ತುಮಕೂರು | ಸಾಲ ಪಡೆದಿದ್ದ ರೈತರ ಜಮೀನು ಹರಾಜು ಮಾಡಿದ ಬ್ಯಾಂಕ್: ಗುಬ್ಬಿ ರೈತ ಸಂಘ ಖಂಡನೆ

Date:

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ತಾಳಕೆರೆ ಗ್ರಾಮದ ಈರಯ್ಯ ಮತ್ತು ಮಕ್ಕಳು ಹಾಗೂ ಕೃಷ್ಣಪ್ಪ ಎಂಬ ರೈತರು ಸಾಲ ಮಾಡಿದ್ದನ್ನು ತೀರಿಸಲಾಗದ್ದಕ್ಕೆ ರೈತನ ಜಮೀನನ್ನು ಬ್ಯಾಂಕ್ ಹರಾಜುಗೊಳಿಸಿದ್ದನ್ನು ಗುಬ್ಬಿ ರೈತ ಸಂಘದ ಮುಖಂಡರು ಖಂಡಿಸಿದ್ದಾರೆ.

ತಾಳಕೆರೆ ಗ್ರಾಮದ ಈರಯ್ಯ ಮತ್ತು ಮಕ್ಕಳು ಹಾಗೂ ಕೃಷ್ಣಪ್ಪ ಎಂಬ ರೈತರು 6 ಎಕರೆ ಜಮೀನು ಮೇಲೆ ಪಡೆದ 4.5 ಲಕ್ಷ ಸಾಲಕ್ಕೆ ಬಡ್ಡಿ ವಗೈರಿ ಸೇರಿಸಿ 34.80 ಲಕ್ಷ ರೂಗಳಿಗೆ ಡಿಕ್ರಿ ಮಾಡಿಸಿ ಸಾಲಗಾರ ರೈತರಿಗೆ ಆಧಾರವಾಗಿದ್ದ ಬೆಲೆ ಬಾಳುವ ಜಮೀನು ಹರಾಜು ನಡೆಸಿರುವುದು ಪೂರ್ವ ನಿಯೋಜಿತ ಎನಿಸಿ ರೈತ ಸಂಘ ಉಗ್ರ ಹೋರಾಟಕ್ಕೆ ಮುಂದಾಗಿದೆ. ಈ ಪ್ರತಿಭಟನೆಗೆ ಗುಬ್ಬಿ ತಾಲೂಕು ಸಂಪೂರ್ಣ ಸಹಕಾರ ನೀಡಲಿದೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ತಿಳಿಸಿದರು.

ಗುಬ್ಬಿ ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಸಾಲ ವಸೂಲಾತಿ ಬಲವಂತದಲ್ಲಿ ಮಾಡಬಾರದು ಎಂದು ಸರ್ಕಾರ ಆದೇಶಿಸಿದ್ದರೂ ತುರುವೇಕೆರೆ ಕರ್ನಾಟಕ ಬ್ಯಾಂಕ್ ರೈತರ ಸಾಲಕ್ಕೆ ಅಂದಾಜು ಮೂರು ಕೋಟಿ ಬೆಲೆಬಾಳುವ ಜಮೀನನ್ನು 4.5 ಲಕ್ಷ ಸಾಲಕ್ಕೆ 34.80 ಲಕ್ಷಕ್ಕೆ ಡಿಕ್ರಿ ಮಾಡಿಸಿರುವುದು ಬಿಡ್ಡುದಾರರ ಜೊತೆ ಶಾಮೀಲು ಆಗಿರುವ ಶಂಕೆ ವ್ಯಕ್ತವಾಗಿದೆ. ಈ ರೀತಿ ಬ್ಯಾಂಕ್ ಮಾಡಿದ್ದು ಖಂಡನೀಯ. ಈ ನಿಟ್ಟಿನಲ್ಲಿ ಇದೇ ತಿಂಗಳ 12 ರಂದು ತುರುವೇಕೆರೆ ಬ್ಯಾಂಕ್ ಮುಂದೆ ಬೃಹತ್ ಪ್ರತಿಭಟನೆ ನಡೆಯಲಿದೆ. ಗುಬ್ಬಿ ತಾಲೂಕಿನಿಂದ 300 ಕ್ಕೂ ಅಧಿಕ ರೈತರು ತೆರಳಲಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001201009

