ಗುಬ್ಬಿ | ವೈಯಕ್ತಿಕ ದ್ವೇಷ : ಅಡಿಕೆ ಮರ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

Date:

 ತನ್ನ ಜಮೀನಿಗೆ ಹೋಗಲು ದಾರಿ ಬಿಡಲಿಲ್ಲ ಎಂಬ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಉಂಟಾದ ವೈಷಮ್ಯ ವಿಕೋಪಕ್ಕೆ ತಿರುಗಿ ಜೀವನಕ್ಕೆ ಆಧಾರವಾಗಿದ್ದ ನೂರಾರು ಅಡಿಕೆ ಮರಗಳನ್ನು ಅಮಾನುಷವಾಗಿ ಕಡಿದು ವಿಕೃತಿ ಮೆರೆದಿರುವ ಘಟನೆ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಜನಕದೇವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕಡಬ ಹೋಬಳಿಯ ಜನಕ ದೇವನಹಳ್ಳಿ ಗ್ರಾಮದ ರವೀಶ್ ಎಂಬುವರಿಗೆ ಸೇರಿದ ಸರ್ವೇ ನಂಬರ್ 14 ರ ವಿಸ್ತೀರ್ಣ 2 ಎಕರೆ 16 ಗುಂಟೆ ಜಮೀನಿನಲ್ಲಿ ಸೊಗಸಾಗಿ ಬೆಳೆದು ನಿಂತಿದ್ದ 60 ಕ್ಕೂ ಹೆಚ್ಚು ಅಡಿಕೆ ಮರಗಳನ್ನು ತಡರಾತ್ರಿ ದಾರುಣವಾಗಿ ಕಡಿದು ಹಾಕಿರುವ ಘಟನೆ ನಡೆದಿದೆ.

ಕಳೆದ 3 ತಿಂಗಳ ಹಿಂದೆ ಪಕ್ಕದ ಜಮೀನಿನ ಮಾಲೀಕರೊಬ್ಬರು ತಮ್ಮ ಜಮೀನಿಗೆ ಹೋಗಲು ರಸ್ತೆ ಇಲ್ಲ ಎಂದು ಗುಬ್ಬಿ ಪೊಲೀಸ್ ಠಾಣೆಗೆ ಸುಳ್ಳು ದೂರು ನೀಡಿದ್ದು, ಈ ಪೈಕಿ ವಿಚಾರಣೆ ನಡೆಸಿದ ಪೊಲೀಸರು ದೂರು ನೀಡಿದ್ದ ವ್ಯಕ್ತಿಗೆ ತಿಳುವಳಿಕೆ ನೀಡಿ ಕಳುಹಿಸಿದ್ದರು. ಅಂದಿನಿಂದ ಸುಮ್ಮನಿದ್ದ ಕೆಲವರು ನಮ್ಮಗಳ ಮೇಲಿನ ದ್ವೇಷಕ್ಕೆ ಮಕ್ಕಳಂತೆ ಬೆಳೆಸಿದ್ದ ಅಡಿಕೆ ಮರಗಳನ್ನು ತಡರಾತ್ರಿ ಕಡಿದು ಹಾಕಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಜಮೀನು ಮಾಲೀಕ ರವೀಶ್ ಹೆಂಡತಿ ಮಹಾದೇವಮ್ಮ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾದೇವಮ್ಮ ರವರ ತಾಯಿ ಚಿಕ್ಕಮ್ಮ ಮಾತನಾಡಿ ಜೀವನಕ್ಕೆ ಆಧಾರವಾಗಿದ್ದ ಅಡಿಕೆ ಮರಗಳನ್ನು ಕಡಿದು ಹಾಕಿದ್ದಾರೆ. ಇಂಥಹ ಕೆಲಸ ಮಾಡಿರುವ ಇವರನ್ನು ದೇವರು ಎಂದಿಗೂ ಶಿಕ್ಷೆ ನೀಡದೆ ಬಿಡುವುದಿಲ್ಲ ಎಂದು ಭಾವುಕರಾದರು.

ಮಗ ಸಂಜಯ್ ಮಾತನಾಡಿ ಹಲವು ವರ್ಷಗಳಿಂದ ಕಷ್ಟ ಪಟ್ಟು ಹೊಟ್ಟೆ ಬಟ್ಟೆ ಕಟ್ಟಿ ಅಡಿಕೆ ಮರಗಳನ್ನು ಹಾಕಿದ್ದೋ ಆದರೆ ರಸ್ತೆ ಬಿಡಲಿಲ್ಲ ಎಂಬ ಮಾತ್ರಕ್ಕೆ ಪಕ್ಕದ ಜಮೀನಿನ ಗಂಗಾಧರಯ್ಯ ನ ಮಗ ಬಸವರಾಜು ಈ ಕೃತ್ಯ ಮಾಡಿದ್ದು ಮರಗಳನ್ನೇ ಈ ರೀತಿ ಮಾಡಿರುವ ಇವರು ನಮ್ಮ ಮೇಲೆ ಏನೆಲ್ಲಾ ಮಾಡುತ್ತಾರೆ ಎಂಬುದನ್ನ ಅರಿತು ನಮಗೆ ನ್ಯಾಯ ಕೊಡಿಸುವಂತೆ ಅಂಗಲಾಚಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...