ಗುಬ್ಬಿ | ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುವ ವಿರೋಧ ಪಕ್ಷ : ಶಾಸಕ ಎಸ್.ಆರ್.ಶ್ರೀನಿವಾಸ್ ಟೀಕೆ

Date:

ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಎಂಬ ಸಲ್ಲದ ಆರೋಪ ಮಾಡುವ ವಿರೋಧಪಕ್ಷ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ. ಎಲ್ಲಾ ಶಾಸಕರಿಗೂ ಹತ್ತು ಕೋಟಿ ಅನುದಾನ ನೀಡಿ ಅಬಿವೃದ್ದಿ ಕೆಲಸಕ್ಕೆ ಮುನ್ನುಡಿ ಹಾಡಿದ ಸರ್ಕಾರ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಸಮರ್ಥಿಸಿಕೊಂಡರು.

ತಾಲ್ಲೂಕಿನ ಮುದಿಗೆರೆ ಗ್ರಾಮದಲ್ಲಿ ಒಟ್ಟು 3 ಕೋಟಿ ರೂಗಳ ನಾಲ್ಕು ಗ್ರಾಮದ ಸಿಸಿ ರಸ್ತೆ ಕಾಮಗಾರಿಗೆ ಸಾಂಕೇತಿಕವಾಗಿ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಗೂಬೆ ಕೂರಿಸುವ ಕೆಲಸ ಮಾಡುವ ವಿರೋಧ ಪಕ್ಷ ಅಪಾದನೆ ಮಾಡುವುದೇ ದೊಡ್ಡ ಕೆಲಸ ಎಂದು ಕೊಂಡಿದ್ದಾರೆ. ನನ್ನ ಕ್ಷೇತ್ರದಲ್ಲೇ ಈಗಾಗಲೇ 15 ರಸ್ತೆ ಕಾಮಗಾರಿ ಏಕಕಾಲದಲ್ಲಿ ನಡೆದಿದೆ. ಸಲ್ಲದ ಆರೋಪ ಮಾಡುವುದು ಬಿಟ್ಟು ಅಭಿವೃದ್ದಿ ಕೆಲಸಗಳಿಗೆ ಸಾಥ್ ನೀಡುವುದು ಸೂಕ್ತ ಎಂದು ಟಾಂಗ್ ಕೊಟ್ಟರು.

ಕಳೆದ ಆರು ವರ್ಷಗಳಿಂದ ಬಡವರಿಗೆ ಮನೆ ನಿರ್ಮಾಣಕ್ಕೆ ವಸತಿ ಯೋಜನೆಯ ಕಾರ್ಯಕ್ರಮ ಜಾರಿಯಾಗಿಲ್ಲ. ಈಗ ಸಚಿವರ ಜೊತೆ ಮಾತನಾಡಿ ಮನವಿ ಮಾಡಿದ ಹಿನ್ನಲೆ 4 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದೊಳಗೆ ಮಂಜೂರು ಮಾಡಲಿದ್ದಾರೆ. ಯೂನಿಟ್ ಬೆಲೆ ಮೊದಲು 1.70 ಲಕ್ಷ ನೀಡುತ್ತಿದ್ದು, ಈಗ ಇದನ್ನು ಪರಿಶೀಲಿಸಿ ಹೆಚ್ಚುವರಿಯಾಗಿ 3 ಲಕ್ಷ ನೀಡುವ ಆದೇಶದ ಜೊತೆ ಮನೆಗಳನ್ನು ನೀಡಲಿದ್ದಾರೆ. ಎಲ್ಲಾ ಗ್ರಾಮ ಪಂಚಾಯಿತಿಗೆ ಮನೆಗಳನ್ನು ಹಂಚಲಾಗುವುದು ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001024295

