ಗುಬ್ಬಿ | ರಾಷ್ಟ್ರೀಯ ರೈತರ ದಿನಾಚರಣೆ ಸಾರ್ವಜನಿಕ ಹಬ್ಬವಾಗಿಸಿ : ಸರ್ಕಾರ ಒತ್ತಾಯಿಸಿದ ರೈತ ಸಂಘದ ಸಿ.ಜಿ.ಲೋಕೇಶ್

Date:

ದೇಶದ ಪ್ರಜೆಗಳಿಗೆ ಅನ್ನ ನೀಡುವ ರೈತನ ಸ್ಮರಣೆಗೆ ಡಿಸೆಂಬರ್ 23 ರಂದು ರಾಷ್ಟ್ರೀಯ ರೈತ ದಿನಾಚರಣೆ (ಕಿಸಾನ್ ದಿವಸ್) ಘೋಷಣೆ ಮಾಡಿರುವ ಸರ್ಕಾರ ರೈತರ ದಿನವನ್ನು ಹಬ್ಬವಾಗಿ ಸಾರ್ವಜನಿಕರ ಮಧ್ಯೆ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ರೈತಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಆಗ್ರಹಿಸಿದರು.

ಗುಬ್ಬಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಭಾರತದ ಐದನೇ ಪ್ರಧಾನ ಮಂತ್ರಿಯಾದ ಶ್ರೀ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ ಎಂದರು.

1000800150

ಭಾರತದ ಆರ್ಥಿಕತೆಯ ಬೆನ್ನೆಲುಬು ಮತ್ತು ಗ್ರಾಮೀಣ ಸಮೃದ್ಧಿಗೆ ಗಮನಾರ್ಹ ಕೊಡುಗೆ ನೀಡುವವರು ರೈತರು. ದೇಶದ ಶೇಕಡಾ 70 ರಷ್ಟು ದುಡಿಯುವ ರೈತರು ಸಮಾಜಕ್ಕೆ ನೀಡಿದ ಕೊಡುಗೆಗಳಿಗಾಗಿ ಎಲ್ಲಾ ಜವಾಬ್ದಾರಿಯುತ ರೈತರನ್ನು ಗೌರವಿಸಲು ಮತ್ತು ಪ್ರಶಂಸಿಸಲು, ಪ್ರತಿ ವರ್ಷ ಡಿಸೆಂಬರ್ 23 ರಂದು ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತದೆ. ಆದರೆ ಕೇವಲ ಕೃಷಿ ಇಲಾಖೆಗೆ ಸೀಮಿತಗೊಳಿಸಿ ಕಚೇರಿ ಮಟ್ಟಕ್ಕೆ ಒಂದು ಸಣ್ಣ ಕಾರ್ಯಕ್ರಮ ನಡೆದು ಮುಗಿಯುತ್ತದೆ. ರೈತರ ಕೊಡುಗೆ ಅಪರಿಮಿತ ಎನ್ನುವುದಾದರೆ ದೇಶದಲ್ಲಿ ಹಬ್ಬವಾಗಿಸಿ ಸಾರ್ವಜನಿಕ ಮಧ್ಯೆ ಸರ್ಕಾರಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಿ ಅತ್ಯುತ್ತಮ ರೈತರಿಗೆ ಪ್ರಶಸ್ತಿ ಪುರಸ್ಕಾರ ನೀಡಿ ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...