ಗುಬ್ಬಿ | ಮೀಸಲಾತಿ ಪಡೆದು ಬೆಳೆದವರೇ ಮತ್ತೇ ಮೀಸಲಾತಿ ಪಡೆಯುತ್ತಾರೆ : ಶಾಸಕ ಎಸ್.ಆರ್.ಶ್ರೀನಿವಾಸ್.

Date:

ಸಂವಿಧಾನ ಬದ್ಧ ಮೀಸಲಾತಿ ಪಡೆದು ಸಮಾಜದಲ್ಲಿ ಬೆಳೆದು ಗುರುತಿಸಿಕೊಂಡವರೇ ಮರಳಿ ಮೀಸಲಾತಿ ಪಡೆಯುತ್ತಿರುವುದು ಸೋಜಿಗದ ಸಂಗತಿ. ಶೋಷಿತ ವರ್ಗ ಹಳ್ಳಿಗಾಡಿನಲ್ಲಿ ಬಡತನದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇಂತಹ ಜನರ ಬಾಳಿಗೆ ಬೆಳಕು ನೀಡುವ ಚಿಂತನೆ ನಡೆಸಿ ಮೀಸಲಾತಿ ದೊರೆಕಿಸಿಕೊಟ್ಟರೆ ಅಂಬೇಡ್ಕರ್ ಜಯಂತಿ ಅರ್ಥ ಸಿಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಗುಬ್ಬಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತಪರ ಸಂಘಟನೆಗಳ ಒಕ್ಕೂಟ ನಡೆಸಿದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ತಮಟೆ ಬಾರಿಸಿ ಕುಣಿದು ಕುಪ್ಪಳಿಸುವ ಬದಲು ಮುಂದಿನ ಪೀಳಿಗೆಗೆ ಉತ್ತಮ ಶಿಕ್ಷಣ ಒದಗಿಸುವ ಚಿಂತನೆ ನಡೆಸಬೇಕು. ಅಂಬೇಡ್ಕರ್ ಕನಸು ಸಾಕರಗೊಳಿಸಲು ಶಿಕ್ಷಣ ಸಂಘಟನೆ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಸಮಾನತೆ ಸಾರುವ ಕೆಲಸ 12 ನೇ ಶತಮಾನದಲ್ಲಿ ಬಸವಣ್ಣ ಅವರು ಕ್ರಾಂತಿ ನಡೆಸಿದ್ದರು. ಅಂಬೇಡ್ಕರ್ ಅವರು ಶಿಕ್ಷಣ ಮೂಲಕ ಸಂವಿಧಾನ ರಚಿಸಿ ಶೋಷಿತರು, ತುಳಿತಕ್ಕೆ ಒಳಗಾದವರ ಪರ ನಿಂತು ಕಾನೂನು ಮೂಲಕ ಅನುಕೂಲ ಮಾಡಿಕೊಟ್ಟರು. ಆದರೆ ಈಗ ಓದು ಬರಹ ಮಾಡದೆ ಕೇವಲ ಸರ್ಕಾರ ನೋಡುವ ಮೀಸಲಾತಿ ಸವಲತ್ತುಗಳತ್ತ ನೋಡುವುದು ಪದ್ಧತಿಯಾಗಿದೆ. ಕೇವಲ ಭಾಷಣ ಮೂಲಕ ಸಮಾನತೆ ಸಾರದೇ ವಾಸ್ತವ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು ಅಂಬೇಡ್ಕರ್ ಸಾಧನೆಗೆ ಕಾರಣವಾಗಿದ್ದು ಅಂದಿನ ಶೋಷಣೆ. ಅಸ್ಪೃಶ್ಯತೆ, ಜಾತಿ ಬೇದ, ಮೇಲು ಕೀಳು ಇವೆಲ್ಲಾ ನೋವು ಅನುಭವಿಸಿ ಬೀದಿಯಲ್ಲಿ ಓದಿ ಶಿಕ್ಷಣ ಪಡೆದರು. ಅದರ ಪರಿಣಾಮ ಸಂವಿಧಾನ ರಚನೆ. ಎಲ್ಲಾ ಜಾತಿ ವರ್ಗಕ್ಕೂ ಸಮಾನತೆಯ ಕಾನೂನು ಕ್ರಮ ರಚಿಸಿ ವಿಶ್ವ ಖ್ಯಾತಿ ಗಳಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಪನ್ಯಾಸಕ ಡಾ.ಟಿ.ಎಚ್.ಮಂಜುನಾಥ್ ಮಾತನಾಡಿ 51 ಸಾವಿರ ಪುಸ್ತಕವನ್ನು ಅಧ್ಯಯನ ಮಾಡಿ ಸಂವಿಧಾನ ರಚಿಸಿದ ಅಂಬೇಡ್ಕರ್ ಜೀವನ ಬಡತನ, ಶೋಷಣೆ, ತುಳಿತ, ಅಪಮಾನ ಎಲ್ಲವೂ ಕಂಡಿತ್ತು. ಎಲ್ಲಾ ಅವಮಾನಗಳ ಮಧ್ಯೆ ಶಿಕ್ಷಣ ಪಡೆಯುವ ಹೋರಾಟದಲ್ಲಿ ಗೆಲುವು ಸಾಧಿಸಿದರು. 52 ಡಿಗ್ರಿ ಪಡೆದರು. ವಿದೇಶೀ ಪ್ರಜಾತಂತ್ರ ಅಧ್ಯಯನ ಮಾಡಿ ವಿಶ್ವ ಒಪ್ಪುವ ಸಂವಿಧಾನ ಭಾರತಕ್ಕೆ ರಚಿಸಿದರು. ಅರ್ಥಶಾಸ್ತ್ರಜ್ಞ, ವಕೀಲ, ಉಪನ್ಯಾಸಕ ಹೀಗೆ ಅನೇಕ ಹುದ್ದೆ ನಡೆಸಿ ರಾಜಕಾರಣ ಕೂಡಾ ನೋಡಿದರೂ ಆದರೆ ನಮ್ಮ ಜನರನ್ನು ಮುಖ್ಯವಾಹಿನಿಗೆ ತರುವ ಚಿಂತನೆ ಕನಸಿನಲ್ಲೂ ಜಪಿಸಿದ್ದರು. ನನ್ನ ಜನರ ಬಗ್ಗೆ ಕಣ್ಣೀರು ನಿರಂತರ ಹಾಕಿ ಸಂವಿಧಾನ ಶಕ್ತಿ ತಿಳಿಸಿದರು. ಅದರ ಪರಿಣಾಮ ಈಗ ಸಮಾಜ ಪರಿವರ್ತನೆಯತ್ತ ಸಾಗಿದೆ. ಇಂತಹ ಸಾಧನೆಗೆ ಭಾರತರತ್ನ ಪ್ರಶಸ್ತಿ ನೀಡಿರಲಿಲ್ಲ. ಆದರೆ ಅವರ ಹುಟ್ಟಿನಿಂದಲೇ ಬಿಆರ್ ಅಂದರೆ ಭಾರತ ರತ್ನ ಗಳಿಸಿದ್ದರು ಎಂದರು.

