ಗುಬ್ಬಿ | ನಡೆಯದ ಅವಿಶ್ವಾಸ ನಿರ್ಣಯ : ಜಿ.ಹೊಸಹಳ್ಳಿ ಗ್ರಾಪಂ ಅಧ್ಯಕ್ಷರಿಗೆ ದೊರೆತ ಅಚ್ಚರಿಯ ವಿಶ್ವಾಸ

Date:

ಗುಬ್ಬಿ ತಾಲ್ಲೂಕಿನ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿ ಮಾಡಲು ಬುಧವಾರ ನಡೆದ ಅವಿಶ್ವಾಸ ನಿರ್ಣಯ ಸಭೆಗೆ ಮುನ್ನ ನಡೆದ ಹೈಡ್ರಾಮಾದಿಂದ ಸಭೆಗೆ ಸದಸ್ಯರ ಗೈರು ಕಾಣಿಸಿತು. ಅವಿಶ್ವಾಸ ಬದಲು ಅಧ್ಯಕ್ಷರ ಪರ ವಿಶ್ವಾಸ ಕಾಣಿಸಿದ್ದು ಅಚ್ಚರಿ ಎನಿಸಿತು. ಕೆಲ ಸದಸ್ಯರ ನಿರೀಕ್ಷೆ ಹುಸಿಯಾಗಿ ಮುಖಭಂಗ ಅನುಭವಿಸುವಂತಾಯಿತು.

ಬೆಳಿಗ್ಗೆ 11 ಗಂಟೆಗೆ ಅವಿಶ್ವಾಸ ನಿರ್ಣಯ ಸಭೆ ಕರೆದ ಉಪವಿಭಾಗಾಧಿಕಾರಿ ನಹೀದ್ ಜಂಜಂ ನಿಗದಿತ ಸಮಯದವರೆಗೆ ಕಾದು ಸದಸ್ಯರ ಗೈರು ಹಾಜರಾತಿ ಮೂಲಕ ತಮ್ಮ ಪ್ರಕ್ರಿಯೆ ಮುಗಿಸಿದರು.

ನಂತರ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ ಅಧ್ಯಕ್ಷೆ ಭಾಗ್ಯಮ್ಮ ನರಸಿಂಹರಾಜು ಸೇರಿದಂತೆ ಒಟ್ಟು 13 ಮಂದಿ ಸದಸ್ಯರು ಒಗ್ಗೂಡಿ ತಮ್ಮ ವಿರುದ್ಧದ ಅವಿಶ್ವಾಸ ನಿರ್ಣಯ ವಿರೋಧವಾಗಿ ಪರ ನಿಂತು ಅಧ್ಯಕ್ಷರಿಗೆ ವಿಶ್ವಾಸ ವ್ಯಕ್ತ ಪಡಿಸಿದ ಹಿನ್ನಲೆ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದ್ದಿಗಾರರ ಜೊತೆ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ ನರಸಿಂಹರಾಜು ಕಳೆದೆರೆಡು ವರ್ಷದಿಂದ ಪಂಚಾಯಿತಿಯಲ್ಲಿ ಎಲ್ಲಾ ಸದಸ್ಯರ ವಿಶ್ವಾಸದಲ್ಲಿ ಅಭಿವೃದ್ದಿ ಕೆಲಸ ಮಾಡಲಾಗಿದೆ. ನಾನು ಕೂಡ ನನ್ನ ಅವಧಿಯಲ್ಲಿ ಸದಸ್ಯರ ಎಲ್ಲಾ ಕೆಲಸವನ್ನು ಮಾಡಿದ್ದೇನೆ. ನಮ್ಮ ಕಾರ್ಯ ವೈಖರಿ ಸಹಿಸದ ಕೆಲ ಸದಸ್ಯರ ಚಿತಾವಣೆ ಇಂದು ವಿಫಲವಾಗಿದೆ. 13 ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಾಲ್ಕು ತಿಂಗಳು ಅಧಿಕಾರ ಅಚ್ಚುಕಟ್ಟಾಗಿ ನಿರ್ವಹಿಸುತ್ತೇವೆ ಎಂದರು.

ಗ್ರಾಪಂ ಸದಸ್ಯ ರೇಣುಕಾ ಪ್ರಸಾದ್ ಮಾತನಾಡಿ ಕಳೆದೆರಡು ವರ್ಷದಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಕೆಲಸಗಳು ನಡೆದಿವೆ. ಇತ್ತೀಚಿಗೆ ಕೆಲ ಸದಸ್ಯರ ಅಸಮಾಧಾನ ಈ ಅವಿಶ್ವಾಸ ಸಭೆಗೆ ಬಂದು ನಿಂತಿದೆ. ಆದರೆ ಅಧ್ಯಕ್ಷರ ಜೊತೆ 13 ಸದಸ್ಯರು ಇದ್ದ ಕಾರಣ ಸಭೆ ವಿಫಲವಾಗಿದೆ. ನನಗೂ ವೈಯಕ್ತಿಕವಾಗಿ ಸಾಕಷ್ಟು ನೋವುಗಳು ಆಗಿವೆ. ಅಧ್ಯಕ್ಷ ಸ್ಥಾನ ಸಿಗದಂತೆ ನನ್ನ ವಿರುದ್ಧ ಕುತಂತ್ರಗಳು ನಡೆದಿವೆ. ಈಗ ಅವುಗಳು ಅವರಿಗೆ ತಿರುಮಂತ್ರ ಆಗಿದೆ. ಉಳಿದ ನಾಲ್ಕು ತಿಂಗಳ ಅಧಿಕಾರಕ್ಕೆ ಎಲ್ಲಾ ಸದಸ್ಯರ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ ಎಂದರು.

ನಂತರ ಸದಸ್ಯರು ಸಭೆ ನಡೆಸಿ ಅಧ್ಯಕ್ಷರ ರಾಜೀನಾಮೆ ಪ್ರಹಸನ ಕೂಡಾ ಕೆಲ ಕಾಲ ನಡೆಯಿತು. ನಂತರ ಪಿಡಿಓ ಅವರ ಬಳಿ ರಾಜೀನಾಮೆ ಸಲ್ಲಿಸಿದ್ದಾರೆ. ಉಪ ವಿಭಾಗಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಸಲು ತುಮಕೂರು ಕಡೆ ಈ ಸದಸ್ಯರ ತಂಡ ತೆರಳಿದೆ. ರಾಜೀನಾಮೆ ಮುಂದಿನ ಆಡಳಿತ ಬಗ್ಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು 13 ಸದಸ್ಯರು ಸಮ್ಮತಿ ವ್ಯಕ್ತಪಡಿಸಿದರು. ಸದಸ್ಯರ ಮುಂದಿನ ನಡೆ ಕೌತುಕವಾಗಿ ಕಾಣುತ್ತಿದೆ. ಉಳಿದ ನಾಲ್ಕು ತಿಂಗಳ ಅಧಿಕಾರ ಹಂಚಿಕೆ ಹೇಗೆ ಎಂಬ ಪ್ರಶ್ನೆ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕರಲ್ಲಿ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...