ಗುಬ್ಬಿ | ರಿಸರ್ವ್ ಬ್ಯಾಂಕ್ ಮುಂದೆ ಜ.29 ರಂದು ರೈತರ ಬೃಹತ್ ಪ್ರತಿಭಟನೆ : ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

Date:

ಕೃಷಿ ಕ್ಷೇತ್ರ ಸದೃಢಗೊಳಿಸಲು ನಬಾರ್ಡ್ ಬ್ಯಾಂಕ್ ಸ್ಥಾಪನೆ ಮಾಡಲಾಗಿತ್ತು. ಆದರೆ ಈಚೆಗೆ ಕೇಂದ್ರ ಸರ್ಕಾರ ನಬಾರ್ಡ್ ಬ್ಯಾಂಕ್ ಗೆ ನೀಡುವ ಅನುದಾನದಲ್ಲಿ ಶೇಕಡಾ 58 ರಷ್ಟು ಕಡಿತ ಮಾಡಿದ ಹಿನ್ನಲೆ ರೈತರಿಗೆ ಅನಾನುಕೂಲವಾಗಿದೆ. ಕೂಡಲೇ ರೈತರ ಕೃಷಿ ಕ್ಷೇತ್ರ ನಾಶ ಮಾಡುವ ಹುನ್ನಾರಕ್ಕೆ ತೆರೆ ಎಳೆಯಲು ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಾವಿರಾರು ರೈತರು ಇದೇ ತಿಂಗಳ 29 ರಂದು ಬೆಂಗಳೂರಿನ ರಿಸರ್ವ್ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಿಂದ ಸಾಲದ ಮೊತ್ತ ಕಡಿತ ಮಾಡುತ್ತಾ ಬಂದಿದೆ. ಸಹಕಾರಿ ಸಂಘಗಳ ಮೂಲಕ ಕೊಡುವ ಸಾಲ ಸೌಲಭ್ಯ ಸಿಗದೆ ರೈತರು ವಾಣಿಜ್ಯ ಬ್ಯಾಂಕ್ ಮುಂದೆ ಹೆಚ್ಚಿನ ಬಡ್ಡಿಗೆ ಸರದಿಯಲ್ಲಿ ಕಾದು ಕುಳಿತಿದ್ದಾರೆ. ಇಂತಹ ದುಸ್ಥಿತಿಗೆ ಕೇಂದ್ರ ಸರ್ಕಾರದ ಕೃಷಿ ವಿರೋಧಿ ನೀತಿ ನೇರ ಕಾರಣ. ಹಂತವಾಗಿ ಕಾರ್ಪೊರೇಟ್ ಕಂಪೆನಿಗೆ ಕೃಷಿ ಕ್ಷೇತ್ರ ಮಾರುವ ಸಂಕಷ್ಟ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

1000943494

ಶೂನ್ಯ ಬಡ್ಡಿ ದರ ಸಾಲ ನೀಡುವ ನಬಾರ್ಡ್ ಬ್ಯಾಂಕ್ ರೈತರಿಗೆ ಕೃಷಿ ಚಟುವಟಿಕೆಗೆ ಹತ್ತಿರವಾಗಿತ್ತು. ಅನುದಾನ ಕಡಿತದಿಂದ ವಾಣಿಜ್ಯ ಬ್ಯಾಂಕ್ ಜೊತೆಗೆ ಮೈಕ್ರೋ ಫೈನಾನ್ಸ್ ಬಳಿ ಸಾಲ ಪಡೆದ ರೈತ ಕುಟುಂಬ ಬೀದಿಗೆ ಬಂದಿದೆ. ಮೈಸೂರು ಚಾಮರಾಜನಗರ ಜಿಲ್ಲೆಯಲ್ಲಿ ರೈತರು ಸಾಲದ ಶೂಲಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೇಕಡಾ 20 ರಿಂದ 25 ರವರೆಗೆ ಬಡ್ಡಿ ವಿಧಿಸುವ ಮೈಕ್ರೋ ಫೈನಾನ್ಸ್ ಗೊಂಡಾ ವರ್ತನೆಯಲ್ಲಿ ಸಾಲ ವಸೂಲಿ ಮಾಡುತ್ತಿದ್ದಾರೆ. ಈ ಸಮಯದಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಬೇಕು ಎಂದು ಆಗ್ರಹಿಸಿದ ಅವರು ರೈತರ ನಿರಂತರ ಹೋರಾಟಕ್ಕೆ ಕೇಂದ್ರ ಸರ್ಕಾರ ನೀಡಿದ್ದ ಭರವಸೆಯಂತೆ ಬೇಡಿಕೆ ಈಡೇರಿಸಬೇಕು. ಸಾಲ ಮನ್ನಾ, ವಿದ್ಯುತ್ ಮೀಟರ್ ಅಳವಡಿಕೆ ರದ್ದು, ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ನಬಾರ್ಡ್ ಉಳಿವು ರೈತರ ಉಳಿವು ಹಾಗೂ ಸಹಕಾರಿ ಸಂಘಗಳ ಉಳಿವು ಎಂಬ ಅಂಶ ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಕಳೆದ ವರ್ಷ ನಬಾರ್ಡ್ ರಾಜ್ಯಕ್ಕೆ 5600 ಕೋಟಿ ರೂಗಳನ್ನು ನೀಡಿತ್ತು. ಈ ಬಾರಿ 2340 ಕೋಟಿ ರೂಗಳನ್ನು ನೀಡಿದೆ. ಇದರಿಂದ ಶೂನ್ಯ ಬಡ್ಡಿಯ 5 ಲಕ್ಷ ಸಾಲಕ್ಕೆ ಕುತ್ತು ಬಂದಿದೆ. ಇದರಿಂದ ರಾಜ್ಯದ 30 ಲಕ್ಷ ರೈತರಿಗೆ ಅನ್ಯಾಯ ಆಗಲಿದೆ. ಸಾಲದ ಸುಳಿಗೆ ಸಿಲುಕಿ ರೈತರ ಸರಣಿ ಆತ್ಮಹತ್ಯೆ ನಡೆಯಲಿದೆ. ಈ ಎಲ್ಲಾ ಅಂಶಗಳನ್ನು ಒಳಗೊಂಡ ಪ್ರತಿಭಟನೆ ರಿಸರ್ವ್ ಬ್ಯಾಂಕ್ ಮುಂದೆ ಸಾವಿರಾರು ರೈತರು ನಡೆಸಲಿದ್ದಾರೆ. ಗುಬ್ಬಿ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮ ಹಕ್ಕು ಪ್ರತಿಪಾದಿಸೋಣ ಎಂದು ಕರೆ ನೀಡಿದರು.

ಈ ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಯುವ ಘಕಟದ ಶಿವಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಸಿ.ಟಿ.ಕುಮಾರ್, ಸತ್ತಿಗಪ್ಪ, ಕುಮಾರಸ್ವಾಮಿ, ಯತೀಶ್ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...