ಗುಬ್ಬಿ | ಸುಳ್ಳು ಹೇಳೋದನ್ನು ಮೊದಲು ಕಲಿಸುವುದು ಆರ್ ಎಸ್ಎಸ್: ಶಾಸಕ ಎಸ್.ಆರ್.ಶ್ರೀನಿವಾಸ್

Date:

ಸುಳ್ಳನ್ನು ನೂರು ಬಾರಿ ಹೇಳಿ ಸತ್ಯ ಮಾಡುವ ಪ್ರವೃತ್ತಿ ಕಲೆಯನ್ನು ಬಿಜೆಪಿ ಮುಖಂಡರಿಗೆ ಆರ್ ಎಸ್ಎಸ್ ಮೊದಲ ಪಾಠವಾಗಿ ಹೇಳಿ ಕೊಡುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ನೇರ ಆರೋಪ ಮಾಡಿದರು.

ತಾಲ್ಲೂಕಿನ ಕಡಬ ಹೋಬಳಿ ಇಸ್ಲಾಂಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಕಡಬ ಕೆಜಿ ಟೆಂಪಲ್ ರಸ್ತೆ ಅಭಿವೃದ್ಧಿಯ 10 ಕೋಟಿ ರೂಗಳ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿಯ ಕಿಕ್ ಬ್ಯಾಕ್ ಆರೋಪ ಮಾಡಿದ ಬಿಜೆಪಿ ಮೊದಲ ಪಾಠವನ್ನು ಜನರಿಗೆ ಒಪ್ಪಿಸುತ್ತಿದೆ. ದಿಲೀಪ್ ಕುಮಾರ್ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಯಾವುದಕ್ಕೂ ಮುಖಂಡನಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು.

