ಗುಬ್ಬಿ | ಗ್ರಾಹಕರಿಗೆ ಸ್ಪಂದಿಸದ ಎಸ್ ಬಿಐ ಬ್ಯಾಂಕ್ ಅಧಿಕಾರಿಗಳು : ದಿಢೀರ್ ಪ್ರತಿಭಟನೆ ನಡೆಸಿದ ಕನ್ನಡ ವಿಜಯಸೇನೆ

Date:

ಗ್ರಾಹಕರ ಬಳಕೆಗೆ ಬಾರದ ಎಟಿಎಂ ಯಂತ್ರ ನಿರ್ವಹಣೆ ಬಗ್ಗೆ ಎಸ್ ಬಿಐ ಬ್ಯಾಂಕ್ ಅಧಿಕಾರಿಗಳು ಅಸಡ್ಡೆ ಉತ್ತರ ನೀಡಿ ಗ್ರಾಹಕರನ್ನು ಬಾಯಿ ಮುಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಈ ಜೊತೆಗೆ ಬ್ಯಾಂಕ್ ಸಿಬ್ಬಂದಿಗಳಲ್ಲಿ ಬಹುತೇಕ ಕನ್ನಡ ಬಾರದ ಸಿಬ್ಬಂದಿಗಳಿದ್ದು ಗ್ರಾಮೀಣ ಗ್ರಾಹಕರಿಗೆ ಸರಿಯಾದ ಉತ್ತರ ಸಿಗದೆ ಬೇಸರ ವ್ಯಕ್ತಪಡಿಸುತ್ತಿರುವ ಘಟನೆ ಸೇರಿದಂತೆ ಬಹಳ ವಿಚಾರದಲ್ಲಿ ರೋಸಿಹೋದ ಗ್ರಾಹಕರ ಪರವಾಗಿ ಕನ್ನಡ ವಿಜಯಸೇನೆ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ಬ್ಯಾಂಕ್ ಮುಂದೆ ಜಮಾಯಿಸಿದ ವಿಜಯಸೇನೆ ಕಾರ್ಯಕರ್ತರು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಮೇಲಾಧಿಕಾರಿ ಎಜಿಎಂ ಸ್ಥಳಕ್ಕೆ ಬರಬೇಕು ಎಂದು ಆಗ್ರಹಿಸಿ ಧರಣಿ ಮುಂದುವರೆಸಿದರು. ಗುಬ್ಬಿ ಪಟ್ಟಣದಲ್ಲಿ ಎರಡು ಎಸ್ ಬಿಐ ಬ್ಯಾಂಕ್ ಶಾಖೆಗಳಿದ್ದು ಪೊಲೀಸ್ ಠಾಣೆ ಪಕ್ಕದಲ್ಲಿ ಹೊಸ ಶಾಖೆ ಆರಂಭವಾಗಿ ನಾಲ್ಕು ವರ್ಷ ಕಳೆದರೂ ಇಲ್ಲಿನ ಎಟಿಎಂ ದಿನ ಪೂರ್ತಿ ಕೆಲಸ ಮಾಡಿಲ್ಲ. ವಾರಾಂತ್ಯದ ರಜೆ ಹಾಗೂ ಹಬ್ಬಗಳ ರಜೆಯಲ್ಲಿ ಎಟಿಎಂ ಸಂಪೂರ್ಣ ಬಾಗಿಲು ಮುಚ್ಚಲಾಗುತ್ತಿದೆ. ಡಿಜಿಟಲ್ ಯುಗದಲ್ಲಿ ಕ್ಯಾಶ್ ಲೆಸ್ ವ್ಯವಹಾರ ಮಾಡುವ ಮಾತುಗಳನ್ನು ಹೇಳುವ ಬ್ಯಾಂಕ್ ಅಧಿಕಾರಿಗಳು ಅವರ ಎಟಿಎಂ ಬಾಗಿಲು ಹಾಕುತ್ತಿರುವುದು ವಿಷಾದನೀಯ. ಈ ಹಿನ್ನಲೆ ಬ್ಯಾಂಕ್ ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಗ್ರಾಹಕರ ಕಷ್ಟ ಆಲಿಸಬೇಕು ಎಂದು ಕನ್ನಡ ವಿಜಯಸೇನೆ ತಾಲ್ಲೂಕು ಅಧ್ಯಕ್ಷ ವಿನಯ್ ಆಗ್ರಹಿಸಿದರು.

