ಗುಬ್ಬಿ | ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅ.27 ರಂದು ಪೂರ್ವಭಾವಿ ಸಭೆ

Date:

ಗುಬ್ಬಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುವ 6 ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 22 ರಂದು ನಡೆಸಲು ದಿನಾಂಕ ನಿಗದಿಯಾಗಿದ್ದು ಸಮ್ಮೇಳನ ತಯಾರಿ ಕುರಿತು ಚರ್ಚಿಸಲು ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಇದೇ ತಿಂಗಳ 27 ರಂದು ಬೆಳಿಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಮ್ಮ ಮಾತೃ ಭಾಷೆ ಕನ್ನಡದ ಪರಂಪರೆ, ಸಂಸ್ಕೃತಿ ಸಾರುವ ತಾಲ್ಲೂಕು ಮಟ್ಟದ ಸಾಹಿತ್ಯ ಸಮ್ಮೇಳನಕ್ಕೆ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದಾರೆ. ಇವರ ಮಾರ್ಗದರ್ಶನದಲ್ಲಿ ತಹಶೀಲ್ದಾರ್ ಆರತಿ.ಬಿ ಅವರು ನೇತೃತ್ವ ವಹಿಸಿ ಸಭೆ ನಡೆಸಿ ವಿವಿಧ ಸಮಿತಿ ರಚಿಸಿ ಅದ್ದೂರಿಯಾಗಿ ಸಮ್ಮೇಳನ ನಡೆಸಲು ಚರ್ಚಿಸಲಾಗುವುದು ಎಂದರು.

ಕನ್ನಡ ನಾಡು ನುಡಿ ಬಗ್ಗೆ ಅಪಾರ ಗೌರವ ತರುವಲ್ಲಿ ತಾಲ್ಲೂಕಿನ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳು, ವಿವಿಧ ರಾಜಕೀಯ ಪಕ್ಷದ ಮುಖಂಡರು, ಸಾಮಾಜಿಕ ಸೇವಾ ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ದಲಿತ ಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳು ಈ ಸಭೆಗೆ ಹಾಜರಾಗಿ ಅಮೂಲ್ಯ ಸಲಹೆ ಸೂಚನೆ ನೀಡಲು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...