ಗುಬ್ಬಿ | ಕೆಆರ್ ಎಸ್ ಪಕ್ಷದ ಪ್ರತಿಭಟನೆಗೆ ಕಂದಾಯ ನೌಕರರ ವಿರೋಧ

Date:

ತುಮಕೂರು ಜಿಲ್ಲಾಧಿಕಾರಿಗಳಿಗೆ ಭ್ರಷ್ಟಚಾರ ಹೆಸರಿನಲ್ಲಿ ಅಪಮಾನ ಮಾಡಿರುವ ಕೆಆರ್ ಎಸ್ ಪಕ್ಷ ವರ್ತನೆ ಖಂಡನೀಯ. ಜಿಲ್ಲಾಧಿಕಾರಿಗಳ ಪರವಾಗಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಘೋಷಣೆ ಹಾಕಿ ಸರ್ಕಾರಿ ನೌಕರರ ಸಂಘ, ಕಂದಾಯ ನೌಕರರ ಸಂಘ, ಗ್ರಾಮ ಆಡಳಿತಾಧಿಕಾರಿಗಳ ಸಂಘ, ಭೂ ಮಾಪಕರ ಸಂಘ ಹಾಗೂ ಗ್ರಾಮ ಸಹಾಯಕರ ಸಂಘದ ಎಲ್ಲಾ ಸದಸ್ಯರು ಕಪ್ಪು ಪಟ್ಟಿ ಧರಿಸಿ ತಾಲ್ಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ತಹಶೀಲ್ದಾರ್ ಆರತಿ.ಬಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಪ್ರಸಾದ್ ಯಾವುದೇ ಸಾಕ್ಷ್ಯಾಧಾರ ಇಲ್ಲದ ಆರೋಪ ಮಾಡಿದ್ದಲ್ಲದೆ ಉನ್ನತ ಅಧಿಕಾರಿಗಳಿಗೆ ಶಾಲು ಪೇಟೆ ರೇಷ್ಮೆ ಸೀರೆ ನೀಡಿ ನಾಗರೀಕ ಸನ್ಮಾನ ಮಾಡುವುದಾಗಿ ಹೇಳಿರುವ ಪಕ್ಷ ಸಣ್ಣ ನೌಕರರನ್ನು ಬಿಡುವುದಿಲ್ಲ. ಮಾನಸಿಕ ಹಿಂಸೆ ನೀಡಲು ಎಲ್ಲಾ ರೀತಿಯಲ್ಲಿ ಮುಂದಾಗುತ್ತಾರೆ. ಮೊಬೈಲ್ ಹಿಡಿದು ವಿಡಿಯೋ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ತೀವ್ರ ಹಿಂಸೆ ಇತ್ತೀಚಿಗೆ ಹೆಚ್ಚಾಗಿದೆ. ಆರ್ ಟಿಐ ಕಾರ್ಯಕರ್ತರ ಹೆಸರಿನಲ್ಲಿ ಸಹ ಕರ್ತವ್ಯಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಿ ಸರ್ಕಾರಿ ನೌಕರರನ್ನು ಉಳಿಸಿ ಕೆಲಸ ಮಾಡಲು ಅನುವು ಮಾಡಬೇಕು ಎಂದು ಮನವಿ ಮಾಡಿದರು.

ಕಂದಾಯ ನೌಕರರ ಸಂಘದ ಅಧ್ಯಕ್ಷ ಮೋಹನ್ ಮಾತನಾಡಿ ಮಹಿಳಾ ಸಿಬ್ಬಂದಿಗಳ ಕೆಲಸಕ್ಕೆ ಅಡ್ಡಿ ಪಡಿಸಿ ವಿಡಿಯೋ ಹಿಡಿದು ಫೇಸ್ ಬುಕ್ ಮೂಲಕ ನೇರ ಪ್ರಸಾರ ಮಾಡುವುದು ಸರಿಯಲ್ಲ. ರಾಜ್ಯದ ಹಲವು ಜಿಲ್ಲೆಯಲ್ಲಿ ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿಗಳ ಮೇಲೆ ಇಲ್ಲಸಲ್ಲದ ದೂರು ಹೇಳಿ ವಿಡಿಯೋ ಮಾಡುವುದು ಮಾನಸಿಕ ಹಿಂಸೆ ಆಗಿದೆ ಎಂದು ಮೌಖಿಕ ದೂರು ಈಗಾಗಲೇ ಬಂದಿವೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈಗ ಜಿಲ್ಲೆಯ ದಂಡಾಧಿಕಾರಿ ಮೇಲೆ ಆರೋಪ ಮಾಡುತ್ತಿರುವುದು ತೀವ್ರ ಆಘಾತ ತಂದಿದೆ. ಮುಂದಿನ ದಿನದಲ್ಲಿ ಬಿ ಮತ್ತು ಸಿ ದರ್ಜೆ ನೌಕರರ ಗತಿ ಹೇಗೆ ಎಂಬ ಆಂತಕ ಎಲ್ಲರಲ್ಲೂ ಮನೆ ಮಾಡಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷೆ ಸುಮತಿ ಮಾತನಾಡಿ ಸಾರ್ವಜನಿಕ ಕೆಲಸ ಮಾಡುವ ಸರ್ಕಾರಿ ನೌಕರರನ್ನು ಸಾರ್ವಜನಿಕವಾಗಿಯೇ ಅಪಮಾನಿಸುವುದು ಎಷ್ಟು ಸರಿ. ಕಾನೂನು ಬದ್ಧ ಕೆಲಸ ಮಾಡುವಾಗ ಕೆಲ ನಿಷ್ಠುರ ಸನ್ನಿವೇಶ ಎದುರಾಗುತ್ತವೆ. ಈ ಸಮಯ ಭ್ರಷ್ಟಚಾರ ಆರೋಪ ಮಾಡುವುದು ನಡೆಯುತ್ತಿದೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಭೂ ಮಾಪಕರ ಸಂಘದ ಅಧ್ಯಕ್ಷ ನಿಜಗುಣಪ್ಪ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಸೇರಿದಂತೆ ಎಲ್ಲಾ ಸಂಘದ ಪದಾಧಿಕಾರಿಗಳು, ಸದಸ್ಯರು ಕಪ್ಪು ಪಟ್ಟಿ ಧರಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...