ಎಟಿಎಂ ಯಂತ್ರಗಳಲ್ಲಿ ಹಣದ ವ್ಯವಹಾರ ಮಾಡಲಾಗದೆ ಸ್ಥಳೀಯರು ಸಾಕಷ್ಟು ಪರದಾಡಿದ್ದಾರೆ. ಆಸ್ಪತ್ರೆಯ ವೆಚ್ಚಕ್ಕೆ ಡಿಪಾಸಿಟ್ ಮಾಡಲು ಹಲವು ಮಂದಿ ಎಟಿಎಂ ಹುಡುಕಿ ಅಲೆದಾಡಿದ್ದು ಪ್ರತಿ ವಾರದ ಅಂತ್ಯದಲ್ಲಿ ಮಾಮೂಲಿಯಾಗಿ ಕಾಣುತ್ತಿದೆ. ಡಿಜಿಟಲ್ ವ್ಯವಹಾರ ಎಂದು ಹೇಳುವ ಬ್ಯಾಂಕ್ ಅಧಿಕಾರಿಗಳ ಬಳಿ ಪ್ರಶ್ನಿಸಿದರೆ ಎಟಿಎಂ ನಿರ್ವಹಣೆ ಮಾಡುವ ಏಜೆನ್ಸಿ ಹೆಸರು ಹೇಳಿ ಜಾಣ ಮೌನ ವಹಿಸುತ್ತಾರೆ. ಯಂತ್ರಗಳು ಕೆಟ್ಟು ನಿಂತರೆ ಕೂಡಲೇ ದುರಸ್ಥಿ ಮಾಡದ ಏಜೆನ್ಸಿ ಗ್ರಾಹಕರಿಂದ ದೂರು ಬಂದ ಮೇಲೂ ಇತ್ತ ಕಡೆ ಗಮನಹರಿಸುವುದಿಲ್ಲ. ಬ್ಯಾಂಕ್ ಅಧಿಕಾರಿಗಳು ಏಜೆನ್ಸಿಗೆ ಕೂಡಲೇ ದುರಸ್ಥಿಗೆ ಕರೆಯುವ ಜವಾಬ್ದಾರಿ ಹೊರಬೇಕಿದೆ ಎಂದು ವಿಜಯಸೇನೆ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಜಿ.ಎಸ್.ಮಂಜುನಾಥ್ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ವಿಚಾರ ತಿಳಿದ ಬಳಿಕ ಎಚ್ಚೆತ್ತ ಅಧಿಕಾರಿಗಳಿಂದ ಎಟಿಎಂ ದುರಸ್ಥಿ ಕೆಲಸ ಆರಂಭಿಸಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ವಾಗ್ದಾನ ಬಳಿಕ ವಿಜಯಸೇನೆ ಪ್ರತಿಭಟನೆ ಸ್ಥಗಿತ ಗೊಳಿಸಿದರು.

ಪ್ರತಿಭಟನೆಯಲ್ಲಿ ವಿಜಯಸೇನೆ ಯುವ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಾಸು ಅರಸ್ ಗೌಡ, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಸುರಿಗೇನಹಳ್ಳಿ ರಂಗನಾಥ್, ಸೇನೆಯ ಸದಸ್ಯರಾದ ರಮೇಶ್ ಜಿಡ್ರಾ, ತೇಜಸ್, ಸಜ್ಜು, ಶ್ರೀಧರ್, ಗೌತಮ್, ಯಶಸ್ಸು, ಮದನ್, ಕುಶಲ್, ಮಹಮದ್ ಗೌಸ್,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...