ಗುಬ್ಬಿ | ಜಾತಿ ಗಣತಿ ಪುನರ್ ಪರಿಶೀಲಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಹಲವು ಜಾತಿ ಜನಾಂಗದಿಂದ ಅಪಸ್ವರ ಕೇಳಿ ಬಂದ ಹಿನ್ನಲೆ ವೈಜ್ಞಾನಿಕ ರೀತಿಯಲ್ಲಿ ಇರದ ಜಾತಿ ಗಣತಿ ಪುನರ್ ಪರಿಶೀಲಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದರು.

ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣವಾದ 50 ಲಕ್ಷ ವೆಚ್ಚದ ಬ್ಲಾಕ್ ಲೆವೆಲ್ ಪಬ್ಲಿಕ್ ಹೆಲ್ತ್ ಯೂನಿಟ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ ಅವರು ಸಣ್ಣಪುಟ್ಟ ಸಮುದಾಯಗಳು ಸಹ ಜಾತಿ ಗಣತಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನಲೆ ಮತ್ತೊಮ್ಮೆ ಪರಿಶೀಲನೆ ಅಗತ್ಯ ಎಂದು ಪುನರುಚ್ಚರಿಸಿದರು.

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗಿಸಿದ ಪ್ರಕರಣ ಖಂಡನೀಯ. ಇದು ಸರ್ಕಾರದ ಆದೇಶವಲ್ಲ. ಕಾಮನ್ ಸೆನ್ಸ್ ಇಲ್ಲದ ಕೆಲ ಸಿಬ್ಬಂದಿಗಳಿಂದ ಈ ಘಟನೆ ನಡೆದಿದೆ. ಜನಿವಾರದಿಂದ ಯಾವ ತೊಂದರೆ ಆಗುತ್ತಿತ್ತು ತಿಳಿದಿಲ್ಲ. ಧಾರ್ಮಿಕ ಭಾವನೆಗೆ ದಕ್ಕೆ ತಂದು ಕೆಲಸ ಮಾಡುವ ಅಗತ್ಯವಿಲ್ಲ. ಮಿತಿ ಮೀರಿದ ನಡವಳಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು ತಲೆ ಕೆಟ್ಟ ರೀತಿ ಹೇಳಿಕೆ ನೀಡುವುದು ಈಗಿನ ರಾಜಕಾರಣದಲ್ಲಿ ಫ್ಯಾಶನ್ ಆಗುತ್ತಿದೆ. ಹಿಂದೆ ಪ್ರತಿ ಪದಕ್ಕೂ ಗಂಭೀರತೆ ಇರುತ್ತಿತ್ತು. ಮನಬಂದಂತೆ ಸುಳ್ಳಿನ ಸರಮಾಲೆ ಹಾಕುತ್ತಾರೆ. ವಿರೋಧ ಪಕ್ಷದ ನಾಯಕ ಅಶೋಕ್ ಅವರು ಪ್ರತಿದಿನ ಈ ಸಾಲಿನಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ತುಮಕೂರು | ಶೋಷಿತರ ಬದಕು ಬದಲಿಸಿದ ʼಅಂಬೇಡ್ಕರ್ʼ ಕೋಚಿಂಗ್ ಸೆಂಟರ್

