ಗುಬ್ಬಿ | ಪೆದ್ದನಹಳ್ಳಿ ಗ್ರಾಪಂ ಮುತ್ತಿಗೆ : ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ

Date:

ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಇರುವ ಕುರುಬರಹಳ್ಳಿ ರಸ್ತೆ ಸಂಪೂರ್ಣ ಕೆಸರುಮಡುವಾಗಿದೆ. ಕಳೆದ ಆರು ತಿಂಗಳಿಂದ ಮನವಿ ಮಾಡಿ ಬೇಸತ್ತ ಗ್ರಾಮಸ್ಥರು ಕೆಸರು ರಸ್ತೆಯಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ಮುಚ್ಚಿ ಅಧಿಕಾರಿಗಳಿಗೆ ದಿಗ್ಬಂಧನ ಹಾಕಿ ಮೂರು ತಾಸು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಕೇಂದ್ರ ಪೆದ್ದನಹಳ್ಳಿ ಗ್ರಾಮದ ಮುಖ್ಯ ರಸ್ತೆ ಕುರುಬರಹಳ್ಳಿ ಮೂಲಕ ಸಂಪಿಗೆ, ತುರುವೇಕೆರೆ ಸೇರುವ ಮಾರ್ಗದಲ್ಲಿ ನಿತ್ಯ ಸಾವಿರಾರು ಮಂದಿ ಓಡಾಡುತ್ತಾರೆ. ಆದರೆ ಪೆದ್ದನಹಳ್ಳಿ ಗ್ರಾಮದ ಮಧ್ಯದಲ್ಲಿರುವ ಈ ಮಾರ್ಗದಲ್ಲಿ ಎರಡೂ ಬದಿ ಮನೆಗಳಿದ್ದು ಈ ಮಳೆಗಾಲದಲ್ಲಿ ತೀವ್ರ ಅವ್ಯವಸ್ಥೆ ಆಗಿದೆ. ಈ ಬಗ್ಗೆ ಮನವಿ ಮಾಡಿದಾಗ ಸಿಸಿ ರಸ್ತೆಯ ಮೇಲೆ ಮಣ್ಣು ಸುರಿದು ಅದ್ವಾನದ ರಸ್ತೆ ಮಾಡಿ ಸಂಪೂರ್ಣ ಕೆಸರುಮಯವಾಗಿದೆ. ಮಕ್ಕಳು ವೃದ್ಧರು ಓಡಾಡುವುದು ದುಸ್ತರವಾಗಿದೆ. ಹಾಲಿನ ವಾಹನ, ಶಾಲಾ ವಾಹನ ಇಲ್ಲಿ ಬರುತ್ತಿಲ್ಲ. ಎಷ್ಟು ಮನವಿ ಮಾಡಿದರೂ ಅನುದಾನವಿಲ್ಲ ಎಂಬ ಹಾರಿಕೆ ಉತ್ತರ ನೀಡುವ ಪಿಡಿಓ ನಿಮ್ಮ ಮನೆ ಮುಂದೆ ನೀವೇ ಸ್ವಚ್ಛ ಮಾಡಿಕೊಳ್ಳಿ ಎಂದು ಹೇಳಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಕಿಡಿಕಾರಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಮುನಿರಾಜು ಮಾತನಾಡಿ ಪಂಚಾಯಿತಿ ಅನುದಾನಗಳು ಎಲ್ಲಿ ಹೋಗಿದೆ ತಿಳಿದಿಲ್ಲ. 15 ನೇ ಹಣಕಾಸು ಯೋಜನೆಯ 22 ಲಕ್ಷ ಹಣ ಎಲ್ಲಿಗೆ ಬಳಸಿದ್ದಾರೆ ತಿಳಿದಿಲ್ಲ. ಬಹು ಬೇಡಿಕೆಯ ಈ ರಸ್ತೆ ದುರಸ್ತಿಗೆ ಮೀನಾಮೇಷ ಎಣಿಸುವ ಅಧಿಕಾರಿಗಳು ಪಂಚಾಯಿತಿ ಕೇಂದ್ರದಲ್ಲಿ ಕಚೇರಿ ಎದುರು ಈ ದುಸ್ಥಿತಿ ಅಪಹಾಸ್ಯ ಎನಿಸಿದೆ. ಗ್ರಾಮಸ್ಥರು ಕೆರಳಿ ಕಚೇರಿಗೆ ಬೀಗ ಜಡಿಯುವ ಹಂತಕ್ಕೆ ತಲುಪಿರುವುದು ಸರಿಯಲ್ಲ. ಅಧ್ಯಕ್ಷರಾದಿ ಎಲ್ಲಾ ಸದಸ್ಯರು ತುರ್ತು ಸಭೆ ನಡೆಸಿ ಅನುದಾನ ಬಳಸಿ ಕನಿಷ್ಠ 5 ಲಕ್ಷ ಹಣದಲ್ಲಿ ದುರಸ್ಥಿ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001882102

