ಗುಬ್ಬಿ | ಪೊಲೀಸರ ಕಾವಲಿನಲ್ಲಿ ಲಿಂಕ್ ಕೆನಾಲ್ ಕಾಮಗಾರಿ ಪುನರಾರಂಭ : ಸಿಡಿದೆದ್ದ ರೈತರಿಂದ ಹೋರಾಟ ಆರಂಭ

Date:

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ನಮ್ಮಿಂದ ಕಿತ್ತುಕೊಳ್ಳುವ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿ ಸ್ಥಗಿತ ಗೊಳಿಸಲು ಕಳೆದ ಒಂದು ವರ್ಷದಿಂದ ನಿರಂತರ ಹೋರಾಟ ನಡೆಸಿದ್ದ ರೈತರಿಗೆ ಶುಕ್ರವಾರ ಪೊಲೀಸರ ಕಾವಲಿನಲ್ಲಿ ಕೆಲಸ ಆರಂಭಿಸಿದ್ದು ಶಾಕ್ ನೀಡಿದೆ. ಈ ಹಿನ್ನಲೆ ರೊಚ್ಚಿಗೆದ್ದ ರೈತರು ಕಾಮಗಾರಿ ಸಮೀಪದಲ್ಲಿ ಸಂಕಾಪುರ ಬಳಿ ಹೋರಾಟ ಆರಂಭಿಸಿದ್ದಾರೆ.

