ಗುಬ್ಬಿ | ಪುಂಡರ ಹಾವಳಿ : ಆತಂಕಕ್ಕೆ ಒಳಗಾದ ನಾಗರಿಕರು

Date:

ಗುಬ್ಬಿ ಪಟ್ಟಣದ ಹೊರವಲಯ ಹೇರೂರು ಗ್ರಾಮ ಸಿಐಟಿ ಕಾಲೇಜು ಬಳಿಯ ಎಂಆರ್ ಪಿಎಲ್ ಪೆಟ್ರೋಲ್ ಬಂಕ್ ನಲ್ಲಿ ತಡರಾತ್ರಿ ಸುಮಾರು ಏಳೆಂಟು ಜನರ ಗುಂಪು ದೊಣ್ಣೆ ಹಿಡಿದುಕೊಂಡು ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗುವ ಜೊತೆಗೆ ಗುಬ್ಬಿ ಪಟ್ಟಣದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

ಪೆಟ್ರೋಲ್ ಬಂಕ್ ಗೆ ದ್ವಿಚಕ್ರ ವಾಹನದಲ್ಲಿ ಬಂದ ಪುಂಡರ ಗುಂಪು ಕುಡಿದ ಅಮಲಿನಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟ್ ಸೇದುತ್ತಿದ್ದರು. ಈ ಬಗ್ಗೆ ಪ್ರಶ್ನಿಸಿದ ಬಂಕ್ ಸಿಬ್ಬಂದಿ ಇಲ್ಲಿ ಸಿಗರೇಟ್ ಸೇದುವಂತಿಲ್ಲ ಎಂದಿದ್ದಕ್ಕೆ ಏಕಾಏಕಿ ದೊಣ್ಣೆ, ಕಬ್ಬಿಣದ ಬಕೆಟ್, ಚೇರ್ ತೆಗೆದುಕೊಂಡು ಬಂಕ್ ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪಟ್ಟಣದಲ್ಲಿ ಹಲವು ಬಡಾವಣೆಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ 12 ರವರೆಗೆ ಗುಂಪುಗೂಡಿ ದಾಂಧಲೆ ಮಾಡುವ ಘಟನೆ ಕೆಲ ಬಡಾವಣೆಯಲ್ಲಿ ನಡೆದಿದೆ. ಅಹಿತಕರ ಘಟನೆಗಳು ಹೆಚ್ಚಾಗುವ ಮುನ್ನ ಪೊಲೀಸ್ ಇಲಾಖೆ ಎಚ್ಚೆತ್ತು ಕೊಳ್ಳಬೇಕಿದೆ. ಸಾಮಾಜಿಕ ಜಾಲತಾಣದಲ್ಲಿ ರಾತ್ರಿ ನಡೆದ ಪೆಟ್ರೋಲ್ ಬಂಕ್ ಗಲಭೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು ಇಲ್ಲಿಯವರೆಗೂ ಗುಬ್ಬಿ ಪೊಲೀಸರಿಂದ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...