ಗುಬ್ಬಿ | ನಾಗರಾಜು ಹುಟ್ಟುಹಬ್ಬ : ಆರೋಗ್ಯ, ರಕ್ತದಾನ ಶಿಬಿರ ಯಶಸ್ವಿ

Date:

ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಅವರ 50 ನೇ ವರ್ಷದ ಹುಟ್ಟುಹಬ್ಬ ಆಚರಣೆ ಹಿನ್ನಲೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಅರ್ಥ ತಂದುಕೊಟ್ಟಿತು.

ಗುಬ್ಬಿ ಪಟ್ಟಣದ ಬಂಗ್ಲೋಪಾಳ್ಯ ಶಾಲಾ ಮೈದಾನದಲ್ಲಿ ಆಯೋಜನೆ ಮಾಡಿದ್ದ ಆರೋಗ್ಯ ಶಿಬಿರ ಬೆಳಿಗ್ಗೆಯಿಂದ ಸಾವಿರಾರು ಮಂದಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿದರು. 40 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿ ಶಿಬಿರವನ್ನು ಅರ್ಥಪೂರ್ಣಗೊಳಿಸಿದರು.

ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ವೇದಿಕೆಗೆ ಆಗಮಿಸಿದ ಬಿ.ಎಸ್.ನಾಗರಾಜು ದೊಡ್ಡ ಕೇಕ್ ಕತ್ತರಿಸಿ ಅಭಿಮಾನಿಗಳಿಂದ ಅಭಿನಂದನೆ ಸ್ವೀಕರಿಸಿ ನಂತರ ಮಾತನಾಡಿ ತಾಲ್ಲೂಕಿನಲ್ಲಿ ಕಳೆದ ನಾಲ್ಕು ವರ್ಷದಲ್ಲೇ ಜನರ ಪ್ರೀತಿ ಗಳಿಸಿದ್ದೇನೆ. ಜೆಡಿಎಸ್ ಅಭ್ಯರ್ಥಿಯಾಗಿ 43 ಸಾವಿರ ಮತ ಪಡೆದ ನಾನು ನಂಬರ್ ಗೇಮ್ ನಲ್ಲಿ ಸೋತಿದ್ದರೂ ಜನರ ಪ್ರೀತಿ ಗಳಿಸುವಲ್ಲಿ ಯಶಸ್ವಿಯಾಗಿದ್ದಾನೆ. ಇದಕ್ಕೆ ಇಂದಿನ ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಜನರೇ ಸಾಕ್ಷಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇವಲ ಚುನಾವಣೆಗೆ ನಾನು ಬಂದಿಲ್ಲ. ತಾಲ್ಲೂಕಿನ ರೈತನ ಮಗನಾಗಿ ಈ ಜನರಿಗಾಗಿ ದುಡಿಯಲು ಬಂದಿದ್ದೇನೆ. ಹೇಮಾವತಿ ಹೋರಾಟ ನಮ್ಮ ಮೊದಲ ಯಶಸ್ವಿ ಹೋರಾಟ. ಎನ್ ಡಿಎ ಮೈತ್ರಿ ಇಲ್ಲಿ ವಿರೋಧ ಪಕ್ಷವಾಗಿ ಜವಾಬ್ದಾರಿ ಕೆಲಸ ನಡೆಸಿದೆ. ನೀರಿಗಾಗಿ ನಿರಂತರ ಹೋರಾಟ ನಡೆಸುತ್ತೇನೆ. ಯಾವುದೇ ಕಾರಣಕ್ಕೂ ಲಿಂಕ್ ಕೆನಾಲ್ ಮಾಡಲು ಬಿಡುವುದಿಲ್ಲ ಎಂದ ಅವರು ದಿಲೀಪ್ ಅವರು ಸಹ ನಮ್ಮೊಂದಿಗೆ ಮೈತ್ರಿ ನಾಯಕರಾಗಿ ಜೊತೆಗಿದ್ದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಭ್ರಷ್ಟಾಚಾರ ವಿರುದ್ಧ ಸಹ ಹೊರಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

