ಗುಬ್ಬಿ | ಮಕ್ಕಳಿಗೆ ವಹಿವಾಟು ಕಲಿಸಿದ ಸಂತೆಮೇಳ : ಸಂತೆ ಮೈದಾನವಾದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ

Date:

ವ್ಯಾಪಾರ ವ್ಯವಹಾರ ಜ್ಞಾನ ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಸಂತೆ ವ್ಯಾಪಾರದ ಪರಿಕಲ್ಪನೆಯಲ್ಲಿ ಆಯೋಜಿಸಿದ್ದ ಸಂತೆ ಮೇಳ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಿಜವಾದ ಸಂತೆಯ ಪ್ರತಿರೂಪ ಸೃಷ್ಟಿಸಿತ್ತು.

ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಹೆಚ್ಚಾಗಿ ಅಧ್ಯಯನ ಮಾಡುವ ಈ ಶಾಲೆಯಲ್ಲಿ ಹಳ್ಳಿ ಸೊಗಡಿನ ಮಕ್ಕಳು ಸಂತೆಯ ಅಪರಾವತಾರ ನಿರ್ಮಿಸಿದರು. ರೈತರ ಮಕ್ಕಳೇ ಬಹುತೇಕ ಇರುವ ಕಾರಣ ತಾವೇ ಬೆಳೆದ ತರಕಾರಿ, ಹಣ್ಣಗಳ ಜೊತೆ ಚುರುಮುರಿ, ಪಾನಿಪುರಿ, ಜ್ಯೂಸ್, ಕಾಫಿ ಟೀ ಹೀಗೆ ಎಲ್ಲವೂ ಶಾಲೆಯ ಆವರಣದಲ್ಲಿ ರಂಗು ರಂಗಾಗಿ ಕಾಣಿಸಿತು. ಹೆಣ್ಣು ಮಕ್ಕಳೇ ವ್ಯಾಪಾರಸ್ಥರಾಗಿ ವ್ಯವಹಾರ ನಡೆಸಿದ್ದು, ಚೌಕಾಸಿ ವ್ಯಾಪಾರ, ಗ್ರಾಹಕರ ನಡುವಿನ ಸಂಪರ್ಕ, ಲೆಕ್ಕಾಚಾರದ ಮನಸ್ಥಿತಿ ಎಲ್ಲವನ್ನೂ ಕಲಿಯುವ ವಾತಾವರಣ ಅಲ್ಲಿ ಸೃಷ್ಟಿಯಾಗಿತ್ತು.

1000785280

ಮಕ್ಕಳ ಸಂತೆಯಲ್ಲಿ ವ್ಯಾಪಾರ ಮಾಡಿದ ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನ ಇಲ್ಲವಾಗಿದೆ. ಮಕ್ಕಳ ತೀಕ್ಷ್ಣ ಮತಿ ಹೊರಬರಲು ಈ ಸಂತೆಮೇಳ ಉಪಯೋಗವಾಗಿದೆ. ಶಿಕ್ಷಣ ಇಲಾಖೆಯ ಈ ಕಲ್ಪನೆ ಮಕ್ಕಳಲ್ಲಿ ಗಣಿತಜ್ಞಾನ ವೃದ್ಧಿ ಮಾಡುತ್ತದೆ. ಅದರಲ್ಲೂ ಗ್ರಾಮೀಣ ಮಕ್ಕಳು ಹೆಚ್ಚಾಗಿರುವ ಈ ಶಾಲೆಯಲ್ಲಿ ಹೆಣ್ಣು ಮಕ್ಕಳು ವ್ಯಾಪಾರ ವ್ಯವಹಾರ ಮಾಡುವುದರಲ್ಲಿ ಎತ್ತಿದ ಕೈ ಎಂದು ತೋರಿಸಿದ್ದಾರೆ. ತರಕಾರಿ, ಹಣ್ಣುಗಳ ಜೊತೆ ಕೆಲ ವಸ್ತುಗಳು ಮಾರಾಟಕ್ಕೆ ಬಂದಿದ್ದು ನಿಜವಾದ ಸಂತೆಯ ವೈಭವ ಕಂಡು ಬಂತು. ನಾಲ್ಕು ಗೋಡೆಯ ಶಿಕ್ಷಣಕ್ಕಿಂತ ಹೊರಗಿನ ಪ್ರಪಂಚ ತೋರಿಸುವ ಈ ಶಿಕ್ಷಣ ಉತ್ತಮ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000785278

ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ಸಂತೆಗೆ ಭೇಟಿ ನೀಡಿ ಮಕ್ಕಳ ಆಸಕ್ತಿ ಆಲಿಸಿದರು. ಈ ಸಂದರ್ಭದಲ್ಲಿ ಎಸ್ ಡಿಎಂಸಿ ಅಧ್ಯಕ್ಷ ರೇಣುಕಪ್ಪ, ಮುಖ್ಯಶಿಕ್ಷಕಿ ದೇವಿಕಾ ಇತರರು ಇದ್ದರು.


‘ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿ ಹಾಗೂ ವಿಜ್ಞಾನ ವಸ್ತು ಪ್ರದರ್ಶನ ನಡೆಸಿ ಮಕ್ಕಳ ಪ್ರತಿಭೆಗೆ ವೇದಿಕೆ ಸೃಷ್ಟಿಸಿದೆ. ಈ ಜೊತೆಗೆ ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸಲು ಸಂತೆ ಮೇಳ ನಡೆಸುತ್ತಿದ್ದು ಮಕ್ಕಳಿಗೆ ಶಾಲೆಯ ಹೊರತಾದ ಪ್ರಪಂಚ ಪರಿಚಯ ಮಾಡಲಾಗುತ್ತಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...