ಗುಬ್ಬಿ | ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಪಂಚಾಯಿತಿ ಜೊತೆ ಸಮುದಾಯಗಳ ಸಾಥ್ : ಎಸ್.ಶಿವಪ್ರಕಾಶ್

Date:

 ಗುಬ್ಬಿ ತಾಲೂಕಿನ ಎಲ್ಲಾ 34 ಗ್ರಾಮ ಪಂಚಾಯಿತಿಗಳಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಅ:02 ರವರೆಗೆ ನಡೆದಿರುವ ಸ್ವಚ್ಛತೆಯ ಸೇವೆ -2025 ಅಭಿಯಾನದ ಅಂಗವಾಗಿ ಗ್ರಾಮ ಪಂಚಾಯಿತಿಗಳ ಮುಖ್ಯ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳ, ಬ್ಲಾಕ್ ಸ್ಪಾಟ್ ಗಳು, ಕೆರೆಕಟ್ಟೆ, ಕಲ್ಯಾಣಿ, ನೀರಿನ ಟ್ಯಾಂಕ್ ಹಾಗೂ ದನಗಳು ಕುಡಿಯುವ ನೀರಿನ ತೊಟ್ಟಿಗಳ ಸಹಿತ ಎಲ್ಲವನ್ನೂ ಸ್ವಚ್ಚಗೊಳಿಸುವ ದಿಟ್ಟ ಹೆಜ್ಜೆ ಇಟ್ಟ ಪಂಚಾಯಿತಿ ಕೆಲಸಕ್ಕೆ ಶಾಲಾ ಕಾಲೇಜಿನ ಎನ್ಎನ್ಎಸ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಸಾಥ್ ನೀಡಲಿದೆ ಎಂದು ತಾಪಂ ಇಒ ಎಸ್.ಶಿವಪ್ರಕಾಶ್ ತಿಳಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯರಸ್ತೆ ಬದಿ ಕಸ ತೆಗೆಯುವುದು, ಶಾಲೆ ಹಾಗೂ ಸಾರ್ವಜನಿಕ ಆಸ್ಪತ್ರೆ ಆವರಣ ಮತ್ತು ಅಂಗನವಾಡಿ ಕೇಂದ್ರ, ದೇವಸ್ಥಾನ ಆವರಣ ಕ್ಲೀನ್ ಮಾಡಲು ಸಮುದಾಯ ಸಹಾಯ ಪಡೆಯಲಾಗಿದೆ ಎಂದರು.

ಸ್ವಚ್ಛತೆ ಅರಿವು ಮೂಡಿಸುವ ಜೊತೆಗೆ ಸ್ವಚ್ಚ ಕಾರ್ಯಕ್ಕೆ ಸಾರ್ವಜನಿಕರನ್ನು ಸಹಯೋಗ ಪಡೆದಲ್ಲಿ ಜವಾಬ್ದಾರಿ ಹೆಚ್ಚಿಸಿಕೊಳ್ಳುವ ಜನರು ನಮ್ಮ ಊರಿನ ಸ್ವಚ್ಛತೆ ಬಗ್ಗೆ ವಿಶೇಷ ಕಾಳಜಿ ತೋರುತ್ತಾರೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಅಕ್ಕಪಕ್ಕ, ಸರ್ಕಾರಿ ಕಚೇರಿ, ಗ್ರಾಮ ಪಂಚಾಯತಿ ಪಂಪ್ ಹೌಸ್, ಐತಿಹಾಸಿಕ ಸ್ಥಳಗಳು, ಪುರಾತನ ಸ್ಥಳಗಳು, ಸಂತೆ ಮೈದಾನ ಹೀಗೆ ಅನೇಕ ಸ್ಥಳಗಳ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಎನ್ಎಸ್ಎಸ್ ವಿದ್ಯಾರ್ಥಿಗಳ ಭಾಗವಹಿಸುವಿಕೆ ಇರುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 ಸ್ವಸಹಾಯ ಸಂಘಗಳ ಮಹಿಳೆಯರು, ವಿದ್ಯಾರ್ಥಿಗಳು, ಆಸಕ್ತ ಸಾಮಾಜಿಕ ಕಳಕಳಿಯ ಯುವಕರನ್ನು ಬಳಸಿ ಅಂಗಡಿ, ಹೋಟೆಲ್, ಬೇಕರಿ ಇನ್ನು ಮುಂತಾದ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಇಂತಹ ಸೇವಾ ಕಾರ್ಯದಲ್ಲಿ ಜನರು ಭಾಗವಹಿಸಿ ಇಡೀ ತಾಲ್ಲೂಕಿನ ಆರೋಗ್ಯ ಕಾಪಾಡೋಣ ಎಂದು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...