ಹೇಮಾವತಿ ಎಕ್ಸ್ ಪ್ರೆಸ್ ಕಾಮಗಾರಿ ಬಗ್ಗೆ ನನ್ನದು ವಿರೋಧವಿದೆ. ಇವತ್ತೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕಾದ ನಾನು ನನ್ನ ನೋವುಗಳನ್ನು ಅಲ್ಲಿಯೇ ಹೇಳಿಕೊಳ್ಳುತ್ತೇನೆ. ಪೈಪ್ ಲೈನ್ ಮಾಡದೇ ಬುಗುಡನಹಳ್ಳಿ ಕೆರೆಗೆ ಹರಿಯುವ 800 ಕ್ಯೂಸೆಕ್ಸ್ ಹರಿವನ್ನು ಹೆಚ್ಚಿಸಿ ಅಗಲೀಕರಣ ಮಾಡಿ ಕುಣಿಗಲ್ ಮೂಲಕ ನೀರು ಪಡೆಯುವ ಬಗ್ಗೆ ಚರ್ಚೆ ಮಾಡುತ್ತೇನೆ ಎಂದ ಅವರು ಬಿಜೆಪಿ ಮುಸ್ಲಿಂರನ್ನು ದೇಶದಿಂದ ಓಡಿಸುವ ಬಗ್ಗೆ ಮಾತನಾಡುತ್ತಾರೆ. ಆದರೆ 11 ವರ್ಷ ಬಿಜೆಪಿ ಸರ್ಕಾರ ಆ ಕೆಲಸ ಮಾಡಿದೆಯೇ, ಇಲ್ಲ. ದೇಶದಲ್ಲೇ ಹುಟ್ಟಿ ಬೆಳೆದ ನಾಗರೀಕರು ಅವರ ಬದುಕು ಕಟ್ಟಿಕೊಳ್ಳಬೇಕು. ರಾಜಕೀಯಕ್ಕೆ ಜಾತಿ ಹೆಸರು ಹೇಳಿಕೊಂಡು ಬಿಜೆಪಿ ನಡೆದುಬಂದಿದೆ ಎಂದು ಛೇಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೃಹ ಸಚಿವ ಪರಮೇಶ್ವರ್ ಅವರು 40 ವರ್ಷದ ರಾಜಕೀಯದಿಂದ ಬೆಳೆದ ದಲಿತ ನಾಯಕರು. ಅವರ ಬೆಳವಣಿಗೆ ಸಹಿಸದ ಬಿಜೆಪಿ ಇಡಿ ದಾಳಿ ಮಾಡಿಸಿದೆ. ಇದನ್ನು ತಿರುಚಿ ಡಿ.ಕೆ.ಶಿವಕುಮಾರ್ ಮಾಡಿಸಿದ್ದು ಎಂದು ಹೇಳುವ ಕುಮಾರಸ್ವಾಮಿ ಅವರು ಇಡಿಯ ಪಾಲುದಾರರು. ಬಿಜೆಪಿ ಜೊತೆ ಸೇರಿ ಪ್ಲೇಟ್ ಬದಲಿಸುತ್ತಾರೆ. ಬಿಜೆಪಿಯ ಯಾವ ನಾಯಕರ ಮನೆಗೂ ಇಡಿ ದಾಳಿ ಮಾಡಿಲ್ಲ. ಅವರೆಲ್ಲಾ ಆಶ್ರಯ ಮನೆಯಲ್ಲಿ ವಾಸವಾಗಿದ್ದಾರೆಯೇ, ಅವರದ್ದು ವಿದ್ಯಾ ಸಂಸ್ಥೆ ಇಲ್ಲವೇ, ಈ ಬಗ್ಗೆ ಸುಪ್ರೀಂ ಕೋರ್ಟ್ ಸಹ ಬಿಜೆಪಿಗೆ ಛೀಮಾರಿ ಹಾಕಿದೆ. ವಾಸ್ತವ ಹೇಳಿಕೆ ನೀಡಬೇಕು. ಅದನ್ನು ಬಿಟ್ಟು ಜನರಿಗೆ ನಂಬಿಕೆ ಬಾರದಂತೆ ಹೇಳುತ್ತಾರೆ. ಕುಮಾರಸ್ವಾಮಿ ಎಂದಿಗೂ ಸತ್ಯಕ್ಕೆ ಹತ್ತಿರ ಮಾತು ಹೇಳಿಲ್ಲ. ನಾನು ಹತ್ತಿರದಿಂದ ನೋಡಿದ್ದೇನೆ ಎಂದು ಹೇಳಿದ ಅವರು ಜಿಪಂ ತಾಪಂ ಚುನಾವಣೆಗೂ ಜಾತಿ ಮೀಸಲಾತಿಗೂ ಯಾವ ಸಂಬಂಧವಿಲ್ಲ. ಕೋರ್ಟ್ ಆದೇಶದಂತೆ ಸ್ಥಳೀಯ ಚುನಾವಣೆ ನಡೆಯಲಿದೆ. ಜಾತಿ ಗಣತಿ ವರ್ಗೀಕರಣ ಕೂಡಾ ನಡೆಯಲಿದೆ. ಜಾತಿ ಧರ್ಮ ಬಗ್ಗೆ ಮಾತನಾಡುತ್ತಲೇ ಹಿಂದೂ ಕಾರ್ಯಕರ್ತರನ್ನು ಹಿಂದೂಗಳೇ ಕೊಲೆ ಮಾಡಿ ಸಾಬ್ರು ಮಾಡಿದ್ದು ಎನ್ನುತ್ತಾರೆ ಎಂದು ಆಕ್ರೋಶದಿಂದ ಪ್ರತಿಕ್ರಿಯೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಲಕ್ಷ್ಮೀನಾರಾಯಣ, ಲಿಂಗಮ್ಮನಹಳ್ಳಿ ರಾಜಣ್ಣ, ಎಸ್.ಎಲ್.ನರಸಿಂಹಯ್ಯ, ಪಟೇಲ್ ದೇವರಾಜ್, ಶಂಕರಾನಂದ, ರೆಹಮತ್ ವುಲ್ಲಾ, ಫಸ್ಲೂನ್, ಗುತ್ತಿಗೆದಾರ ಚಂದ್ರಕಾಂತ್, ಲೋಕೋಪಯೋಗಿ ಇಲಾಖೆ ಎಇಇ ಯೋಗೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...