ಬಹು ಬೇಡಿಕೆಯ ಡಿಜಿಟಲ್ ಸ್ಕ್ಯಾನಿಂಗ್ ಯಂತ್ರ ಗುಬ್ಬಿಗೆ ಬಂದಿದೆ. ತಾಂತ್ರಿಕ ಹುದ್ದೆ ಮಂಜೂರಾತಿ ಮಾಡಿಸಲು ಹಾಗೂ ದೊಡ್ಡಗುಣಿ, ಬಿದರೆ ಆಸ್ಪತ್ರೆಗೆ ಅವಶ್ಯ ಮಂಜೂರಾತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಬಳಿ ಚರ್ಚಿಸಿದ್ದೇನೆ ಎಂದ ಅವರು ಎಚ್ ಎಎಲ್ ಘಟಕ ಗುಬ್ಬಿ ಆಸ್ಪತ್ರೆಗೆ ಎರಡು ಕೋಟಿ ಹಣ ನೀಡಿದೆ. ಜೊತೆಗೆ 1.65 ಕೋಟಿ ರೂಗಳಲ್ಲಿ ನವೀಕರಣ ಕೆಲಸ ಕೂಡ ನಡೆದಿದೆ. ಡಯಾಲಿಸಿಸ್ ಮೂರು ಹಾಸಿಗೆ ಕಾರ್ಯ ನಿರ್ವಹಿಸಿದೆ. ಜೊತೆಗೆ ಜಿ.ಹೊಸಹಳ್ಳಿ ಕ್ರಾಸ್ ಬಳಿ ಮಂಜೂರಾದ ಐದು ಎಕರೆ ಪ್ರದೇಶದಲ್ಲಿ ಹೈಟೆಕ್ ಸರ್ಕಾರಿ ಆಸ್ಪತ್ರೆ ನಿರ್ಮಾಣ ಮಾಡುವ ತಯಾರಿ ಸರ್ಕಾರದ ಹಂತಕ್ಕೆ ತಲುಪಿದೆ ಎಂದರು.

ಸಚಿವರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ ಎಂಬುದಕ್ಕೆ ಯಾವುದೇ ವೈಯಕ್ತಿಕ ಕಾರಣಗಳಿಲ್ಲ. ಸಮಯ ಸಿಕ್ಕಾಗ ಎಲ್ಲಾ ಕಾರ್ಯಕ್ರಮಕ್ಕೆ ಹೋಗಿದ್ದೇನೆ. ಮನಸ್ಸಿಗೆ ಒಪ್ಪದ ಕಾರ್ಯಕ್ರಮಕ್ಕೆ ಹೋಗುವುದಿಲ್ಲ. ಸಚಿವರಿಗೂ ನನಗೂ ಯಾವುದೇ ವೈಮನಸ್ಯ ಇಲ್ಲ. ನಾನೇನು ಅವರ ಆಸ್ತಿ ಹೊಡೆದಿಲ್ಲ. ಅವರೇನು ನನ್ನ ಆಸ್ತಿ ಹೊಡೆದಿಲ್ಲ ಎಂದು ಉತ್ತರ ನೀಡಿದ ಅವರು ನನಗೆ ಬಕೇಟ್ ರಾಜಕಾರಣ ಬರೋಲ್ಲ. ಸಲಾಂ ಹೊಡೆದು ಅಧಿಕಾರ ಎಂದೂ ಪಡೆದಿಲ್ಲ. ಇಂದ್ರ ಚಂದ್ರ ಎಂದು ಹೊಗಳಿ ಅಧಿಕಾರ ಪಡೆಯುವ ಜಾಯಮಾನ ನನ್ನದಲ್ಲ. ಅಧಿಕಾರ ಕೊಟ್ಟಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಖಡಕ್ ಪ್ರತಿಕ್ರಿಯೆ ನೀಡಿದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಮಂಗಳಮ್ಮ, ಸದಸ್ಯರಾದ ಮಹಮ್ಮದ್ ಸಾದಿಕ್, ಕುಮಾರ್, ಸಿ.ಮೋಹನ್, ರೇಣುಕಾ ಪ್ರಸಾದ್, ಶೌಕತ್ ಆಲಿ, ಜಿಪಂ ಮಾಜಿ ಸದಸ್ಯ ಜಿ.ಎಚ್.ಜಗನ್ನಾಥ್, ಬಗರ್ ಹುಕುಂ ಸಮಿತಿ ಸದಸ್ಯ ನರಸಿಂಹಯ್ಯ, ಅಶೋಕ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ, ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಕೇಶವರಾಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...