ಬರ ಪೀಡಿತ ಪ್ರದೇಶಗಳಲ್ಲಿರುವ ಜಿಲ್ಲೆಯಲ್ಲಿ ಸಾಲ ವಸೂಲಿಗೆ ಮುಂದಾದ ಖಾಸಗಿ ಸಹಕಾರಿ ಬ್ಯಾಂಕ್ ಗಳು ಮಾಡಿರುವ ತಂತ್ರ ಡಿಕ್ರಿ ಮಾಡಿಸಿ ಜಮೀನು ಹರಾಜು ಮಾಡುವುದು ದೊಡ್ಡ ದಂಧೆ ಎನಿಸಿದೆ. ಮಾಫಿಯಾ ರೀತಿ ಭೂ ಕಬಳಿಕೆಗೆ ಈ ಹರಾಜು ಪ್ರಕ್ರಿಯೆ ಕಾನೂನು ರೀತಿ ಮಾಡುವ ದಂಧೆಯಾಗಿದೆ. ಸರ್ಕಾರ ಈ ರೀತಿಯ ವಸೂಲಿ ಬಗ್ಗೆ ಚಕಾರ ಎತ್ತುತ್ತಿಲ್ಲ. ಕಾರ್ಪೊರೇಟ್ ಕಂಪನಿಯ ಸಾಲ ಮನ್ನಾ ಮಾಡುವ ಸರ್ಕಾರ, ರೈತರ ಸಾಲ ಮನ್ನಾ ಮಾಡುತ್ತಿಲ್ಲ. ನಾಗರಿಕ ಸಮಾಜದ ಸಾಲಕ್ಕಾಗಿ ರೈತರ ಭೂಮಿ ಕಿತ್ತುಕೊಳ್ಳುವ ಪ್ರಕ್ರಿಯೆಗೆ ಧಿಕ್ಕಾರ ಕೂಗುತ್ತೇವೆ ಎಂದು ಎಚ್ಚರಿಸಿದ ಅವರು, ವಾಣಿಜ್ಯ ಮತ್ತು ಸಹಕಾರ ಬ್ಯಾಂಕ್ ನಾನಾ ರೀತಿಯ ಕಿರುಕುಳ ನೀಡುತ್ತಿವೆ. ರೈತ ಸಾಲಗಾರನಲ್ಲ, ಸರ್ಕಾರವೇ ರೈತನಿಗೆ ಬಾಕಿದಾರ ಎಂಬ ವೈಜ್ಞಾನಿಕ ಆಧಾರದ ಮೇಲೆ ರೈತ ಸಂಘ ಚಳುವಳಿ ನಡೆಸಲಿದೆ ಎಂದರು.

“ಇಡೀ ಜಿಲ್ಲೆಗೆ ಸಾಲ ನೀಡಿರುವ ಡಿಸಿಸಿ ಬ್ಯಾಂಕ್ ಮಧುಗಿರಿ ತಾಲೂಕಿಗೆ ಇಡೀ ಜಿಲ್ಲೆಗೆ ನೀಡಿದ ಸಾಲದಷ್ಟೇ ಸಾಲ ವಿತರಿಸಲಾಗಿದೆ. ಸಚಿವ ಕೆ.ಎನ್.ರಾಜಣ್ಣ ಬಹಳ ಬುದ್ಧಿವಂತರು. ಎಲ್ಲ ರೈತರನ್ನು ಒಂದೇ ರೀತಿ ಕಾಣಬೇಕಿತ್ತು. ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೆರೆಸಿದ್ದು ಸರಿಯಲ್ಲ. ಮೊದಲು ಈ ಹರಾಜು ಪ್ರಕ್ರಿಯೆ ನಡೆಸಿ ಭೂಮಿ ಕಬಳಿಸುವ ದಂಧೆಗೆ ಬ್ರೇಕ್ ಹಾಕಿ ಎಂದು ರೈತರ ಸಂಘದ ಗುಬ್ಬಿ ತಾಲೂಕು ಅಧ್ಯಕ್ಷ  ಕೆ.ಎನ್.ವೆಂಕಟೇಗೌಡ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ಯುವ ಘಟಕದ ಅಧ್ಯಕ್ಷ ಶಿವಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್, ಪದಾಧಿಕಾರಿಗಳಾದ ಲೋಕೇಶ್, ಸತ್ತಿಗಪ್ಪ, ಯತೀಶ್, ಶಿವಣ್ಣ, ಸುರೇಶ್, ಕೃಷ್ಣಶೆಟ್ಟಿ, ಪ್ರಕಾಶ್, ಹನುಮಂತರಾಜು, ಕನ್ನಿಗಪ್ಪ, ವೆಂಕಟೇಶ್, ಈಶ್ವರಪ್ಪ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...