ತಹಶೀಲ್ದಾರ್ ಬಿ.ಆರತಿ ಮಾತನಾಡಿ ಅಂಬೇಡ್ಕರ್ ಚಿಂತನೆ ಫಲ ಎಲ್ಲಾ ವರ್ಗದ ಜನ ಶಿಕ್ಷಣ ಪಡೆದು ಉನ್ನತ ಸ್ಥಾನ ಗಳಿಸುತ್ತಿದ್ದಾರೆ. ಶಿಕ್ಷಣ ಕೆಲ ವರ್ಗಕ್ಕೆ ಸೀಮಿತವಾಗಿದ್ದ ಸಮಯದಲ್ಲಿ ಸಂವಿಧಾನ ಸರ್ವರಿಗೂ ಶಿಕ್ಷಣ ಹಕ್ಕು ನೀಡಿತ್ತು. ಈ ಪೈಕಿ ಮಹಿಳೆಯರಿಗೆ ಸಿಕ್ಕ ಶಿಕ್ಷಣ ಇಂದು ಎಲ್ಲಾ ರಂಗದಲ್ಲೂ ಮಹಿಳೆಯರ ಸಾಧನೆ ಎದ್ದು ಕಾಣುತ್ತಿದೆ. ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಗೊಳಿಸಲು ಶಿಕ್ಷಣ ನೀಡುವ ಕೆಲಸವನ್ನು ನಿರಂತರ ಮಾಡಬೇಕು ಎಂದರು.

1001300497

ಇದೇ ಸಂದರ್ಭದಲ್ಲಿ ಈದಿನ ಡಾಟ್ ಕಾಮ್ ಬಿಡುಗಡೆಗೊಳಿಸಿದ ಅರಿವೇ ಅಂಬೇಡ್ಕರ್ ಪುಸ್ತಕವನ್ನು ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ವೇದಿಕೆಯಲ್ಲಿದ್ದ ಗಣ್ಯರು ಬಿಡುಗಡೆಗೊಳಿಸಿದರು.

ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಭಾವಚಿತ್ರವನ್ನು ಮೆರವಣಿಗೆ ಮೂಲಕ ಪ್ರವಾಸಿ ಮಂದಿರಕ್ಕೆ ಆಗಮಿಸಲಾಯಿತು.

ವೇದಿಕೆಯಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಶಶಿಕುಮಾರ್, ಮಹಮದ್ ಸಾದಿಕ್, ಶ್ವೇತಾ, ತಾಪಂ ಇಓ ಶಿವಪ್ರಕಾಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ವೀಣಾ, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್, ಮುಖಂಡರಾದ ಪಾಂಡುರಂಗ, ಚೇಳೂರು ಶಿವನಂಜಪ್ಪ, ಛಲವಾದಿ ಮಹಾಸಭಾದ ಅಧ್ಯಕ್ಷ ಈರಣ್ಣ, ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ, ತಾಲ್ಲೂಕು ಸಂಚಾಲಕ ಕಡಬ ಶಂಕರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಪ್ರಸಾದ್, ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್, ಬಿಆರ್ ಸಿ ಮಧುಸೂದನ್, ಕಸಾಪ ಅಧ್ಯಕ್ಷ ಯತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪವಿತ್ರಾ ಸೇರಿದಂತೆ ಎಲ್ಲಾ ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...