ಗುಬ್ಬಿ | ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ಸಂವಿಧಾನ ವಿರೋಧಿ : ಶಾಸಕ ಎಂ.ಟಿ.ಕೃಷ್ಣಪ್ಪ

Date:

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನಕ್ಕೂ ಒಳಪಡಿಸಿದ ಈ ಸಂದರ್ಭದಲ್ಲಿ ಸರ್ಕಾರ ಜಾರಿ ಮಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ವೇತನ ನಿಗದಿ ಮಾಡಿರುವುದು ಸಂವಿಧಾನಾತ್ಮಕವಲ್ಲ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಟೀಕಿಸಿದರು.

ಗುಬ್ಬಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿನ ಶಾಸಕ ಕಾರ್ಯಾಲಯದಲ್ಲಿ ಜನ ಸ್ಪಂದನ ಕಾರ್ಯಕ್ರಮ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಎಂಟು, ಹತ್ತು ಸಾವಿರ ರೂಗಳಿಗೆ ಸಮಾಜದ ಹಿತ ಕಾಯಲು ದುಡಿಯುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳ ಮಾಡಿದ್ದರೆ ಸರ್ಕಾರದ ನಡೆ ಒಪ್ಪಬಹುದಿತ್ತು. ಕಾಂಗ್ರೆಸ್ ಕಾರ್ಯಕರ್ತರನ್ನು ಗುರುತಿಸಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಸರಿನಲ್ಲಿ ತಾಲ್ಲೂಕಿಗೆ 25 ಸಾವಿರ ಹಾಗೂ ಜಿಲ್ಲಾ ಮಟ್ಟಕ್ಕೆ 40 ಸಾವಿರ ಹಾಗೂ ರಾಜ್ಯ ಮಟ್ಟದಲ್ಲಿ ಸಚಿವ ಸ್ಥಾನಮಾನ ಕಲ್ಪಿಸುವುದು ಅಸಂವಿಧಾನ ನಡೆ ಎಂದು ಕಿಡಿಕಾರಿದರು.

ಪಕ್ಷದ ಕಾರ್ಯಕರ್ತರಿಗೆ ಅವರ ಪಕ್ಷದಿಂದ ಕೆಪಿಸಿಸಿ ಮೂಲಕ ವೇತನ ನೀಡಲಿ. ಸರ್ಕಾರದ ಹಣ ಬಳಸಿರುವುದು ಸರಿಯಲ್ಲ. ಅಭಿವೃದ್ದಿ ಪೂರಕ ಸಾರ್ವಜನಿಕ ತೆರಿಗೆ ಹಣವನ್ನು ಕಾರ್ಯಕರ್ತರಿಗೆ ನೀಡಲು ಯಾವ ಹಕ್ಕು ಇಲ್ಲ. ಕೂಡಲೇ ಸರ್ಕಾರದಿಂದ ಈ ರೀತಿ ವ್ಯಯ ಮಾಡದಂತೆ ಕ್ರಮ ಕೈಗೊಳ್ಳಬೇಕು ಎಂದ ಅವರು ಪೋನ್ ಕದ್ದಾಲಿಕೆ ಬಗ್ಗೆ ಬಗ್ಗೆ ದಿನವಿಡೀ ಚರ್ಚೆ ಮಾಡುವುದು ಸಮಯ ವ್ಯರ್ಥ. ಕಾಲೇಜು ಮಂಜೂರು ಮಾಡಲು ಮನವಿ ಮಾಡಿದರೆ ಮಕ್ಕಳ ಶಿಕ್ಷಣ ವಿಚಾರ ಬಿಟ್ಟು ಸಲ್ಲದ ರಾಜಕಾರಣ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹನಿ ಟ್ರ್ಯಾಪ್ ವಿಚಾರದಲ್ಲಿ ಬಲೆಗೆ ಬಿದ್ದವರು ಹಾಗೂ ಬಲೆ ಬೀಸಿದವರು ಅನುಭವಿಸುತ್ತಾರೆ. ಈ ಬಗ್ಗೆ ಯಾವ ಪ್ರತಿಕ್ರಿಯೆ ಬೇಕಿಲ್ಲ. ವಿಶೇಷ ತನಿಖಾ ತಂಡ ರಚನೆ ಮಾಡಿ ತನಿಖೆ ನಡೆಯಲಿ. ಅನವಶ್ಯ ಸದನದ ಸಮಯ ವ್ಯಯ ಆಗುವುದು ಸರಿಯಲ್ಲ ಎಂದ ಅವರು ಅಧಿಕೃತ ದಾಖಲೆ ಇಲ್ಲ. ಇನ್ನೂ ದೂರು ದಾಖಲಾಗಿಲ್ಲ. ಊಹಾಪೋಹ ಚರ್ಚೆ ಬೇಕಿಲ್ಲ. ಅಭಿವೃದ್ದಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಕೇವಲ ಗ್ಯಾರಂಟಿ ಜಪದಲ್ಲಿದೆ. ಇನ್ನಿತರ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡ ಜಿ.ಎನ್.ಬೆಟ್ಟಸ್ವಾಮಿ, ಜೆಡಿಎಸ್ ಸಿ.ಎಸ್.ಪುರ ಹೋಬಳಿ ಅಧ್ಯಕ್ಷ ಜಗದೀಶ್, ಮುಖಂಡ ಅವ್ವೇರಹಳ್ಳಿ ಕೃಷ್ಣಪ್ಪ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...