ತುರುವೇಕೆರೆ ಸಂಪರ್ಕಿಸುವ ಕುರುಬರಹಳ್ಳಿ ರಸ್ತೆ ಆರಂಭದಲ್ಲೇ ವಿಘ್ನ ಎನ್ನುವಂತೆ ಆಗಿದೆ. ರಿಪೇರಿ ಎಂದು ಸಿಸಿ ರಸ್ತೆ ಮೇಲೆ ಮಣ್ಣು ಸುರಿದು ನಡೆದಾಡಲು ಆಗದಂತೆ ಮಾಡಿದ್ದಾರೆ. ಇದ್ದ ಬಾಕ್ಸ್ ಚರಂಡಿಯ ಕತೆ ಹೇಳತೀರದಾಗಿದೆ. ಸ್ವಚ್ಛತೆ ಕಾಣದ ಚರಂಡಿಯಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಕೆಲ ದಿನಗಳಿಂದ ರಸ್ತೆ ಬದಿಯ ಮನೆಗಳಲ್ಲಿ ಪ್ರತಿ ನಿತ್ಯ ಒಬ್ಬಾರದಂತೆ ಒಬ್ಬರು ಜ್ವರದಿಂದ ಮಲಗುತ್ತಿದ್ದಾರೆ. ಈ ಬಗ್ಗೆ ಕೂಡ ಕಿಂಚಿತ್ತೂ ಯೋಚಿಸದ ಅಧಿಕಾರಿಗಳು ಇತ್ತ ಕಡೆ ಬಂದಿಲ್ಲ. ರಸ್ತೆ ಚರಂಡಿ ಬಗ್ಗೆ ತಾಲ್ಲೂಕು ಪಂಚಾಯಿತಿ ಇಓ ಶಿವಪ್ರಕಾಶ್ ಅವರಿಗೆ ತಿಳಿಸಿದರೂ ಕ್ರಮ ಜರುಗಿಸಿಲ್ಲ. ಪ್ರತಿಭಟನೆ ವಿಚಾರ ತಿಳಿದರೂ ಸ್ಥಳಕ್ಕೆ ಬಂದಿಲ್ಲ ಎಂದು ತೀವ್ರ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು ಕೆಸರಿನಲ್ಲಿ ಬಾಳೆಗಿಡ ನೆಟ್ಟು ಪಂಚಾಯಿತಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವಿಚಾರ ತಿಳಿದು ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಮ್ಮ ಮಾತನಾಡಿ ಈ ರಸ್ತೆಗೆ ಮಣ್ಣು ಹಾಕಿ ದುರಸ್ತಿಗೆ ಮುಂದಾದಾಗ ಸ್ಥಳೀಯರು ಸಿಸಿ ರಸ್ತೆ ಇದೆ. ಮಣ್ಣು ಹಾಕುವುದು ಬೇಡ ಎಂದು ನಿಲ್ಲಿಸಿದ್ದರು. ಈಗ ರಿಪೇರಿಗೆ ಹೆಚ್ಚಿನ ಅನುದಾನ ಬೇಕಿದೆ. ಶಾಸಕರು, ಸಚಿವರ ಬಳಿ ಹೋಗಿ ಕೇಳುವ ಅಗತ್ಯವಿದೆ. ಎಲ್ಲಾ ಸದಸ್ಯರು ಒಗ್ಗೂಡಿ ಹೋಗೋಣ ಎಂದರೆ ಯಾರೂ ಮುಂದಾಗಿಲ್ಲ. ತಕ್ಷಣಕ್ಕೆ ಮೂವರು ಸದಸ್ಯರ 1.50 ಲಕ್ಷ ಜೊತೆಗೆ 50 ಸಾವಿರ ಹೆಚ್ಚುವರಿ ಹಣದಲ್ಲಿ ದುರಸ್ತಿ ಮಾಡುವ ಭರವಸೆ ನೀಡಿದರು. ಸ್ಥಳದಲ್ಲಿದ್ದ ಗ್ರಾಮಸ್ಥರು ಸಂಪೂರ್ಣ ರಸ್ತೆ ಅಭಿವೃದ್ಧಿ ಆಗಬೇಕು. ರಸ್ತೆ ಹಾಗೂ ಚರಂಡಿ ಒಟ್ಟಿಗೆ ಕೆಲಸ ಮಾಡಲು ಒತ್ತಾಯಿಸಿದರು.

