ಗುಬ್ಬಿ | ಕಳ್ಳಿಪಾಳ್ಯ ರೈಲ್ವೆ ಅಂಡರ್ ಪಾಸ್ ಸೇತುವೆ ಸ್ಥಳ ಪರಿಶೀಲಿಸಿದ ಸಚಿವ ಸೋಮಣ್ಣ

Date:

ಬಹು ನಿರೀಕ್ಷೆಯ ಕಳ್ಳಿಪಾಳ್ಯ ರೈಲ್ವೆ ಅಂಡರ್ ಪಾಸ್ ಸೇತುವೆಗೆ ಚಾಲನೆ ನೀಡಲು ಸ್ಥಳ ಪರಿಶೀಲನೆ ನಡೆಸಿ ಏಳು ದಿನದಲ್ಲಿ ಕಾಮಗಾರಿ ಆರಂಭಿಸಿ ಆರು ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಕೊಡುವ ಭರವಸೆಯನ್ನು ಕೇಂದ್ರದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ನೀಡಿದರು.

ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಕಳ್ಳಿಪಾಳ್ಯ ಗೇಟ್ ಬಳಿ ಸ್ಥಳ ಪರಿಶೀಲನೆ ನಡೆಸಿದ ಸಚಿವ ಸೋಮಣ್ಣ ಅವರು ಸ್ಥಳದಲ್ಲೇ ಕಂದಾಯ ಅಧಿಕಾರಿಗಳು ಹಾಗೂ ರೈಲ್ವೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಿ ಕೂಡಲೇ ಕೆಲಸ ಆರಂಭಿಸಲು ಸೂಚನೆ ನೀಡಿದರು.

ರೈಲ್ವೆ ಹಳಿಯ ಪಕ್ಕ ಭೂಮಿ ವಶಕ್ಕೆ ಪಡೆಯಲು ಕೇಂದ್ರ ಸರ್ಕಾರ ಈಗಾಗಲೇ 58 ಲಕ್ಷ ರೂಗಳನ್ನು ಮೀಸಲಿಟ್ಟಿದೆ. ಕಂದಾಯ ಇಲಾಖೆ ತೀವ್ರಗತಿಯಲ್ಲಿ ವಶಕ್ಕೆ ಪಡೆಯುವ ಎಲ್ಲಾ ಪ್ರಕ್ರಿಯೆ ನಡೆಸಿ ಕೆಲಸಕ್ಕೆ ಚಾಲನೆ ನೀಡಬೇಕು. ಟೆಂಡರ್ ಪ್ರಕ್ರಿಯೆ ಮುಗಿದ ಕಳ್ಳಿಪಾಳ್ಯ ಗೇಟ್ ಹಾಗೂ ಮಲ್ಲಸಂದ್ರ ಗೇಟ್ ಸೇತುವೆ ಕಾಮಗಾರಿಗೆ ಇನ್ನೆರೆಡು ದಿನದಲ್ಲಿ ಭೂಮಿ ವಶಕ್ಕೆ ಪಡೆಯುವ ದಾಖಲೆ ಸಿದ್ಧವಾಗಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದಿಂದ 23 ಸಾವಿರ ಕೋಟಿ ರೂಗಳನ್ನು ಮೀಸಲಿಟ್ಟ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ ರೈಲ್ವೆ ಸೇತುವೆ ಕಾಮಗಾರಿ 2027 ರೊಳಗೆ ಪೂರ್ಣಗೊಳ್ಳಲಿದೆ. ಈ ಎಲ್ಲಾ ಕೆಲಸಗಳಿಗೆ ಸ್ಥಳೀಯರ ಸಹಕಾರ ಅತ್ಯಗತ್ಯ. ನಿಮ್ಮ ವೈಯಕ್ತಿಕ ಆಸಕ್ತಿ ತೋರಿ ಕೆಲಸ ಪೂರ್ಣಗೊಳಿಸಿ ಎಂದು ಮನವಿ ಮಾಡಿದರು.

ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಸುಮಾರು 20 ಕ್ಕೂ ಅಧಿಕ ಗ್ರಾಮಗಳಿಗೆ ಸಂಪರ್ಕ ರೈಲ್ವೆ ಗೇಟ್ ಸುಗಮ ಸಂಚಾರಕ್ಕೆ ಅಡ್ಡಿಯಾಗಿತ್ತು. ಹಾಲು ವಾಹನ, ಶಾಲಾ ವಾಹನ ಎಲ್ಲವೂ ಸಕಾಲಕ್ಕೆ ತಲುತ್ತಿರಲಿಲ್ಲ. ಗೇಟ್ ಬಂದ್ ಆದರೆ ಹದಿನೈದು ನಿಮಿಷ ಕಾಯಬೇಕಿತ್ತು. ಈ ಅಂಡರ್ ಪಾಸ್ ಸೇತುವೆ ಬಗ್ಗೆ ರೈಲ್ವೆ ಸಚಿವ ಸೋಮಣ್ಣ ಅವರಲ್ಲಿ ಮನವಿ ಮಾಡಿದ್ದೆವು. ಮನವಿ ಪುರಸ್ಕರಿಸಿ ಕೂಡಲೇ 16 ಕೋಟಿ ರೂಗಳ ಮಂಜೂರು ಮಾಡಿದ್ದಾರೆ. ಶೀಘ್ರದಲ್ಲಿ ಕಾಮಗಾರಿ ನಡೆಸಬೇಕು. ಸ್ಥಳೀಯರ ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ನಹೀದಾ ಜಂಜಂ, ತಹಶೀಲ್ದಾರ್ ಬಿ.ಆರತಿ, ನೈರುತ್ಯ ರೈಲ್ವೆ ಬಿಆರ್ ಎಂ ಅಶುತೋಷ್ ಸಿಂಗ್, ಮುಖಂಡರಾದ ಎಸ್.ಡಿ.ದಿಲೀಪ್ ಕುಮಾರ್, ಬಿ.ಎಸ್.ನಾಗರಾಜು, ಭೈರಪ್ಪ, ಯೋಗಾನಂದ, ಶಿವಪ್ರಸಾದ್, ಬ್ಯಾಟರಂಗೇಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...