ಗುಬ್ಬಿ | ಮನುಸ್ಮೃತಿಯ ಅಮಿತ್ ಷಾ ಅವರನ್ನು ಕೇಂದ್ರ ಗೃಹ ಮಂತ್ರಿ ಸ್ಥಾನದಿಂದ ಕೆಳಗಿಳಿಸಿ : ದಸಂಸ ನೇತೃತ್ವದ ಸಂಘಟನೆಗಳ ಒತ್ತಾಯ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಮಾಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಷಾ ಅವರ ಮನುಸ್ಮೃತಿ ಭಾವನೆ ಹೊರ ಬಂದಿದೆ. ಸಂವಿಧಾನದಡಿಯಲ್ಲಿ ಅಧಿಕಾರ ಪಡೆದು ಅವರ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂತಹ ವ್ಯಕ್ತಿಯನ್ನು ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಸಿ ಎಂದು ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದು ತಾಲ್ಲೂಕು ಆಡಳಿತಕ್ಕೆ ಸಲ್ಲಿಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ದಲಿತ ಸಂಘರ್ಷ ಸಮಿತಿ, ಆದಿಜಾಂಬವ ಯುವ ಬ್ರಿಗೇಡ್ ಹಾಗೂ ಭಾರತ್ ಭೀಮ್ ಸೇನ್ ಸೇರಿದಂತೆ ಇನ್ನಿತರ ಅಂಬೇಡ್ಕರ್ ಅನುಯಾಯಿಗಳು ಒಗ್ಗೂಡಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂದೆ ಸಭೆ ನಡೆಸಿ ಅಮಿತ್ ಷಾ ವಿರುದ್ಧ ಘೋಷಣೆ ಕೂಗಿ ನಂತರ ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾ ಸಭೆಯಲ್ಲಿ ದಸಂಸ ತಾಲ್ಲೂಕು ಸಂಚಾಲಕ ಮಾರಶೆಟ್ಟಿಹಳ್ಳಿ ಬಸವರಾಜ್ ಮಾತನಾಡಿ ಅಂಬೇಡ್ಕರ್ ರಚಿತ ಸಂವಿಧಾನ ನಮ್ಮ ದೇಶದ ಅಡಿಪಾಯವಾಗಿದೆ. ನಮ್ಮ ದೇಶದ ಸಾಮಾಜಿಕ ನ್ಯಾಯ ಬದ್ಧತೆ ತೋರಿದ ಅಂಬೇಡ್ಕರ್ ಶೋಷಿತರು, ದೀನ ದಲಿತರ ಪಾಲಿನ ದೇವರು ಎಂಬುದು ಸತ್ಯ. ಅವರ ಸ್ಮರಣೆಯನ್ನು ವ್ಯಸನ ಎನ್ನುವುದು ಅವರ ಕೆಟ್ಟ ಮನಸ್ಥಿತಿ ತೋರುತ್ತದೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000796691 1

ದಲಿತ ಮುಖಂಡ ಎನ್.ಎ.ನಾಗರಾಜ್ ಮಾತನಾಡಿ ಕೀಳು ಸಂಸ್ಕೃತಿ ಅಮಿತ್ ಷಾ ಅವರಿಂದ ವ್ಯಕ್ತವಾಗಿದೆ. ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿದ್ದಲ್ಲದೆ ಅವರ ಅನುಯಾಯಿಗಳನ್ನು ಅವಹೇಳನ ಮಾಡಿದ್ದಾರೆ. ದೇವರ ಸ್ಮರಣೆ ಮಾಡಿ ಏಳು ಜನ್ಮ ಪುಣ್ಯ ಬರುತ್ತೆ ಅಂತ ಹೇಳುವ ಅವರ ಜಾತಿ ಬುದ್ಧಿ ಖಂಡನಾರ್ಹ. ಈ ಕೂಡಲೇ ಅವರು ರಾಜೀನಾಮೆ ಸಲ್ಲಿಸಬೇಕು. ಇಲ್ಲವಾದಲ್ಲಿ ರಾಷ್ಟ್ರಪತಿಗಳು ಅವರನ್ನು ಕೇಂದ್ರ ಸರ್ಕಾರದ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡ ಕಿಟ್ಟದಕುಪ್ಪೆ ನಾಗರಾಜ್ ಮಾತನಾಡಿ ಅಂಬೇಡ್ಕರ್ ಎಂಬ ಪದ ಫ್ಯಾಶನ್ ಎಂದು ಹೇಳಿದ್ದು ಇಡೀ ದೇಶಕ್ಕೆ ಮಾಡಿದ ಅವಮಾನವಾಗಿದೆ. ವಿಶ್ವವೇ ಅಂಬೇಡ್ಕರ್ ಅವರನ್ನು ಹೊಗಳುವ ಈ ಸಂದರ್ಭದಲ್ಲಿ ನಮ್ಮ ದೇಶದ ಕೆಲ ಮಂದಿ ಮನುಸ್ಮೃತಿ ಪಾಲಕರು ಅವರಿಗೆ ಅಪಮಾನಿಸುತ್ತಿರುವುದು ಸರಿಯಲ್ಲ. ಮುಂದಿನ ಚುನಾವಣಾ ಸಂದರ್ಭದಲ್ಲಿ ಈ ಮಾತಿಗೆ ತಕ್ಕ ಉತ್ತರ ಅಂಬೇಡ್ಕರ್ ಅನುಯಾಯಿಗಳು ಕೊಡುತ್ತಾರೆ. ಸಂವಿಧಾನದ ಪ್ರಕಾರ ಅಧಿಕಾರ ಪಡೆದು ಅವರ ಬಗ್ಗೆ ಅವಹೇಳನ ಖಂಡನೀಯ. ಈ ತಕ್ಷಣದಿಂದ ಗೃಹ ಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕು ಎಂದು ಒತ್ತಾಯಿಸಿದರು.

ಮೆರವಣಿಗೆಯಲ್ಲಿ ಅಮಿತ್ ಷಾ ಅವರ ಭಾವಚಿತ್ರಕ್ಕೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಬಸವರಾಜು, ಹರಿವೇಸಂದ್ರ ಕೃಷ್ಣಪ್ಪ, ನರೇಂದ್ರಕುಮಾರ್, ಶಿವರಾಜ್, ಸಚಿನ್, ಮಧು, ಸಾವಿತ್ರಮ್ಮ, ನಂದಿನಿ, ಮಂಜುಳಾ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...