ಗುಬ್ಬಿ | ತಾರ್ಕಿಕ ಅಂತ್ಯ ಕಾಣದ ಕೇಶಿಪ್ ರಸ್ತೆ ಟೋಲ್ ; ರೈತ ಪರ ತೀರ್ಮಾನಕ್ಕೆ ಬದ್ಧ : ಶಾಸಕ ಶ್ರೀನಿವಾಸ್

Date:

ಗುಬ್ಬಿ  ತಾಲ್ಲೂಕಿನ ಜಿ.ಹೊಸಹಳ್ಳಿ ಬಳಿ ಆರಂಭವಾದ ಟೋಲ್ ತೆರಿಗೆ ಸಂಗ್ರಹಕ್ಕೆ ಎರಡು ಬಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಂದ 15 ದಿನ ಗಡುವು ಪಡೆದಿದ್ದ ಶಾಸಕ ಎಸ್.ಆರ್.ಶ್ರೀನಿವಾಸ್ ಸೋಮವಾರ ಮುಕ್ತ ಚರ್ಚೆಗೆ ಸಭೆ ನಡೆಸಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರೈತರು ಕೇವಲ ರೈತಾಪಿ ವರ್ಗ ಓಡಾಡುವ ಈ ರಸ್ತೆಗೆ ವಾಹನ ತೆರಿಗೆ ಹಾಕುವುದು ಸರಿಯಲ್ಲ. ಯಾವ ಹೆದ್ದಾರಿ ನಿಯಮ ಪಾಲಿಸದೆ ಕಳೆದ ಹತ್ತು ವರ್ಷದ ಹಿಂದೆ ನಿರ್ಮಾಣವಾದ ಕೇಶಿಪ್ ರಸ್ತೆಗೆ ದಿಢೀರ್ ಅವೈಜ್ಞಾನಿಕ ಟೋಲ್ ನಿರ್ಮಾಣ ಮಾಡಿ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ನೋವು ಕೊಡಲು ಹೊರಟಿರುವುದು ಖಂಡನೀಯ ಎಂದು ನೇರ ಚರ್ಚೆಗೆ ಇಳಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಸ್ಥಳೀಯ ರೈತರಿಗೆ ಅನಾನುಕೂಲ ಮಾಡುವ ಟೋಲ್ ಇಲ್ಲಿ ಅನಾವಶ್ಯಕ. ಯಾವುದೇ ಕೈಗಾರಿಕಾ ವಲಯ ಇಲ್ಲದ ಈ ಭಾಗದ ರಸ್ತೆ ಕೇವಲ ರೈತರು ಬಳಸುತ್ತಾರೆ. ಈ ಬಗ್ಗೆ ಎರಡು ಬಾರಿ ಪ್ರತಿಭಟನೆ ನಡೆದಿದೆ. ಈಗ ಗಡುವು ಪಡೆದು ಸಭೆ ನಡೆಸಿದ್ದೀರಿ. ಹದಿನೈದು ದಿನದ ಗಡುವು ಮುಗಿದಿದೆ. ಟೋಲ್ ತೆರವು ಮಾಡದಿದ್ದರೆ ರೈತರ ಆಕ್ರೋಶ ಕಟ್ಟೆ ಒಡೆಯುತ್ತದೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002334673

ಜೆಡಿಎಸ್ ಮುಖಂಡ ಹೊನ್ನಗಿರಿಗೌಡ ಮಾತನಾಡಿ ರೈತರು ಹಾಗೂ ಸರ್ಕಾರದ ಮಧ್ಯೆ ಶಾಸಕರು ಸೇತುವೆ ಆಗಿ ಕೆಲಸ ಮಾಡಬೇಕಿದೆ. ರೈತರ ಬವಣೆ ಅರಿತ ಶಾಸಕರು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ರೈತರ ಪರ ನಿಲುವು ತೋರುವ ತೀರ್ಮಾನ ಕೈಗೊಳ್ಳಬೇಕು. ಟೋಲ್ ಗುತ್ತಿಗೆದಾರ ಶಾಸಕರಿಗೆ ತಿಳಿಸಿದ್ದೇವೆ ಎನ್ನುತ್ತಾರೆ. ಆದರೆ ನಮ್ಮ ಗಮನಕ್ಕೆ ಬಂದಿಲ್ಲ ಎಂದು ಶಾಸಕರು ಹೇಳುತ್ತಾರೆ. ಈ ಗೊಂದಲ ಮೂಡುವ ಬದಲು ರೈತರು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಒಟ್ಟಿಗೆ ಚರ್ಚಿಸಿ ಒಂದು ತೀರ್ಮಾನ ಕೈಗೊಳ್ಳಿ ಎಂದು ತಿಳಿಸಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಅವೈಜ್ಞಾನಿಕ ಟೋಲ್ ಬಗ್ಗೆ ವಿವರಿಸಿದ್ದರೂ ಸಚಿವರು ಒಪ್ಪುತ್ತಿಲ್ಲ. ಎರಡು ಕಿಮೀ ವ್ಯಾಪ್ತಿಯ ಜನರಿಗೆ ಮಾತ್ರ ವಾಹನ ಸಂಚಾರ ಅನುವು ಮಾಡುವುದು ಸರಿಯಲ್ಲ. ಇಡೀ ತಾಲ್ಲೂಕಿನ ಜನರಿಗೆ ಅನುಕೂಲ ಆಗಬೇಕು. ಇಲ್ಲವಾದರೆ ಟೋಲ್ ನಿರ್ಮಾಣ ಅಗತ್ಯವಿಲ್ಲ. ರೈತರು ಮುಂದಿನ ಹೋರಾಟಕ್ಕೆ ಬಂದರೆ ಟೋಲ್ ಕಿತ್ತೊಗೆಯುವ ಅವಕಾಶ ಹೆಚ್ಚಿದೆ. ಈ ಸಭೆಯಲ್ಲಿ ರೈತರ ಪರ ತೀರ್ಮಾನ ಕೈಗೊಳ್ಳಿ ಎಂದು ತಿಳಿಸಿದರು.

