ಗುಬ್ಬಿ | ಕುಲಾಂತರಿ ತಳಿ ವಿರೋಧಿಸಿ ನವಂಬರ್ 4 ರಂದು ಪ್ರತಿಭಟನೆ : ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು

Date:

ಕಳೆದ 25 ವರ್ಷದಿಂದ ಕುಲಾಂತರಿ ತಳಿ ಬಳಕೆಗೆ ವಿರೋಧಿಸಿ ಹೋರಾಟ ನಡೆಸಿದ ರೈತ ಸಂಘ ಮರಳಿ ಕಾರ್ಪೊರೇಟ್ ಕಂಪೆನಿ ಕುಲಾಂತರಿ ತಳಿ ಬಗ್ಗೆ ಆಸಕ್ತಿ ತೋರಿವೆ. ಈ ಬಗ್ಗೆ ಕುಮ್ಮಕ್ಕು ನೀಡುವ ಸರ್ಕಾರದ ವಿರೋಧ ಹಾಗೂ ಕುಲಾಂತರಿ ತಳಿ ನಿಷೇಧಿಸಿ ನೀತಿ ಜಾರಿಗೆ ಆಗ್ರಹಿಸಿ ಹಾಗೂ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ನವಂಬರ್ 4 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಕಲ ಜೀವರಾಶಿಗಳಿಗೆ ಮಾರಕ ಎನಿಸಿದ ಕುಲಾಂತರಿ ತಳಿಗಳ ಬಳಸಿದ 113 ದೇಶದಲ್ಲಿ ಈಗಾಗಲೇ ಮಾರಕ ಅನುಭವ ಪಡೆದು ನಂತರ ತಳಿ ನಿಷೇಧಿಸಿದ್ದಾರೆ. ಈಗ ನಮ್ಮ ದೇಶದಲ್ಲಿ ಸಣ್ಣಗೆ ಹೆಜ್ಜೆ ಇಟ್ಟ ಕುಲಾಂತರಿ ತಳಿ ಬಳಕೆಗೆ ಮುಂದಾದ ಕಂಪೆನಿಗಳಿಗೆ ಕೆಲ ಸರ್ಕಾರ ಸಹಕಾರ ನೀಡುತ್ತಿರುವುದು ಸರಿಯಲ್ಲ. ಈ ಬಗ್ಗೆ ವಿರೋಧಿಸಿ ನವಂಬರ್ 4 ರಂದು ತಾಲ್ಲೂಕು ಮಟ್ಟದ ಪ್ರತಿಭಟನೆಯನ್ನು ಇಡೀ ಜಿಲ್ಲೆಯಲ್ಲಿ ನಡೆಸುತ್ತೇವೆ ಎಂದರು.

ಮನುಷ್ಯನಿಗೆ ಅಪಾಯ ತರುವ ತಳಿಗಳು ಕೃಷಿಕ ವರ್ಗವನ್ನೇ ಹಾಳು ಮಾಡಲಿದೆ. ಕುಲಾಂತರಿ ತಳಿಗಳ ತಯಾರಿಕೆಗೆ ಮುಂದಾದ ಕೆಲ ಕಾರ್ಪೋರೇಟ್ ಕಂಪೆನಿಯ ದಾಸರಾಗಿ ರೈತ ಇರಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕುಲಾಂತರಿ ತಳಿ ನಿಷೇಧಿಸಿ ನೀತಿ ಜಾರಿಗೆ ತರಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ ಅವರು ಜಿಲ್ಲೆಯ ಆರು ತಾಲ್ಲೂಕಿನ ರೈತರ ಮರಣ ಶಾಸನ ಬರೆಯುತ್ತಿರುವ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಕೂಡಲೇ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಸಾವಿರಾರು ರೈತರು ಬೀದಿಗಿಳಿದು ಹೋರಾಟ ಸಮಿತಿ ಜೊತೆ ಪ್ರತಿಭಟನೆಯನ್ನು ನಿರಂತರ ನಡೆಸಲಿದ್ದಾರೆ. ಈ ಬಗ್ಗೆ ನವಂಬರ್ 4 ರಂದು ಸರ್ಕಾರಕ್ಕೆ ಎಚ್ಚರಿಕೆ ನೀಡುವುದಾಗಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000600798

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ಕುಲಾಂತರಿ ತಳಿಗಳ ವಿರೋಧಿಸಿ ತಾಲ್ಲೂಕಿನಲ್ಲಿ ರೈತರು ನವಂಬರ್ 4 ರಂದು ಬೆಳಿಗ್ಗೆ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದಿಂದ ತಾಲ್ಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ಮನವಿ ನೀಡುತ್ತೇವೆ ಎಂದ ಅವರು ರೈತಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಅವರು ರಾಜ್ಯ ಘಟಕದ ಕಾರ್ಯಾಧ್ಯಕ್ಷರಾಗಿ ಪುನರ್ ಆಯ್ಕೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ಹೋರಾಟದ ಮಾರ್ಗದರ್ಶನ ಜಿಲ್ಲೆಯಲ್ಲಿ ಮುಂದುವರೆಯಲಿ ಎಂದು ಸನ್ಮಾನಿಸಿ ಗೌರವಿಸಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ರಾಜ್ಯ ಘಟಕಕ್ಕೆ ಪುನರ್ ಆಯ್ಕೆಯಾದ ಗೋವಿಂದರಾಜು ಅವರನ್ನು ರೈತ ಸಂಘದ ತಾಲ್ಲೂಕು ಘಟಕ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಾಂತ ರೈತ ಸಂಘದ ಅಜ್ಜಪ್ಪ, ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಯುವ ಘಟಕದ ಶಿವಕುಮಾರ್, ಕುಮಾರಸ್ವಾಮಿ, ಸತ್ತಿಗಪ್ಪ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...