ಗುಬ್ಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ : ಹಲವು ಪ್ರಕರಣದಲ್ಲಿ ಬೇಕಿದ್ದ ಅಂತರ ಜಿಲ್ಲಾ ಕಳ್ಳರಿಬ್ಬರ ಬಂಧನ

Date:

ಹಾಡಹಗಲೇ ಕಾರಿನ ಕಿಡಕಿ ಹೊಡೆದು ಕಾರಿನಲ್ಲಿದ್ದ ಬರೋಬ್ಬರಿ 15 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದ ಘಟನೆ ಕೆಲ ತಿಂಗಳ ಹಿಂದೆ ಗುಬ್ಬಿ ಪಟ್ಟಣದ ಎಪಿಎಂಸಿ ಆವರಣದ ಕಛೇರಿ ಮುಂದೆ ನಡೆದಿತ್ತು. ಈ ಪ್ರಕರಣದ ಬೆನ್ನು ಹತ್ತಿದ ಗುಬ್ಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಓಜಿಕುಪ್ಪಂ ಗ್ಯಾಂಗ್ ನ ಇಬ್ಬರು ಕುಖ್ಯಾತಿ ಕಳ್ಳರನ್ನು ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರ ಮೂಲದ ಶಿವ(44) ಹಾಗೂ ಸುಬ್ರಹ್ಮಣ್ಯ ಅಲಿಯಾಸ್ ಮಣಿ (38) ಬಂಧಿತ ಆರೋಪಿಗಳು. ಗುಬ್ಬಿ ಪ್ರಕರಣದಲ್ಲಿ ಪತ್ತೆಯಾದ ಸುಮಾರು 13.60 ಲಕ್ಷ ನಗದು ಹಣ ಮತ್ತು ಇತರೆ ಪ್ರಕರಣದ ಒಂದು ಚಿನ್ನದ ಬ್ರಾಸ್ಲೈಟ್ ಸೇರಿ ಒಟ್ಟು ಮೌಲ್ಯ 16 ಲಕ್ಷ ರೂಗಳನ್ನು ಲಪಟಾಯಿಸಿದ ಆರೋಪಿಗಳಾಗಿದ್ದಾರೆ.

ಶಿವರಾಜು ಎಂಬ ವರ್ತಕ ನಿಟ್ಟೂರು ಬ್ಯಾಂಕ್ ಖಾತೆಯಿಂದ 15 ಲಕ್ಷ ನಗದು ಹಣವನ್ನು ಡ್ರಾ ಮಾಡಿಕೊಂಡು ತನ್ನ ಕಾರಿನಲ್ಲಿ ಇಟ್ಟುಕೊಂಡು ಗುಬ್ಬಿ ಎಪಿಎಂಸಿ ಯಾರ್ಡ್ ನಲ್ಲಿರುವ ಎಪಿಎಂಸಿ ಕಚೇರಿಯ ಮುಂಭಾಗ ಕಾರನ್ನು ನಿಲ್ಲಿಸಿ, 15 ಲಕ್ಷ ನಗದು ಹಣ ಹಾಗೂ ಇತರೆ ದಾಖಲಾತಿಗಳನ್ನು ಬಿಟ್ಟು ಕಚೇರಿಗಳಿಗೆ ಹೋಗಿ ವಾಪಸ್ ಬರುವುದರೊಳಗೆ 15 ಲಕ್ಷ ನಗದು ಹಣ ಕಿಟಿಕಿ ಗ್ಲಾಸ್ ಒಡೆದು ಕಳವು ಮಾಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ಕೈಗೆತ್ತಿಕೊಂಡ ಶಿರಾ ಉಪ ವಿಭಾಗದ ಡಿವೈಎಸ್ಪಿ ಶೇಖರ್ ಮಾರ್ಗಸೂಚನೆ ಮೇರೆಗೆ ಗುಬ್ಬಿ ವೃತ್ತ ನಿರೀಕ್ಷಕರಾದ ರಾಘವೇಂದ್ರ ಅವರ ನೇತೃತ್ವದಲ್ಲಿ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂದಿಸಿದ್ದಾರೆ.

ಈ ಆರೋಪಿತರು ಅಂತರ್ ಜಿಲ್ಲಾ ರಾಜ್ಯ ಅಪರಾಧಿಗಳಾಗಿದ್ದು ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಾದ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ , ಸಿರಾ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ, ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣದಲ್ಲಿ ಭಾಗಿಯಾಗಿದ್ದು ಈ ಎಲ್ಲಾ ಐದು ಪ್ರಕರಣಗಳಲ್ಲಿ ಕಳ್ಳತನವಾಗಿದ್ದ ನಗದು ಹಣ ಹಾಗೂ ಒಂದು ಚಿನ್ನದ ಬ್ರಾಸ್ಲೈಟ್ ಸೇರಿ ಒಟ್ಟು 16 ಲಕ್ಷ ಮೌಲ್ಯದ ಸ್ವತ್ತನ್ನು ಅಮಾನತು ಪಡಿಸಿಕೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿತರಾದ ಅಂಕಯ್ಯ, ಕಿರಣ್ ಮತ್ತು ರಾಜಶೇಖರಯ್ಯ ತಲೆಮೆರೆಸಿಕೊಂಡಿದ್ದು ಇವರ ಪತ್ತೆ ಕಾರ್ಯ ಮುಂದುವರಿಸಲಾಗಿದೆ. ಗುಬ್ಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಗೆ ತುಮಕೂರು ಜಿಲ್ಲಾ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವೆಂಕಟ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...