ಗುಬ್ಬಿ | ದೇಶಕ್ಕೆ ಶಕ್ತಿಕೊಟ್ಟ ಸಂವಿಧಾನ ಪೀಠಿಕೆ ನಾಗರೀಕ ಗ್ರಂಥ : ಕಸಾಪ ತಾಲೂಕು ಅಧ್ಯಕ್ಷ ಯತೀಶ್

Date:

ದೇಶದ ಸರ್ವತೋಮುಖ ಅಭಿವೃದ್ಧಿಗೆ ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಪೀಠಿಕೆ ಪ್ರತಿಯೊಬ್ಬ ಪ್ರಜೆಯ ಮನ ಮುಟ್ಟಿದ ನಾಗರೀಕ ಗ್ರಂಥ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸರ್ವರಿಗೂ ಸಮಪಾಲು ಸಮಬಾಳು ತತ್ವ ರೂಡಿಸಿ ಜನರಿಂದ ಜನರಿಗಾಗಿ ಜನರಿಗೋಸ್ಕರ ಪ್ರಜಾಪ್ರಭುತ್ವ ಜಾರಿಗೆ ತಂದ ಸಂವಿಧಾನ ಅನುಷ್ಠಾನಗೊಳಿಸಿದ ಈ ದಿನ ಪೀಠಿಕೆ ಪ್ರತಿಯೊಬ್ಬರ ಮನ ಮನೆಯಲ್ಲಿ ಕಾಣಬೇಕು ಎಂದರು.

ತಹಶೀಲ್ದಾರ್ ಬಿ.ಆರತಿ ಮಾತನಾಡಿ ಸಂವಿಧಾನ ಸರ್ವ ಧರ್ಮ ಮತ ಪಂಥಗಳಿಗೆ ಏಕತೆ ತಂದು ಕೊಟ್ಟಿದೆ. ಡಾ.ಬಿ.ಆರ್.ಅಂಬೇಡ್ಕರ್ ಸಮಾಜದಲ್ಲಿನ ಅಸಮತೋಲನ ತೊಡೆದು ಉತ್ತಮ ಆಡಳಿತ ಒದಗಿಸುವ ಸಂವಿಧಾನವನ್ನು ರಚಿಸಿ ಇಡೀ ವಿಶ್ವದಲ್ಲೇ ಶ್ರೇಷ್ಠ ಪ್ರಜಾಪ್ರಭುತ್ವ ಸ್ಥಾಪನೆ ಮಾಡಿದರು. ಶೈಕ್ಷಣಿಕ ಪ್ರಗತಿಯಿಂದ ಆರ್ಥಿಕ, ಸಾಮಾಜಿಕ ಚೇತರಿಕೆ ಸಾಧ್ಯ ಎಂಬುದು ದೃಢಪಡಿಸಿದರು. ಈ ನಿಟ್ಟಿನಲ್ಲಿ ಆಧುನಿಕತೆಗೆ ತಕ್ಕಂತೆ ದೇಶ ಶಿಕ್ಷಣದ ಮೂಲಕ ಬೆಳೆಯುತ್ತಿದೆ. ಸಂವಿಧಾನ ಬಗ್ಗೆ ಎಲ್ಲರಲ್ಲೂ ಗೌರವ ಇರಬೇಕು. ಪೀಠಿಕೆ ಅನುಸಾರ ಸಮಾಜ ಸಾಗಿಸಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯ ಜಿ.ಎನ್.ಅಣ್ಣಪ್ಪಸ್ವಾಮಿ ಮಾತನಾಡಿ ಸಂವಿಧಾನ ಬದ್ಧ ನಡವಳಿಕೆ ಇಡೀ ವಿಶ್ವ ಮೆಚ್ಚಿದೆ. ಉನ್ನತ ಮಟ್ಟದಲ್ಲಿ ರಾಷ್ಟ್ರ ಬೆಳೆಯಲು ಈ ಸಂವಿಧಾನ ಆವಶ್ಯವಿತ್ತು. ಅದೇ ನಿಟ್ಟಿನಲ್ಲಿ ಜಾತೀಯತೆ ನಡುವೆ ಜಾತ್ಯತೀತ ನಿಲುವು ಸಂವಿಧಾನ ಮೂಡಿಸಿಕೊಟ್ಟಿದೆ. ಈ ಬದ್ಧತೆಯನ್ನು ವೈಯಕ್ತಿಕ ಹಾಗೂ ಸಾರ್ವಜನಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್ ಮಾತನಾಡಿ ಶೋಷಿತ ವರ್ಗಕ್ಕೆ, ದೀನ ದಲಿತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಇಡೀ ದೇಶದ ಅಭಿವೃದ್ಧಿಗೆ ಹಾಗೂ ಜಾತ್ಯತೀತ ಸಾಮಾಜಿಕ ನ್ಯಾಯಕ್ಕೆ ಸೀಮಿತವಾಗದೆ ಸಮಾಜದ ಕಟ್ಟ ಕಡೆಯ ದಟ್ಟದಾರಿದ್ರ್ಯ ಬದುಕಿಗೆ ಮುಕ್ತಿ ನೀಡಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನಡೆದಿದೆ. ಶಿಕ್ಷಣ ಎಂಬುದು ಮನುವಾದಿಗಳ ಸ್ವತ್ತು ಎಂಬಾತಾದ ಸಮಯದಲ್ಲಿ ಸರ್ವರಿಗೂ ಶಿಕ್ಷಣ ಒದಗಿಸುವ ಕೆಲಸ ಸಂವಿಧಾನ ಮಾಡಿದೆ. ಈ ನಿಟ್ಟಿನಲ್ಲಿ ಪೀಠಿಕೆ ಪ್ರತಿ ಮನೆಯಲ್ಲಿ ಪೂಜ್ಯ ರೀತಿಯಲ್ಲಿ ಇರಬೇಕು ಎಂದರು.

ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ವೇದಿಕೆಯಲ್ಲಿ ಪಪಂ ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಜಿ.ಆರ್.ಶಿವಕುಮಾರ್, ಶಶಿಕುಮಾರ್, ಶ್ವೇತಾ, ತಾಪಂ ಇಓ ಶಿವಪ್ರಕಾಶ್, ಸಿಪಿಐ ಗೋಪಿನಾಥ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ಸೇರಿದಂತೆ ತಾಲೂಕಿನ ಎಲ್ಲಾ ದಲಿತ ಪರ ಸಂಘಟನೆಯ ಮುಖಂಡರು, ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...