ಗುಬ್ಬಿ | ಹೇಮಾವತಿ ನೀರಿನ ಹೋರಾಟಕ್ಕೆ ರಾಜಕಾರಣ ಬೆರೆಯಬಾರದು : ಕಾಂಗ್ರೆಸ್ ಮುಖಂಡ ಶಂಕರಾನಂದ

Date:

ತುಮಕೂರು ಜಿಲ್ಲೆಗೆ ಹಾಗೂ ತಾಲ್ಲೂಕಿಗೆ ಅವಶ್ಯಕತೆ ಇರುವಂತಹ ನೀರನ್ನ ಯಾರು ಸಹ ತಡೆಯಲು ಸಾಧ್ಯವಿಲ್ಲ. ನೀರಾವರಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ರಾಜಕಾರಣಕ್ಕೆ ಬಳಸಿದರೆ ಹೋರಾಟ ದಿಕ್ಕುತಪ್ಪುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಶಂಕರಾನಂದ ತಿಳಿಸಿದರು.

ಗುಬ್ಬಿ ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗುಬ್ಬಿ ಶಾಸಕರ ಬಗ್ಗೆ ಕೆಟ್ಟದಾಗಿ ಮಾತನಾಡುವುದನ್ನ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರ ಅಭಿಮಾನಿಗಳಿಗೆ ಸಹಿಸಲು ಸಾಧ್ಯವಿಲ್ಲ. ದಿಲೀಪ್ ಕುಮಾರ್ ಅವರು ಮುಂದಿನ ದಿನದಲ್ಲಿ ಎಂಎಲ್ಎ ಕನಸು ಕಾಣುತ್ತಿರುವವರು. ಜನರು ಸೂಕ್ಷ್ಮವಾಗಿ ಗಮನಿಸುತ್ತಾರೆ ಸುಸಂಸ್ಕೃತವಾಗಿ, ಮುತ್ಸದ್ದಿತನದ ಮಾತುಗಳನ್ನಾಡುವ ಕಲೆ ಮೊದಲು ಕಲಿಯಿರಿ ಎಂದು ಬಿಜೆಪಿ ದಿಲೀಪ್ ಕುಮಾರ್ ಅವರಿಗೆ ಸಲಹೆ ನೀಡಿದರು.

ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೊತೆ ಬಿಜೆಪಿ, ಜೆಡಿಎಸ್ ಶಾಸಕರು ಇದ್ದಾರೆ. ಆದರೆ ಅವರು ಹೋರಾಟವನ್ನು ಸರಿಯಾದ ಮಾರ್ಗದಲ್ಲಿ ಕರೆದುಕೊಂಡು ಹೋಗಲಿ. ಅದನ್ನು ಬಿಟ್ಟು ಜನತೆಯನ್ನು ತಪ್ಪು ದಾರಿಗೆ ಎಳೆಯಬೇಡಿ ವಸ್ತು ಸ್ಥಿತಿಯ ಬಗ್ಗೆ ಅರಿವು ಮೂಡಿಸಿ. ತಾಲ್ಲೂಕಿನ ರೈತರನ್ನು ಶಾಸಕರ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡಬೇಡಿ. ಆಡಳಿತಾರೂಢ ಶಾಸಕರು ಎಲ್ಲಿ ಮಾತನಾಡಬೇಕು ಅಲ್ಲಿ ಮಾತನಾಡುತ್ತಾರೆ. ಸರ್ಕಾರದೊಂದಿಗೆ ಚರ್ಚಿಸುತ್ತಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಮಗಾರಿ ಬಗ್ಗೆ ವಿರೋಧ ಈಗಾಗಲೇ ವ್ಯಕ್ತಪಡಿಸಿ ಉಪ ಮುಖ್ಯಮಂತ್ರಿಗಳ ಜೊತೆ ಶಾಸಕರು ಮಾತನಾಡಿದ್ದಾರೆ. ತಾಲ್ಲೂಕಿನ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ನಮ್ಮ ಪಾಲಿನ ನೀರು ಬೇರೆಡೆಗೆ ಹರಿಸುವ ಈ ಕಾಮಗಾರಿ ಬಗ್ಗೆ ಸಂಪೂರ್ಣವಾಗಿ ಶಾಸಕರ ವಿರೋಧ ವ್ಯಕ್ತಪಡಿಸಿ
ಯಾವುದೇ ಕಾರಣಕ್ಕೋ ರಾಮನಗರ ಭಾಗಕ್ಕೆ ನೀರನ್ನು ಬಿಡುವ ಪ್ರಶ್ನೆಯೇ ಇಲ್ಲ. ಮಾಗಡಿಗೆ ಮಾತ್ರ 0.6 ಟಿಎಂಸಿ ನೀರು ಹಂಚಿಕೆಯಾಗಿದೆ. ಅಲ್ಲದೆ ಕುಣಿಗಲ್ ತಾಲ್ಲೂಕಿಗೆ 3.06 ಹಂಚಿಕೆಯಾಗಿದೆ. ಈ ವಿಚಾರದಲ್ಲಿ ಅವಲೋಕನ ಮಾಡಬೇಕಿದೆ. ಕುಣಿಗಲ್ ನಲ್ಲಿ ನಾಲೆ ಅಗಲೀಕರಣ ಕಾಮಗಾರಿಯೇ ನಡೆದಿಲ್ಲ. ಮೊದಲು ಮುಖ್ಯ ನಾಲೆಯ ಕಾಮಗಾರಿ ಮಾಡಿಕೊಂಡು ನೀರು ಹರಿಸಿಕೊಳ್ಳಿ. ಪೈಪ್ ಲೈನ್ ಬಗ್ಗೆ ಕೈ ಬಿಡಿ ಎಂದು ಕುಣಿಗಲ್ ಶಾಸಕ ರಂಗನಾಥ್ ಅವರಿಗೂ ನಮ್ಮ ಶಾಸಕರು ತಿಳಿಸಿದ್ದಾರೆ ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...