ್ಬಿ | ಹೇಮಾವತಿ ನೀರಿಗಾಗಿ ರಾಜಕಾರಣ ದೂರವಿಡಿ : ರೈತ ಸಂಘ ವೆಂಕಟೇಗೌಡ ಕರೆ

Date:

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ವಂಚಿತರಾಗುವ ಮುನ್ನ ಜಿಲ್ಲೆಯ ಎಲ್ಲಾ ಮುಖಂಡರು ಎಚ್ಚೆತ್ತು ರಾಜಕಾರಣ ದೂರವಿಟ್ಟು ಎಕ್ಸ್ ಪ್ರೆಸ್ ಕೆನಾಲ್ ವಿರೋಧಿ ಹೋರಾಟಕ್ಕೆ ಕೈ ಜೋಡಿಸಿ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಕರೆ ನೀಡಿದರು.

ತಾಲ್ಲೂಕಿನ ಕಡಬ ಗ್ರಾಮದಿಂದ ಬೈಕ್ ಜಾಥಾ ಮೂಲಕ ಕಾಡಶೆಟ್ಟಿಹಳ್ಳಿ ಬಳಿಯ ಕೆನಾಲ್ ಕಾಮಗಾರಿ ಬಳಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಹೇಮಾವತಿ ನೀರು ತಾಲ್ಲೂಕಿನ ರೈತರ ಬದುಕಿಗೆ ಹತ್ತಿರವಾಗಿದೆ. ಬರಡು ಭೂಮಿಯಾಗಿದ್ದ ಎಷ್ಟೋ ಜಮೀನುಗಳಲ್ಲಿ ಒಂದು ತೆಂಗು ಅಡಿಕೆ ಕಂಗೊಳಿಸುತ್ತದೆ. ಆದರೆ ಈಗ ಹೇಮಾವತಿ ನೀರು ನಮ್ಮಿಂದ ಕಿತ್ತುಕೊಳ್ಳುವ ಪ್ರಯತ್ನ ನಡೆದಿದೆ. ನಿಯಮ ಮೀರಿ ಅವೈಜ್ಞಾನಿಕವಾಗಿ ಪೈಪ್ ಲೈನ್ ಕೆನಾಲ್ ಮೂಲಕ ನೀರು ತೆಗೆದುಕೊಳ್ಳುವ ಸರ್ಕಾರದ ಪ್ರಭಾವಿ ಸಚಿವರ ಪ್ರಯತ್ನಕ್ಕೆ ತಡೆಯೊಡ್ಡಬೇಕಿದೆ ಎಂದು ಕರೆ ನೀಡಿದರು.

ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿ ರಚನೆಯಾಗಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ, ಗೃಹ ಸಚಿವರ ಮನೆಗೆ ಮುತ್ತಿಗೆ, ತಾಲ್ಲೂಕುವಾರು ಹೋರಾಟ ನಡೆದಿದೆ. ಇದರ ಫಲವಾಗಿ ಕಾಮಗಾರಿ ಸ್ಥಗಿತಗೊಂಡಿದೆ. ಆದರೆ ಅಧಿಕಾರಿಗಳು ಬೃಹತ್ ಗಾತ್ರದ ಪೈಪ್ ತರಲು ಅವಕಾಶ ಮಾಡಿದರು. ಕೆಲ ಭಾಗದಲ್ಲಿ ಪೊಲೀಸ್ ಇಲಾಖೆ ಬಳಸಿ ಕೆಲಸ ಮಾಡಲು ಮುಂದಾದರು. ಎಲ್ಲವೂ ತಡೆದರೂ ಮತ್ತೇ ಕಳ್ಳಾಟ ಶುರುವಾಗಿದೆ. ಹೀಗೆ ರೈತರ ತಾಳ್ಮೆ ಪರೀಕ್ಷೆ ಮಾಡಿದರೆ ಪರಿಣಾಮ ಕೆಟ್ಟದಾಗಿ ಕಾಣಲಿದೆ. ಇದು ಸರ್ಕಾರಕ್ಕೆ ಎಚ್ಚರಿಕೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001346740

