ಗುಬ್ಬಿ | ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ರೀತಿ ಸರಿಯಿಲ್ಲ : ತಾಲೂಕು ಕಚೇರಿ ಸಭೆಯಲ್ಲಿ ಸಾರ್ವಜನಿಕರ ಆರೋಪ

Date:

ಮೈಕ್ರೋ ಫೈನಾನ್ಸ್ ಸಾಲ ನೀಡಿ ನಂತರ ವಸೂಲಾತಿಗೆ ತೀವ್ರ ದುರ್ವರ್ತನೆ ತೋರುತ್ತಾರೆ. ಮನೆಯ ಬಳಿ ಸಾಲಗಾರರಿಗೆ ಅವಮಾನ ಮಾಡುವುದು, ಮನೆ ಸೀಜ್ ಮಾಡುವುದು ಜತೆಗೆ ಲಾಯರ್ ನೋಟೀಸ್, ಗೂಂಡಾವರ್ತನೆ ಮೂಲಕ ಬಡ್ಡಿ ವಸೂಲಿ, ನಾನಾ ಕಾರಣ ನೀಡಿ ಮೀಟರ್ ಬಡ್ಡಿ ವಸೂಲಿ ಹೀಗೆ ಹತ್ತು ಹಲವು ವಿಚಾರ ಪ್ರಸ್ತಾಪಿಸಿದ ಸ್ಥಳೀಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು ವಸೂಲಾತಿ ರೀತಿ ಸರಿ ಪಡಿಸಿಕೊಂಡು ವ್ಯವಹರಿಸಲು ಆಗ್ರಹಿಸಿದರು.

ಗುಬ್ಬಿ ಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಬಿ.ಆರತಿ ಹಾಗೂ ಡಿವೈಎಸ್ಪಿ ಶೇಖರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಜರಿದ್ದು ಸರ್ಕಾರ ವಿಧಿಸಿರುವ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ನಿಯಮಗಳನ್ನು ಚರ್ಚಿಸಿದರು.

ಫೈನಾನ್ಸ್ ಸಿಬ್ಬಂದಿಗಳ ಕಾಟಕ್ಕೆ ರೋಸು ಹೋದ ಹಲವು ಪ್ರಕರಣಗಳನ್ನು ಸಭೆಯಲ್ಲಿ ಚರ್ಚಿಸಿದ ಮುಖಂಡರು ಸಾಲ ವಸೂಲಿ ಮಾಡುವ ಸಿಬ್ಬಂದಿಗಳೇ ಹಣ ಲಪಟಾಯಿಸಿದ ಪ್ರಕರಣ, ಸಾಲ ಪಡೆದಾತ ಮೃತಪಟ್ಟು ಒಂದು ವಾರದಲ್ಲೇ ಮನೆಯನ್ನು ಸೀಜ್ ಮಾಡುವುದು, ಮನೆ ಬಾಗಿಲಲ್ಲಿ ಅವಾಚ್ಯ ಶಬ್ದಗಳಿಂದ ಬೈದ ಘಟನೆ, ರಾತ್ರಿ ವೇಳೆ ಬಾಗಿಲು ತಟ್ಟುವ ಬಗ್ಗೆ ಕಿಡಿಕಾರಿ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ಥಳೀಯ ಹುಡುಗರಿಗೆ ಉದ್ಯೋಗ ನೀಡಿ ಅವರಿಂದಲೇ ಗ್ರಾಹಕರಿಗೆ ನಿಂದನೆ ಮಾಡಿಸುವ ಮೈಕ್ರೋ ಫೈನಾನ್ಸ್ ವ್ಯವಸ್ಥಿತ ಲೂಟಿಕೋರರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿವೈಎಸ್ಪಿ ಶೇಖರ್ ಮಾತನಾಡಿ ಸಾಲ ವಸೂಲಿಗೆ ಬರುವ ಸಿಬ್ಬಂದಿಗಳ ವರ್ತನೆ ಸರಿ ಇರಬೇಕು. ಫೈನಾನ್ಸ್ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವ ವೇಳೆ ಆತನ ಹಿನ್ನಲೆ ತಿಳಿಯಬೇಕು. ನಡತೆ ಬಗ್ಗೆ ಪೊಲೀಸ್ ಹಿನ್ನಲೆ ಕೂಡಾ ಪರಿಶೀಲಿಸಬೇಕು. ರೌಡಿ ಚಟುವಟಿಕೆಯ ವ್ಯಕ್ತಿಗಳಿಗೆ ಕೆಲಸ ನೀಡಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಲ್ಲಿ ಫೈನಾನ್ಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಟಾರ್ಚರ್ ನೀಡಿದ ದೂರುಗಳು ಬರುತ್ತಿವೆ. ಸರ್ಕಾರ ಸೂಚಿಸಿದಂತೆ ಸಿಬ್ಬಂದಿಗಳ ವರ್ತನೆ ಬಗ್ಗೆ ದೂರು ಬಾರದಂತೆ ಎಚ್ಚರಿಕೆ ವಹಿಸಲು ತಿಳಿಸಿದರು.