ಮಾಗಡಿಯತ್ತ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಪೈಪ್ ಲೈನ್ ಕಾಮಗಾರಿ ಬಗ್ಗೆ ಈ ಹಿಂದೆ ಬಿಜೆಪಿ ಸರ್ಕಾರ ರದ್ದುಗೊಳಿಸಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಭಾವಿಗಳ ಕಣ್ಣು ಹೇಮಾವತಿ ನೀರಿನ ಮೇಲೆ ಬಿದ್ದಿದೆ. ಹೇಮಾವತಿ ನೀರು ಮುಖ್ಯನಾಲೆಯಿಂದ ಪೈಪ್ ಮೂಲಕ ನೀರು ಹರಿಸುವುದು ಕಾನೂನು ಬಾಹಿರ. ಯಾವುದೇ ಹಂಚಿಕೆ ನಡೆಯದೇ ಏಕಾಏಕಿ ಕಾಮಗಾರಿ ಆರಂಭಿಸಿ ಕಾನೂನು ಕೈಗೆತ್ತಿಕೊಂಡು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರು, ರಾಜಕೀಯ ಮುಖಂಡರು, ಹಲವು ಮಠಾಧೀಶರು ಒಗ್ಗೂಡಿ ಬೃಹತ್ ಹೋರಾಟ ನಡೆಸಿದ್ದರು. ಲಿಂಕ್ ಕೆನಾಲ್ ವಿರೋಧಿ ಸಮಿತಿ ರಚಿಸಿ ಹೋರಾಟದ ರೂಪವನ್ನು ಉಗ್ರ ಗೊಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಪಾದಯಾತ್ರೆ, ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವರ ಮನೆಗೆ ಮುತ್ತಿಗೆ ಹೀಗೆ ಹೋರಾಟ ನಿರಂತರ ನಡೆಸಲಾಯಿತು. ಸರ್ಕಾರ ಕಾಮಗಾರಿ ಮಾಡುವುದಿಲ್ಲ ಎಂದು ಹೇಳಿಕೊಂಡೇ ಸರ್ಕಾರಿ ಜಾಗದಲ್ಲಿ ಕೆನಾಲ್ ತೆಗೆಯುವ ಕೆಲಸ ಆಗಾಗ್ಗೆ ನಡೆಸಿ ರೈತರನ್ನು ಕೆಣಕಿ ಕೊನೆಗೆ ಶುಕ್ರವಾರ ಮುಹೂರ್ತ ನಿಗದಿ ಮಾಡಿ ಸಾವಿರ ಪೊಲೀಸರ ಸರ್ಪಗಾವಲಿನಲ್ಲಿ ಕಾಮಗಾರಿ ನಡೆಸಲು ಅನುವು ಮಾಡಲಾಗಿದೆ. ರೈತರಿಗೆ ದಿಗ್ಬಂಧನ ಹಾಕಿ ಕಾಮಗಾರಿಯ ಸುತ್ತಲಿನ ಎಲ್ಲಾ ರಸ್ತೆ ಬಂದ್ ಮಾಡಲಾಗಿದೆ. ಹೋರಾಟಕ್ಕೆ ತೆರಳಿದ್ದ ರೈತರನ್ನು ಅಲ್ಲಲ್ಲೇ ನಿಲ್ಲಿಸಿ ಹೋರಾಟ ಹತ್ತಿಕ್ಕುವ ಕೆಲಸ ನಡೆಸಲಾಗಿದೆ. ಈ ಹಿನ್ನಲೆ ಆಕ್ರೋಶಗೊಂಡ ರೈತರು ಸಂಕಾಪುರ ಅತ್ತಿಕಟ್ಟೆ ಗೇಟ್ ಬಳಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಅತ್ತಿಕಟ್ಟೆ ಸಂಪಿಗೆ ರಸ್ತೆಯಲ್ಲಿ ಪೊಲೀಸರು ರೈತರನ್ನು ಅಡ್ಡಗಟ್ಟಿದ ಹಿನ್ನಲೆ ರಸ್ತೆಯಲ್ಲೇ ಪ್ರತಿಭಟನೆಯನ್ನು ರೈತಸಂಘದ ನೇತೃತ್ವದಲ್ಲಿ ಆರಂಭಿಸಿದರು. ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಸರ್ಕಾರ ಸ್ಥಳೀಯ ಜನಪ್ರತಿನಿಧಿಗಳ ಹಾಗೂ ರೈತ ಮುಖಂಡರ ಸಲಹೆ ಪಡೆದಿಲ್ಲ. ಜಿಲ್ಲೆಗೆ ಹಂಚಿಕೆಯಾದ 24 ಟಿಎಂಸಿ ನೀರು ಕದ್ದೊಯ್ಯುವ ಯೋಜನೆ ಸಂಪೂರ್ಣ ಅಕ್ರಮ ಆಗಿದೆ. ಡಿಸಿಎಂ ಶಿವಕುಮಾರ್ ಅವರು ಅಧಿಕಾರಿಗಳನ್ನು ಪೊಲೀಸರ ಜೊತೆ ಕಳುಹಿಸಿ ಕಾಮಗಾರಿ ಮಾಡಿರುವುದು ಸರಿಯಲ್ಲ. ರೈತರನ್ನು ತಡೆಗಟ್ಟಿ ಪೊಲೀಸರ ಭಯ ತೋರಿಸುವ ಇವರ ದಬ್ಬಾಳಿಕೆಗೆ ತಕ್ಕ ಉತ್ತರ ರೈತರೇ ನೀಡುತ್ತಾರೆ. ರೈತ ಸಂಘ ಸಹ ಮುಂದಿನ ದಿನದಲ್ಲಿ ಉಗ್ರ ಹೋರಾಟ ಕೈಗೊಳ್ಳಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಗೌಡ ಮಾತನಾಡಿ ಸಂಸದ ಸೋಮಣ್ಣ ಅವರು ಪತ್ರಿಕೆಯಲ್ಲಿ ಹೇಳಿಕೆ ನೀಡಿ ಈ ಪೈಪ್ ಲೈನ್ ಕಾಮಗಾರಿ ವಿರೋಧ ಇದೆ ಎನ್ನುತ್ತಾರೆ. ಆದರೆ ರೈತರ ಹೋರಾಟಕ್ಕೆ ಬರುತ್ತಿಲ್ಲ. ಬರೀ ರೈಲ್ವೆ ಸೇತುವೆ ಮಾಡುತ್ತಾ ಇದ್ದರೆ ಆಗೋಲ್ಲ. ರೈತರಿಗೆ ಅವಶ್ಯ ಕೃಷಿಗೆ ನೀರನ್ನು ಉಳಿಸಿಕೊಡಿ. ಡಿಕೆಶಿ ಜೊತೆ ಚರ್ಚೆ ಮಾಡಿ ಎಂದ ಅವರು ಜಿಲ್ಲೆಯಲ್ಲಿ ಇಬ್ಬರು ಸಚಿವರು ಕೇವಲ ಕಾಂಗ್ರೆಸ್ ಸಚಿವರು ಎನಿಸಿದ್ದಾರೆ. ಕಾಂಗ್ರೆಸ್ ಶಾಸಕರೂ ಸಹ ಒಂದು ಮಾತು ಆಡುತ್ತಿಲ್ಲ ಎಂದು ಕಿಡಿಕಾರಿದರು.