1001713439

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ನಾಗರಾಜು ಮತ್ತು ನಾನು ಒಗ್ಗೂಡಿ ಎನ್ ಡಿಎ ಮೂಲಕ ಒಂದು ಶಕ್ತಿಯಾಗಿ ತಾಲ್ಲೂಕಿನಲ್ಲಿ ವಿರೋಧ ಪಕ್ಷವಾಗಿ ಹೊರಹೊಮ್ಮುವ ಮೂಲಕ ಅಸಮರ್ಥ ಕೆಲಸಗಳ ವಿರುದ್ಧ ನಿಂತು ಜನಪರ ಕೆಲಸ ಮಾಡುತ್ತೇವೆ. ಚುನಾವಣೆಯಲ್ಲಿ ನಮ್ಮಿಬ್ಬರಿಗೂ ಆಶೀರ್ವಾದ ಸಿಗಲಿಲ್ಲ . ಆದರೂ ವಿರೋಧ ಪಕ್ಷವಾಗಿ ಒಟ್ಟಿಗೆ ಜನಪರ ನಿಲ್ಲುತ್ತೇವೆ. ಮೊದಲ ಹೋರಾಟ ಹೇಮಾವತಿ ಕೆನಾಲ್ ನಿಲ್ಲಿಸುವಲ್ಲಿ ಗೆದ್ದಿದ್ದೇವೆ. ಆದರೆ ಸಂಪೂರ್ಣ ಕಾಮಗಾರಿ ರದ್ದು ಮಾಡಲು ಹೋರಾಟ ನಡೆಸಲೇ ಬೇಕು ಎಂದ ಅವರು ನಾಗರಾಜು ಅವರಿಗೆ ದೇವರು ಆರೋಗ್ಯ ಕೊಟ್ಟು ಹೋರಾಟದ ಶಕ್ತಿ ಹೆಚ್ಚಲಿ ಎಂದು ಆಶಿಸಿದರು.

ಮುಖಂಡ ಎಂ.ಜಿ.ಶಿವಲಿಂಗಯ್ಯ ಮಾತನಾಡಿ ದಿಲೀಪ್ ಮತ್ತು ನಾಗರಾಜು ಅವರಿಗೆ ಬಂದ ಒಟ್ಟು ಮತಗಳು ಒಂದು ಲಕ್ಷ. ಈ ಮತಗಳು ಮುಂದಿನ ಚುನಾವಣೆಯಲ್ಲಿ ಒಗ್ಗೂಡಿ ಬರಲಿದೆ. 40 ಸಾವಿರ ಅಂತರದ ಗೆಲುವು ಎನ್ ಡಿಎ ಅಭ್ಯರ್ಥಿಯದ್ದಾಗಲಿದೆ. ಇದು ಐತಿಹಾಸಿಕ ಗೆಲುವು ಆಗಲಿದೆ ಎಂದರು.

1001713440

ಜೆಡಿಎಸ್ ಮುಖಂಡರಾದ ಕಳ್ಳಿಪಾಳ್ಯ ಲೋಕೇಶ್, ಜಿ.ಎನ್.ಬೆಟ್ಟಸ್ವಾಮಿ ಹಾಗೂ ಯೋಜನಂದಕುಮಾರ್ ಮಾತನಾಡಿ ನಾಗರಾಜು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ನಂತರ ಅಭಿಮಾನಿಗಳು ಬೃಹತ್ ಹೂವಿನಹಾರ ಹಾಕಿ, ಕಂಬಳಿ ಹೊದಿಸಿ ಕುರಿ ಮರಿಯನ್ನು ಕೊಡುಗೆಯಾಗಿ ನೀಡಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಚಿಕ್ಕವೀರಯ್ಯ, ಮುಖಂಡರಾದ ಸಿದ್ದಗಂಗಮ್ಮ, ಜಿ.ಡಿ.ಸುರೇಶಗೌಡ, ಕೆ.ಬಿ.ಕೃಷ್ಣಪ್ಪ, ಪಪಂ ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಜಿ.ಸಿ.ಕೃಷ್ಣಮೂರ್ತಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಲರಾಮಯ್ಯ, ಮುಖಂಡರಾದ ಡಿ.ರಘು, ಜಿ.ಎಂ.ಶಿವಾನಂದ, ರುದ್ರೇಶ್, ಚಂದು, ವೆಂಕಟೇಶ್, ಗುಬ್ಬಿಹಟ್ಟಿ ಮಹಾಲಿಂಗಯ್ಯ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...