ಗುಬ್ಬಿ | ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

Date:

ಪ್ರವಾಸಿ ತಾಣ ಪ್ರದೇಶಗಳಲ್ಲಿ ಒಂದಾದ ಜಮ್ಮು ಕಾಶ್ಮೀರದಲ್ಲಿ ನಡೆದ ಪ್ರವಾಸಿಗರ ಮೇಲಿನ ಘೋರ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿದಂತೆ 30 ಜನರ ಹತ್ಯೆ ನಡೆದ ಘೋರ ಭಯೋತ್ಪಾದಕ ಕೃತ್ಯ ಖಂಡಿಸಿ ಗುಬ್ಬಿಯಲ್ಲಿ ಉಗ್ರರಿಗೆ ಗುಂಡಿಕ್ಕಿ ಕೊಲ್ಲುವಂತೆ ಘೋಷಣೆ ಕೂಗಿ ಪ್ರವಾಸಿಗರ ಸಾವಿಗೆ ಮೇಣದಬತ್ತಿ ಬೆಳಗಿಸಿ ಸಂತಾಪ ಸೂಚಿಸಿದರು.

ಕಳೆದ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ ಹಲವರು ಮೃತಪಟ್ಟ ಘಟನೆಯಿಂದ ಕಾಶ್ಮೀರ ಕಣಿವೆಯಲ್ಲಿ ಭೀತಿ ಅವರಿಸಿದ್ದು ರಾಷ್ಟ್ರವ್ಯಾಪ್ತಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಗುಬ್ಬಿ ಪಟ್ಟಣದಲ್ಲಿ ನಾಗರೀಕರು ಗುಬ್ಬಿಯ ಕೋರ್ಟ್ ಸರ್ಕಲ್ ಬಳಿ ದಿಢೀರ್ ಜಮಾಯಿಸಿ ಮೇಣದ ಬತ್ತಿ ಹಿಡಿದು ಉಗ್ರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಮಾತನಾಡಿ ಜಮ್ಮು- ಕಾಶ್ಮೀರದ ರಾಜಧಾನಿ ಶ್ರೀನಗರದಿಂದ ಕೇವಲ 90 ಕಿಲೋ ಮೀಟರ್ ದೂರದ ಮಿನಿ ಸ್ವಿಜರ್ಲ್ಯಾಂಡ್ ಖ್ಯಾತಿಯ ಪಹಲ್ಗಾಮ್ ನ ಬೈಸರನ್ ಕಣಿವೆಯಲ್ಲಿ ನಡೆದ ಉಗ್ರರ ದಾಳಿ ಖಂಡನೀಯ. ಈ ಕೂಡಲೇ ಅಮಾಯಕ ಪ್ರವಾಸಿಗರ ಸಾವಿಗೆ ಕಾರಣವಾದ ಉಗ್ರರನ್ನು ಮುಲಾಜಿಲ್ಲದೆ ಸದೆಬಡಿಯುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪಂ ಸದಸ್ಯ ಮಹಮ್ಮದ್ ಸಾದಿಕ್ ಮಾತನಾಡಿ ನೆಮ್ಮದಿ ನೆಲೆಸಿದ್ದ ಪ್ರವಾಸಿ ತಾಣದ ಮೇಲೆ ದಾಳಿ ನಡೆಸಿ ಅಶಾಂತಿ ನೆಲೆಸುವಂತೆ ಮಾಡಿದ ಉಗ್ರರನ್ನು ಹುಡುಕಿ ಗುಂಡಿಕ್ಕಿ ಕೊಲ್ಲುವ ಜೊತೆಗೆ ಮುಂದೆ ಇಂತಹ ಅನಾಹುತ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ. ಶಾಂತಿ ನೆಮ್ಮದಿ ಇದ್ದ ದೇಶದಲ್ಲಿ ಉಗ್ರ ಚಟುವಟಿಕೆ ಮಾಡುವ ಉಗ್ರರು ಮತ್ತೊಮ್ಮೆ ಭಾರತಕ್ಕೆ ನುಸುಳದಂತೆ ಎಚ್ಚರಿಕೆ ನೀಡಬೇಕಿದೆ. ಉಗ್ರರ ಮಟ್ಟ ಹಾಕಿ ಭಾರತ ಖಡಕ್ ಸಂದೇಶ ನೀಡಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಮುಖಂಡ ಜಿ.ಡಿ.ಸುರೇಶಗೌಡ ಮಾತನಾಡಿ ಪ್ರವಾಸಕ್ಕೆ ತೆರಳಿದ್ದ ಭಾರತೀಯರ ಮೇಲೆ ಧರ್ಮ ಆಧಾರಿತದ ದಾಳಿ ನಡೆಸಿ ಕ್ರೌರ್ಯ ಮೆರೆದ ಉಗ್ರರನ್ನು ಸಹಿಸುವ ಮಾತಿಲ್ಲ. ಕಳೆದ ದಿನ ನಡೆದ ಈ ದುರ್ಘಟನೆ ಭಾರತವನ್ನೇ ಬೆಚ್ಚಿ ಬೀಳಿಸಿದ ಕೃತ್ಯ ಕನ್ನಡಿಗರಿಗೆ ನೋವಿನ ಸಂಗತಿಯಾಗಿದೆ. ಕೃತ್ಯಕ್ಕೆ ಕಾರಣರಾದ ಉಗ್ರರನ್ನು ಸದೆಬಡಿಯಲು ಭಾರತ ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯ ಜಿ.ಆರ್.ಶಿವಕುಮಾರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಕಾಂತರಾಜು, ವೀರಶೈವ ಮಹಾಸಭಾ ಅಧ್ಯಕ್ಷ ಮಂಜುನಾಥ್, ಕ್ರೀಡಾ ಪ್ರೋತ್ಸಾಹಕ ಶಂಕರ್ ಕುಮಾರ್, ವೀರಶೈವ ಯುವಸೇನೆ ಅಧ್ಯಕ್ಷ ಅರ್ಜುನ್, ಪಿಎಲ್ ಡಿ ಬ್ಯಾಂಕ್ ಸದಸ್ಯರಾದ ನಾಗರಾಜು, ಡಿ.ರಘು, ಪಪಂ ಮಾಜಿ ಸದಸ್ಯ ವಿರೂಪಾಕ್ಷ, ವರ್ತಕರ ಸಂಘದ ಅಧ್ಯಕ್ಷ ದಯಾನಂದಮೂರ್ತಿ, ಲಯನ್ಸ್ ಕೀರ್ತಿರಾಜ್, ಮುಖಂಡರಾದ ಮಲ್ಲಿಕಾರ್ಜುನ್, ಪ್ರಮೋದ್, ಸುರುಗೇನಹಳ್ಳಿ ರಂಗನಾಥ್ ಸೇರಿದಂತೆ ಪಟ್ಟಣದ ನಾಗರೀಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...