ಎಲ್ಲಾ ರೈತರ ಮಾತುಗಳನ್ನು ಆಲಿಸಿದ ಶಾಸಕ ಎಸ್.ಆರ್.ಶ್ರೀನಿವಾಸ್ ಮಾತನಾಡಿ ಸರ್ಕಾರ ಗುತ್ತಿಗೆ ಕರಾರು ಈ ಹಿಂದೆಯೇ ಮಾಡಿದೆ. ಕರಾರು ನಿಯಮ ಸರ್ಕಾರ ಬದಲಿಸಲು ಸಾಧ್ಯವಿಲ್ಲ. ಗುತ್ತಿಗೆದಾರ ಅಧಿಕಾರಿಗಳ ಜೊತೆ ಚರ್ಚಿಸಿ ಒಂದು ಒಪ್ಪಂದ ಮಾಡಬಹುದಾಗಿದೆ. ತಾಲ್ಲೂಕಿನ ಎಲ್ಲಾ ವಾಹನಗಳಿಗೆ ಪಾಸ್ ವ್ಯವಸ್ಥೆ ಮಾಡಲು ಚರ್ಚೆ ಮಾಡುತ್ತೇನೆ. ಅಥವಾ ನನ್ನ ಕ್ಷೇತ್ರದಿಂದ ಹೊರ ಭಾಗಕ್ಕೆ ಟೋಲ್ ಸ್ಥಳಾಂತರ ಮಾಡಲು ಅವಕಾಶ ಇದ್ದರೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿ ಒಂದು ದಿನದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತೇನೆ. ರೈತ ಪರ ತೀರ್ಮಾನಕ್ಕೆ ಬದ್ದನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟಾರೆ ಎರಡು ಗಂಟೆ ನಡೆದ ಸಭೆಯಲ್ಲಿ ಯಾವುದೇ ತಾರ್ಕಿಕ ಅಂತ್ಯ ಕಾಣದ ಚರ್ಚೆ ಮುಂದಿನ ಅಧಿಕಾರಿಗಳ ಸಭೆಯಲ್ಲಿ ಶಾಸಕರ ತೀರ್ಮಾನ ತಿಳಿದು ರೈತರ ಹೋರಾಟದ ಸ್ವರೂಪ ತಿಳಿಸುವುದಾಗಿ ರೈತ ಮುಖಂಡರು ತಿಳಿಸಿ ತಾತ್ಕಾಲಿಕವಾಗಿ ಸಭೆ ಅಂತ್ಯಗೊಳಿಸಿದರು.

ಸಭೆಯಲ್ಲಿ ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ರಂಗನಾಥ್, ಸಿಪಿಐ ರಾಘವೇಂದ್ರ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಜಿಲ್ಲಾ ಕಾರ್ಯದರ್ಶಿ ಶಂಕರಪ್ಪ, ಗ್ರಾಪಂ ಸದಸ್ಯ ರೇಣುಕಾಪ್ರಸಾದ್, ಜಿ.ಎಂ.ಶಿವಾನಂದ್, ರೈತಸಂಘದ ಸಿ.ಟಿ.ಕುಮಾರ್, ಗುರುಚನ್ನಬಸವಪ್ಪ, ಯತೀಶ್, ಪ್ರಕಾಶ್, ವೀರಭದ್ರೇಗೌಡ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...