ಸ್ಥಳದಲ್ಲಿದ್ದ ಪಿಡಿಓ ನಟರಾಜ್ ಅವರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ರಸ್ತೆಗೆ ಅನುದಾನ ಇಲ್ಲವೆಂದು ಹೇಳಿದ್ದು ಹಾಗೆಯೇ ನಿಮ್ಮ ಮನೆ ಮುಂದೆ ನೀವೇ ಅಚ್ಚುಕಟ್ಟು ಮಾಡಿಕೊಳ್ಳಿ ಎಂದಿದ್ದರ ಬಗ್ಗೆ ಮಹಿಳೆಯರು ತೀವ್ರ ಆಕ್ರೋಶ ಹೊರ ಹಾಕಿದರು. ಕೊನೆಯ ಹಂತದಲ್ಲಿ ತುರ್ತು ನಿರ್ಧಾರ ಕೈಗೊಂಡು ರಸ್ತೆ ಸರಿಪಡಿಸಬೇಕು. 15 ನೇ ಹಣಕಾಸು ಯೋಜನೆ, ನರೇಗಾ ಯೋಜನೆ ಹಾಗೂ ವರ್ಗ 1 ರ ಹಣ ಬಳಸಿ ಕ್ರಿಯಾ ಯೋಜನೆ ರೂಪಿಸಿ ಅಚ್ಚುಕಟ್ಟಾದ ರಸ್ತೆ ಮಾಡುವ ಭರವಸೆ ನೀಡಿದ ಬಳಿಕ ತಾತ್ಕಾಲಿಕವಾಗಿ ಹಿಂಪಡೆದರು.

ಸ್ಥಳದಲ್ಲಿ ಸದಸ್ಯರಾದ ರಂಗಸ್ವಾಮಿ, ಬಸವರಾಜು, ಶ್ರೀನಿವಾಸ್, ಮುಖಂಡರಾದ ಕುಮಾರಯ್ಯ, ಪಂಚಾಕ್ಷರಿ, ಬಸವಯ್ಯ, ಜಯಣ್ಣ, ರಂಗಪ್ಪ, ಮಂಜುಳಾ, ತನುಶ್ರೀ, ಸಾವಿತ್ರಮ್ಮ, ಪವಿತ್ರ ರಾಜಣ್ಣ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...