ಗುಬ್ಬಿ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಶಾಲೆಯೇ ವೇದಿಕೆ : ಮುಖ್ಯ ಶಿಕ್ಷಕ ಬಿ.ನರಸಿಂಹಮೂರ್ತಿ

Date:

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಇಲಾಖೆ ಸೂಕ್ತ ವೇದಿಕೆ ಸೃಷ್ಟಿಸಿಕೊಟ್ಟಿದೆ. ಶಿಕ್ಷಕ ವರ್ಗ ಸಹ ಮಕ್ಕಳಿಗೆ ತರಬೇತಿ ನೀಡಿ ಸಂಕುಚಿತ ಮನೋಭಾವ ತೊಡೆದು ಪ್ರತಿಭೆಗೆ ನೀರೆರೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ ಬಿ.ನರಸಿಂಹಮೂರ್ತಿ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಕಲ್ಗುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರ್ಕಾರಿ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮೂಲಕ ಹತ್ತು ಹಲವು ಗ್ರಾಮೀಣ ಪ್ರತಿಭೆ ಇಂದು ಬಹುಮುಖ ಪ್ರತಿಭೆಗಳಾಗಿ ಹೊರ ಹೊಮ್ಮಿದೆ ಎಂದರು.

ಶಾಲೆಯ ವಾರ್ಷಿಕೋತ್ಸವ ಮಕ್ಕಳ ಆಸಕ್ತಿ ಅನುಸಾರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಅನುವು ಮಾಡಲಾಗಿ ರಾಮಾಯಣ ನಾಟಕವನ್ನು ಈ ಶಾಲೆ ಮಕ್ಕಳು ಪ್ರದರ್ಶನ ಮಾಡಿರುವುದು ವಿಶೇಷ ಎನಿಸಿದೆ. ಪೌರಾಣಿಕ ಐತಿಹಾಸಿಕ ನಾಟಕಗಳು ಮಕ್ಕಳಲ್ಲಿ ಪ್ರಭಾವ ಬೀರಿದೆ. ವೇದಿಕೆಯಲ್ಲಿ ನಿರ್ಭಯವಾಗಿ ಮಕ್ಕಳು ಮಾತನಾಡುವುದು ಒಂದು ಕಲೆಯೇ ಸರಿ. ಇದು ಮಕ್ಕಳ ಮುಂದಿನ ಭವಿಷ್ಯ ಕೂಡಾ ಉಜ್ವಲವಾಗುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001103601

ಸರ್ಕಾರಿ ಶಾಲೆಯು ಕನ್ನಡ ಶಾಲೆಗಳಾಗಿ ಉಳಿದಿವೆ. ಬಿಸಿಯೂಟ, ಸಮವಸ್ತ್ರ, ಹಾಲು, ಮೊಟ್ಟೆ, ರಾಗಿ ಹಂಬ್ಲಿ ಹೀಗೆ ಹಲವು ಪೌಷ್ಟಿಕ ಆಹಾರ ನೀಡಿ ಮಕ್ಕಳ ಅಪೌಷ್ಟಿಕತೆ ದೂರ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಅಲ್ಲಿನ ಶಿಕ್ಷಕರು ಅರ್ಹತೆ ಇರುವ ಕಾರಣ ಮಕ್ಕಳ ಬೆಳೆವಣಿಗೆ ಸೂಕ್ತ ಪಾಠ ಪ್ರವಚನ ಕೊಡುತ್ತಾರೆ. ಈ ನಿಟ್ಟಿನಲ್ಲಿ ಆಂಗ್ಲ ಮಾಧ್ಯಮ ವ್ಯಾಮೋಹ ಬಿಟ್ಟು ಪೋಷಕರು ಗ್ರಾಮೀಣ ಸರ್ಕಾರಿ ಶಾಲೆಯನ್ನು ಬೆಳೆಸಿ ಪೋಷಿಸಬೇಕು ಎಂದು ಮನವಿ ಮಾಡಿದರು.

ನಲ್ಲೂರು ಗ್ರಾಪಂ ಅಧ್ಯಕ್ಷ ವತ್ಸಲಕುಮಾರ್ ಮಾತನಾಡಿ ಹಳ್ಳಿಗಾಡಿನ ಮಕ್ಕಳಿಗೆ ಸೂಕ್ತ ಶಿಕ್ಷಣ ಸಿಗದೆ ಕೃಷಿಕರಾಗಿಯೇ ಬೆಳೆದ ಕಾಲ ಈಗಿಲ್ಲ. ಹಳ್ಳಿಗಳಲ್ಲಿ ಕಾನ್ವೆಂಟ್ ವ್ಯಾಮೋಹ ಶಾಲಾ ವಾಹನಗಳಾಗಿ ಬಂದು ಪೋಷಕರಲ್ಲಿ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದಾರೆ. ಆದರೆ ಸಾವಿರಾರು ವೆಚ್ಚ ಮಾಡಿಕೊಂಡು ಶಿಕ್ಷಣ ನೀಡುವ ಬದಲು ಸರ್ಕಾರಿ ಶಾಲೆಯನ್ನೇ ಬಳಸಿಕೊಂಡರೆ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಈ ಬಗ್ಗೆ ಮಕ್ಕಳ ತಂದೆತಾಯಿಯರು ಯೋಚಿಸಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ರಾಮಾಯಣ, ಲವಕುಶ ಕಾಳಗ ಯಕ್ಷಗಾನ ನಾಟಕ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ ಗಂಗಣ್ಣ, ರೇಣುಕಮ್ಮ, ಆನಂದಪ್ಪ, ಎಸ್ ಡಿಎಂಸಿ ಅಧ್ಯಕ್ಷ ರಂಗನಾಥಯ್ಯ, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವೆಂಕಟೇಶಪ್ಪ, ಗೌರವಾಧ್ಯಕ್ಷ ಪಟೇಲ್ ಮೂಡ್ಲಪ್ಪ, ವಾಲ್ಮೀಕಿ ಸಂಘದ ಅಧ್ಯಕ್ಷ ರಾಕೇಶ್, ಡಿಎಸ್ಎಸ್ ಮುಖಂಡರಾದ ಕೋಟೆ ಕಲ್ಲೇಶ್, ರಂಗಸ್ವಾಮಿ, ಪಾಂಡು, ಶಿಕ್ಷಕರಾದ ಅನಂತಕುಮಾರ್, ನಿವೇದಿತಾ, ರಂಗಪ್ಪ, ಆರಕ್ಷಕ ಸಿಬ್ಬಂದಿ ಕೆಂಪರಾಜು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...