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಅಕ್ರಮವಾಗಿ ನಡೆಯುತ್ತಿರುವ ಈ ಕಾಮಗಾರಿ ಕಾನೂನು ನಿಯಮವನ್ನು ಗಾಳಿಗೆ ತೂರಲಾಗಿದೆ. ಮುಖ್ಯ ನಾಲೆಯ ಮೂಲಕ ನೀರಿನ ಹಂಚಿಕೆ ಹೆಚ್ಚಿಸಿ ತೆಗೆದುಕೊಂಡು ಹೋಗಲಿ. ಆದರೆ ಇಲ್ಲಿ ಜಿಲ್ಲೆಯ ಹಂಚಿಕೆಯ ಪಾಲಿನಲ್ಲೇ ಮಾಗಡಿಯತ್ತ ಹರಿಸಲು ಮುಂದಾಗಿರುವುದು ಅಧಿಕಾರ ದುರ್ಬಳಕೆಯಾಗಿದೆ. ಯಾವುದೇ ಭೂಮಿ ವಶದ ಪ್ರಕ್ರಿಯೆ ನಡೆದಿಲ್ಲ. ಸರ್ಕಾರದ ಜಮೀನು ಹುಡುಕಿ ಅಲ್ಲಿ ಕೆಲಸ ಆರಂಭಿಸಿ ನಂತರ ರಸ್ತೆಯ ಬದಿಯಲ್ಲೇ ಪೈಪ್ ಅಳವಡಿಸಲು ಮುಂದಾಗಿದ್ದಾರೆ. ನಾಲೆಯ ಕೆಳ ಭಾಗದಲ್ಲಿ 12 ಅಡಿ ವ್ಯಾಸದ ಪೈಪ್ ನೀರನ್ನು ಸಂಪೂರ್ಣ ಸೆಳೆಯುತ್ತದೆ. ಹನಿ ನೀರು ಗುಬ್ಬಿ ಸೇರಿದಂತೆ ಆರು ತಾಲ್ಲೂಕಿಗೆ ಸಿಗೋದಿಲ್ಲ. ಈ ಬಗ್ಗೆ ಕಾಂಗ್ರೆಸ್ ಸಚಿವರು, ಶಾಸಕರು ಮಾತಾಡುತ್ತಿಲ್ಲ. ರೈತರೇ ಒಗ್ಗೂಡಿ ಉಗ್ರ ಹೋರಾಟ ನಡೆಸಿ ನೀರು ಉಳಿಸಿಕೊಳ್ಳುವ ಅನಿವಾರ್ಯವಿದೆ. ತಾಲ್ಲೂಕಿನ ಸಾವಿರಾರು ರೈತರು ಹೋರಾಟಕ್ಕೆ ಧುಮುಕಿ ಎಂದು ಕರೆ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ರಾಜ್ಯಾಧ್ಯಕ್ಷ ಕಾಡಶೆಟ್ಟಿಹಳ್ಳಿ ಸತೀಶ್ ಮಾತನಾಡಿ ಸ್ಥಳೀಯ ಗ್ರಾಮ ಪಂಚಾಯಿತಿ ತನ್ನದೇ ಆಡಳಿತ ಅಧಿಕಾರ ಹೊಂದಿದೆ. ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಲು ಗ್ರಾಮ ಪಂಚಾಯಿತಿ ಒಪ್ಪಿಗೆ ಅತ್ಯವಶ್ಯಕ. ಸಭೆಯಲ್ಲಿ ಅನುಮೋದನೆ ಆಗಿದ್ದಲ್ಲಿ ಮಾತ್ರ ಕೆಲಸ ನಡೆಯಬೇಕು. ಗ್ರಾಮ ಸಭೆ ನಡೆಸಿ ರೈತರ ಆಗುಹೋಗು ಚರ್ಚಿಸಬೇಕು. ಯಾವುದನ್ನೂ ನಡೆಸದೆ ಏಕಾಏಕಿ ಮುಖ್ಯನಾಲೆಯಿಂದ ನೀರು ತೆಗೆದುಕೊಳ್ಳುವುದು ಕಾನೂನು ಉಲ್ಲಂಘನೆ. ಕಾನೂನು ಹೋರಾಟಕ್ಕೆ ನ್ಯಾಯಾಲಯ ಮೆಟ್ಟಿಲೇರುವುದು ಮುಂದಿನ ನಿರ್ಧಾರ ಆಗಲಿದೆ ಎಂದರು.

ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ಸ್ಥಗಿತಗೊಂಡ ಪೈಪ್ ಲೈನ್ ಕೆಲಸವನ್ನು ಪೊಲೀಸರ ಕಾವಲಿನಲ್ಲಿ ನಡೆಸಲು ಮುಂದಾದ ಅಧಿಕಾರಿಗಳು, ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಲು ಬೈಕ್ ಜಾಥಾ ನಡೆಸಲಾಗುತ್ತಿದೆ. ನೂರಾರು ಸಂಖ್ಯೆಯ ರೈತರ ಎಚ್ಚರಿಕೆಗೆ ಬೆಲೆ ನೀಡದೇ ಕೆಲಸ ಮುಂದುವರೆದರೆ ಸಾವಿರಾರು ರೈತರು ಹೇಮಾವತಿ ಕಚೇರಿ ಮುತ್ತಿಗೆ ಹಾಕುತ್ತಾರೆ. ಬೆಂಗಳೂರು ಚಲೋ ಕೂಡಾ ನಡೆಸಿ ವಿಧಾನಸೌಧ ಮುತ್ತಿಗೆ ಹಾಕುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಚನ್ನಬಸವಣ್ಣ, ಮಂಜುನಾಥ್, ಶಿವಕುಮಾರ್, ಸತೀಶ್, ಮಹದೇವಯ್ಯ, ಯತೀಶ್, ನರಸಿಂಹಮೂರ್ತಿ, ಬಸವರಾಜು ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...