ಗುಬ್ಬಿ | ಮತದಾರರ ಪರಿಷ್ಕರಣೆಗೆ ಡಿಸೆಂಬರ್ 24 ಕೊನೆಯ ದಿನ : ತಹಶೀಲ್ದಾರ್ ಬಿ.ಆರತಿ

Date:

ಮತದಾರರ ಪರಿಷ್ಕರಣೆಯನ್ನು ಗುಬ್ಬಿ ವಿಧಾನಸಭಾ ಕ್ಷೇತ್ರದ 199 ಮತಗಟ್ಟೆಯಲ್ಲಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಆರಂಭಿಸಲಾಗಿದೆ. ಮತದಾರರು ಹಕ್ಕು ಮತ್ತು ಆಕ್ಷೇಪಣೆ ಇತ್ಯರ್ಥ ಪಡಿಸಲು ಡಿಸೆಂಬರ್ 24 ಕೊನೆಯ ದಿನವಾಗಿದೆ ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.

ಗುಬ್ಬಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ 1,84,372 ಒಟ್ಟು ಮತದಾರರಿದ್ದು, 91,357 ಪುರುಷರು, 93,005 ಮಹಿಳೆಯರಿದ್ದಾರೆ. ಈ ಪೈಕಿ 2254 ಅಂಗವಿಕಲ ಮತದಾರರು ಇದ್ದಾರೆ ಎಂದು ವಿವರಿಸಿದರು.

ಮತದಾರರ ಪರಿಷ್ಕರಣೆ 2025 ರ ಸಂಬಂಧ ಅರ್ಹತಾ ಅನುಸಾರ ಸೇರ್ಪಡೆಗೆ ನಮೂನೆ 6 ಅರ್ಜಿ, ಕೈ ಬಿಡತಕ್ಕದ್ದಕ್ಕೆ ನಮೂನೆ 7, ವರ್ಗಾವಣೆಗೆ ನಮೂನೆ 8 ಅರ್ಜಿ ಸಲ್ಲಿಸಲು ತಿಳಿಸಿದ ಅವರು ಆಯಾ ಮತಗಟ್ಟೆ ಬಿಎಲ್ ಓ ಹಾಗೂ ಅನ್ ಲೈನ್ ಮೂಲಕ ಕೂಡಾ ಅರ್ಜಿ ಸಲ್ಲಿಸಬಹುದಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಪ್ರತಿ ಶನಿವಾರ ಮತ್ತು ಭಾನುವಾರದಂದು ವಿಶೇಷ ಅಭಿಯಾನ ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಕೊನೆಯ ದಿನ ಡಿಸೆಂಬರ್ 24 ರವರೆಗೆ ನಡೆಸಲಾಗುವುದು. ಪರಿಷ್ಕರಣೆ ನಂತರ 2025 ಜನವರಿ 6 ರಂದು ಅಂತಿಮ ಪಟ್ಟಿ ಸಿದ್ಧಗೊಳಿಸಲಾಗುವುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಪಂಚಾಯಿತಿ ಉಪ ಚುನಾವಣೆ

ತಾಲ್ಲೂಕಿನ 34 ಗ್ರಾಮ ಪಂಚಾಯಿತಿಯ ಪೈಕಿ 6 ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನವಂಬರ್ 23 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಶಿವಪುರ ಗ್ರಾಪಂ ವ್ಯಾಪ್ತಿಯ ಗಳಿಗೇಕೆರೆ ಕ್ಷೇತ್ರ, ಎಂ.ಎನ್.ಕೋಟೆ ಗ್ರಾಪಂ ಒಂದು ಕ್ಷೇತ್ರ, ಅಡಗೂರು ಗ್ರಾಪಂ ಒಂದು ಕ್ಷೇತ್ರ, ಜಿ.ಹೊಸಹಳ್ಳಿ ಒಂದು ಕ್ಷೇತ್ರ, ಎಸ್.ಕೊಡಗೀಹಳ್ಳಿ ಗ್ರಾಪಂ ಒಂದು ಕ್ಷೇತ್ರ ಹಾಗೂ ಪೆದ್ದನಹಳ್ಳಿ ಗ್ರಾಪಂ ನ ಬೋಚಿಹಳ್ಳಿ ಈ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ ಎಂದರು.

ಇದನ್ನು ಓದಿದ್ದೀರಾ? ತುಮಕೂರು ಜಿಲ್ಲೆಯಲ್ಲಿ 4 ಶೇಂಗಾ ಖರೀದಿ ಕೇಂದ್ರ ಸ್ಥಾಪನೆ : ಶುಭ ಕಲ್ಯಾಣ್

ಅಕ್ರಮ ಪಟಾಕಿ ಮಾರಿದರೆ ಕಾನೂನು ಕ್ರಮ

ತಾಲ್ಲೂಕಿನಲ್ಲಿ ಒಟ್ಟು ನಾಲ್ಕು ಹಸಿರು ಪಟಾಕಿ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ. ಗುಬ್ಬಿ ಪಟ್ಟಣದಲ್ಲಿ ಎರಡು ಅಂಗಡಿ ಹಾಗೂ ನಿಟ್ಟೂರು ಗ್ರಾಮದಲ್ಲಿ ಎರಡು ಮಳಿಗೆ ತಾತ್ಕಾಲಿಕವಾಗಿ ಜಂಕ್ ಶೀಟ್ ನಲ್ಲಿ ನಿರ್ಮಾಣ ಮಾಡಲು ಸೂಚಿಸಲಾಗಿದೆ. ಉಳಿದಂತೆ ಯಾವುದೇ ಅಂಗಡಿಗಳಲ್ಲಿ ಅಕ್ರಮ ಪಟಾಕಿ ಮಾರಾಟ ಮಾಡಿದರೆ ಅಥವಾ ಹಸಿರು ಪಟಾಕಿ ಚಿಹ್ನೆ ಇಲ್ಲದ ಪಟಾಕಿ ಮಾರಾಟ ಮಾಡಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಚುನಾವಣಾ ಶಿರಸ್ತೇದಾರ್ ಲೋಕೇಶ್, ಕಂದಾಯ ನಿರೀಕ್ಷಕ ಗುರು ಪ್ರಸಾದ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...