ತಹಶೀಲ್ದಾರ್ ಬಿ.ಆರತಿ ಮಾತನಾಡಿ ಮೈಕ್ರೋ ಫೈನಾನ್ಸ್ ಸಾಲ ವಸೂಲಾತಿ ಬಗ್ಗೆ ಸರ್ಕಾರ ನಿಯಮಗಳನ್ನು ಸೂಚಿಸಿದೆ. ಅದರಂತೆ ನಡೆದುಕೊಂಡು ಸಾಲ ವಸೂಲಿ ಮಾಡಬೇಕಿದೆ. ಬೆಳಿಗ್ಗೆ 6 ರಿಂದ ಸಂಜೆ 6 ರೊಳಗೆ ಮಾತ್ರ ವಸೂಲಿ ಕೆಲಸ ಮಾಡಬೇಕಿದೆ. ಗ್ರಾಹಕರ ಬಳಿ ಸರಿಯಾದ ವರ್ತನೆಯಲ್ಲಿ ಹಣ ಕೇಳಬೇಕಿದೆ. ಮನಬಂದಂತೆ ಮಾತುಗಳು, ಅವಾಚ್ಯ ಶಬ್ದಗಳಿಂದ ನಿಂದನೆ, ವಸ್ತುಗಳ ಸೀಜ್, ಹರಾಜು ಪ್ರಕ್ರಿಯೆ ಹೀಗೆ ಮಾನಸಿಕ ಹಿಂಸೆ ನೀಡಿದಲ್ಲಿ ಕಾನೂನು ಕ್ರಮಕ್ಕೆ ಸರ್ಕಾರ ಸೂಚಿಸಿದೆ ಎಂದು ನಿಯಮಾವಳಿ ತಿಳಿಸಿದರು.

ಈ ಸಂದರ್ಭದಲ್ಲಿ ತಾಪಂ ಇಓ ಶಿವಪ್ರಕಾಶ್, ಸಿಪಿಐ ಗೋಪಿನಾಥ್, ಗುಬ್ಬಿ ಪಿಎಸ್ಐ ಸುನೀಲ್ ಕುಮಾರ್, ಸಿ.ಎಸ್.ಪುರ ಪಿಎಸ್ಐ ಶಿವಕುಮಾರ್, ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ತಾಲ್ಲೂಕು ಅಧ್ಯಕ್ಷ ಕೆ.ಎನ್. ವೆಂಕಟೇಗೌಡ, ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಮುಖಂಡರಾದ ಎಚ್.ಟಿ.ಭೈರಪ್ಪ, ಸಿ.ಆರ್.ಶಂಕರ್ ಕುಮಾರ್, ಬಿ.ಲೋಕೇಶ್, ಜಿ.ಆರ್.ರಮೇಶ, ಡಿ.ರಘು, ಜಿ.ವಿ.ಮಂಜುನಾಥ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...