ಸಾಮಾಜಿಕ ಜಾಲತಾಣದಲ್ಲಿ ನನ್ನ ಖಾತೆಗಳು ಯಾವುದೂ ಇಲ್ಲ. ಫೇಸ್ ಬುಕ್, ವಾಟ್ಸಪ್, ಟ್ವಿಟ್ಟರ್ ಹೀಗೆ ಯಾವ ಆ್ಯಪ್ ಬಳಸದ ನಾನು ಯಾವ ಅಧಿಕೃತ ಖಾತೆ ಹೊಂದಿಲ್ಲ. ಸಾಮಾಜಿಕ ಜಾಲತಾಣದ ಬಳಕೆ ಇಲ್ಲದ ಮೇಲೆ ಹೇಗೆ ಬೇರೆಯವರನ್ನು ನಿಂದಿಸಿ ಪೋಸ್ಟ್ ಮಾಡಲು ಸಾಧ್ಯ ಎಂಬ ಪ್ರಶ್ನೆ ಕೇಳಿದ ಶಾಸಕರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ 9 ಕೋಟಿ ಮಂಜೂರು ಅಗಲಿದ್ದು ಅತ್ಯಾಧುನಿಕ ಬಸ್ ಸ್ಟ್ಯಾಂಡ್ ನಿರ್ಮಾಣ ಆಗಲಿದೆ. ಜೊತೆಗೆ 14 ಕೋಟಿ ಬಸ್ ಡಿಪೋ ಕೂಡಾ ನಿರ್ಮಾಣ ಆಗಲಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಬಗ್ಗೆ ಪ್ರಸ್ತಾಪಿಸಿ ಒತ್ತಡ ಕೆಲಸ ಮಾಡುತ್ತಿರುವುದು ಸರಿಯಷ್ಟೇ
ಆದರೆ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸಿ ಮುಷ್ಕರ ಕೂಡಲೇ ಅಂತ್ಯ ಮಾಡಲಿದೆ ಎಂಬ ವಿಶ್ವಾಸವಿದೆ ಎಂದ ಅವರು ಮುದಿಗೆರೆ ಗ್ರಾಮದಲ್ಲಿ 1.50 ಕೋಟಿ ರೂಗಳ ಸಿಸಿ ರಸ್ತೆ ಹಾಗೂ ಬಾಕ್ಸ್ ಚರಂಡಿ, ಹೇರೂರು ವಸತಿ ಶಾಲೆಯ ರಸ್ತೆಗೆ 25 ಲಕ್ಷ, ರಂಗನಾಥಪುರ ಗ್ರಾಮದಲ್ಲಿ 75 ಲಕ್ಷ ರೂಗಳ ಸಿಸಿ ರಸ್ತೆ ಹಾಗೂ ಎನ್.ನಂದಿಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂಗಳ ಸಿಸಿ ರಸ್ತೆಗೆ ಒಂದು ಚಾಲನೆ ನೀಡಲಾಗಿದೆ. ಹೀಗೆ ಶೀಘ್ರದಲ್ಲಿ ಎಲ್ಲಾ ಗ್ರಾಮಗಳಿಗೆ ರಸ್ತೆ ಸೌಲಭ್ಯ ಒದಗಿಸಲು ಬದ್ಧನಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಎಂ.ಎಚ್.ಪಟ್ಟಣ ಗ್ರಾಪಂ ಅಧ್ಯಕ್ಷ ಎಸ್.ಜೆ.ಯೋಗೀಶ್, ಸದಸ್ಯರಾದ ಗಂಗಾಧರಯ್ಯ, ಜಯಲಕ್ಷ್ಮಮ್ಮ, ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಗುತ್ತಿಗೆದಾರ ಮದುವೆಮನೆ ಕುಮಾರ್, ಪಂಚಾಯತ್ ರಾಜ್ ಎಇಇ ಚಂದ್ರಶೇಖರ್, ಜೆಇ ಗೋಪಿನಾಥ್, ಇಂಜಿನಿಯರ್ ಮಂಜುನಾಥ್, ಪ್ರಭಾರ ಪಿಡಿಓ ಕೆ.ಎಂ.ಶೇಖರ್ ಇತರರು ಇದ್ದರು.

ವರದಿ – ಎಸ್. ಕೆ. ರಾಘವೇಂದ್ರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...