ಮಾಜಿ ಸಚಿವ ಸೊಗಡು ಶಿವಣ್ಣ ಮಾತನಾಡಿ ಹೇಮಾವತಿ ಜಿಲ್ಲೆಗೆ ತರಲು ನಡೆದ ಹೋರಾಟ ವೈ.ಕೆ.ರಾಮಯ್ಯ ಅವರನ್ನು ಸ್ಮರಿಸಬೇಕು. ಅಂದಿನ ಕಿಚ್ಚು ಇಂದು ಕಾಣುತ್ತಿಲ್ಲ. ಇಂದಿನ ರಾಜಕಾರಣಿಗಳು ಸ್ವಾರ್ಥಕ್ಕೆ ನಿಂತಿದ್ದಾರೆ. ಆಲಿಬಾಬಾ ಮತ್ತು ನಲವತ್ತು ಮಂದಿ ಕಳ್ಳರು ಎಂಬ ಗುಂಪೇ ಕಾಣುತ್ತಿದೆ. ಇವರಿಗೆ ಅಧಿಕಾರಿಗಳು ದಲ್ಲಾಳಿಗಳಂತೆ ವರ್ತಿಸುತ್ತಾರೆ ಎಂದು ಗುಡುಗಿ ಜೈಲಿನಲ್ಲೇ ಉಪವಾಸ ಮಾಡೋಣ. ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮುಂದುವರೆಸಿ ಎಂದು ಕರೆ ನೀಡಿದರು.

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಅವೈಜ್ಞಾನಿಕ ಪೈಪ್ ಲೈನ್ ಕಾಮಗಾರಿಯಲ್ಲಿ 800 ಮೀಟರ್ ಪೈಪ್ ಹಾಕಲೇಬೇಕು ಎಂದು ಹಠಕ್ಕೆ ಬಿದ್ದ ಸರ್ಕಾರ ಅಧಿಕಾರವನ್ನು ಬಳಸಿಕೊಂಡು ಮುಂದುವರೆದಿದೆ. ಆದರೆ ಕೈಗೆ ಬಳೆ ತೊಟ್ಟುಕೊಳ್ಳುವ ಕೆಲಸ ಮಾಡದೇ ಜಿಲ್ಲೆಯ ಮುಖಂಡರು ಹೋರಾಟಕ್ಕೆ ಧುಮುಕಬೇಕು ಎಂದ ಅವರು ಗುಬ್ಬಿ ಶಾಸಕರು ಸಚಿವರಾಗುವ ಆಸೆಯಲ್ಲಿ ರೈತರನ್ನು ಬಲಿ ಕೊಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೋದಿಲ್ಲ. ನೀವು ಸಚಿವರಾಗಲ್ಲ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು.

ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು, ತಹಶೀಲ್ದಾರ್ ಅವರು ಪ್ರತಿಭಟನಾಕಾರರನ್ನು ತಡೆಯುವ ಪ್ರಯತ್ನ ಮಾಡಿದರು. ಎಲ್ಲಾ ಹೋರಾಟಗಾರರನ್ನು ಬಸ್ಸಿನಲ್ಲಿ ಹೊರ ವಲಯದಲ್ಲಿ ಅತಿಥಿಯಾಗಿಸಿಕೊಂಡು ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹತ್ತಿಕ್ಕುವಲ್ಲಿ ಯಶಸ್ವಿಯಾದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎಚ್.ಟಿ.ಭೈರಪ್ಪ, ಬಿ.ಎಸ್.ಪಂಚಾಕ್ಷರಿ, ಸಿದ್ದರಾಮಯ್ಯ, ಗಿರೀಶ್, ರಾಜಶೇಖರ್, ನಂದೀಶ್, ರೈತ ಸಂಘದ ಶಂಕರಪ್ಪ, ಸಿ.ಜಿ.ಲೋಕೇಶ್, ಸತ್ತಿಗಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...