ಗುಬ್ಬಿ | ಸಿಡಿಲು ಬಸವೇಶ್ವರಸ್ವಾಮಿ ಅದ್ದೂರಿ ಪರೇವು ಜಾತ್ರೆ

Date:

ಶ್ರಾವಣ ಮಾಸದ ಕಡೇ ಸೋಮವಾರ ನಡೆಯುವ ಗುಬ್ಬಿಯ ಇತಿಹಾಸ ಪ್ರಸಿದ್ಧ ಶ್ರೀ ಸಿಡಿಲು ಬಸವೇಶ್ವರಸ್ವಾಮಿ ಪರೇವು ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು.

ಶ್ರಾವಣ ಮಾಸದ ಕಡೇ ಸೋಮವಾರ ಬೆಳಿಗ್ಗೆ ರುದ್ರಾಭಿಷೇಕ ನಡೆದು ಪುಷ್ಪಾಲಂಕಾರ ಭಕ್ತರನ್ನು ಸೆಳೆಯಿತು. ಈ ಜೊತೆಗೆ ತೊರೆಮಠದ ಶ್ರೀ ಆಟವಿ ಚನ್ನಬಸವೇಶ್ವರ ಸ್ವಾಮೀಜಿ ಅವರಿಗೆ ಪಾದಪೂಜೆ ಕಾರ್ಯಕ್ರಮ ಟ್ರಸ್ಟ್ ವತಿಯಿಂದ ನಡೆಸಲಾಯಿತು. ಮಧ್ಯಾಹ್ನ 12 ಕ್ಕೆ ಮಹಾ ಮಂಗಳಾರತಿ ಅನ್ನ ದಾಸೋಹ ಸಂಜೆವರೆಗೆ ನಿರಂತರ ನಡೆಯಿತು.

ತೊರೆ ಮಠದ ಅಧ್ಯಕ್ಷ ಶ್ರೀ ಅಟವಿ ಚನ್ನಬಸವೇಶ್ವರ ಸ್ವಾಮೀಜಿ ಮಾತನಾಡಿ ಪ್ರತಿ ವರ್ಷ ನಡೆಯುವ ಈ ಪರೇವು ಜಾತ್ರೆಯಲ್ಲಿ ಅನ್ನ ದಾಸೋಹ ಕಾರ್ಯಕ್ರಮವೇ ವಿಶೇಷವಾಗಿ ನಡೆದು ಬಂದಿದೆ. ಸಾವಿರಾರು ಭಕ್ತರು ಆಗಮಿಸುವ ಈ ಸಿಡಿಲು ಬಸವೇಶ್ವರಸ್ವಾಮಿಗೆ ಇಂದಿಗೂ ಹರಕೆ ಕಟ್ಟಿಕೊಳ್ಳುವ ಹಾಗೂ ಹರಕೆ ತೀರಿಸುವ ಪೂಜೆ ಪ್ರತಿ ಅಮಾವಾಸ್ಯೆ ನಡೆದು ಬಂದಿದೆ. ಬಹಳ ಸತ್ಯ ನಿಷ್ಠೆಯಲ್ಲಿ ನಡೆದುಕೊಳ್ಳುವ ಭಕ್ತರು ದಾಸೋಹ ಕಾರ್ಯಕ್ರಮಕ್ಕೆ ದವಸ ಧಾನ್ಯ ಹಾಗೂ ಆರ್ಥಿಕ ದೇಣಿಗೆ ನೀಡುತ್ತಿದ್ದಾರೆ. ಭಿನ್ನ ವಿಗ್ರಹಕ್ಕೆ ಪೂಜೆ ನಡೆಯೋಲ್ಲ ಎಂಬ ಮಾತಿಗೆ ವಿರೋಧವಾಗಿ ಪೂಜೆ ವಿಧಿವತ್ತಾಗಿ ನಿರಂತರ ನಡೆದು ಬಂದಿದೆ. ಇಲ್ಲಿನ ಮಹಿಮೆ ಭಕ್ತರನ್ನು ಇಂದಿಗೂ ಆಕರ್ಷಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001918114

ಟ್ರಸ್ಟಿ ಎಚ್.ಎನ್.ಲೋಕೇಶ್ ಮಾತನಾಡಿ ಸಿಡಿಲು ಬಡಿದು ಎರಡು ಹೋಳು ಆಗಿರುವ ಬಸವಣ್ಣನಿಗೆ ನಿತ್ಯ ಪೂಜೆ, ಅಮಾವಾಸ್ಯೆ ಕಟ್ಲೆ ಹಾಗೂ ವರ್ಷಕ್ಕೊಮ್ಮೆ ಪೆರೇವು ಜಾತ್ರೆ ನಡೆಯುತ್ತದೆ. ಸಾವಿರಾರು ಭಕ್ತರು ಇಂದಿಗೂ ಸಿಡಿಲು ಬಸವಣ್ಣನ ಬಗ್ಗೆ ಅಪಾರ ನಂಬಿಕೆ, ಭಕ್ತಿ ಹೊಂದಿದ್ದಾರೆ. ನೂರಾರು ವರ್ಷದ ಬಸವಣ್ಣ ಕಲ್ಲಿನ ವಿಗ್ರಹ ಎರಡು ಭಾಗವಾದರೂ ಇಂದಿಗೂ ಬೆಳವಣಿಗೆ ಇದೆ. ಮತ್ತೊಂದು ವಿಶೇಷ ಸಮೀಪದ ಹೇರೂರು ಮಾಳೆ ಎಂಬ ಗ್ರಾಮದ ಮುಸ್ಲಿಂ ಸಮಾಜ ಕೂಡಾ ಇಲ್ಲಿನ ಬಸವಣ್ಣನಿಗೆ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಣೆ ಮಾಡುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್, ಪಪಂ ಸದಸ್ಯರಾದ ಮಹಮ್ಮದ್ ಸಾದಿಕ್, ಶೌಕತ್ ಆಲಿ, ಜಿ.ಆರ್.ಶಿವಕುಮಾರ್, ಜಿ.ಎನ್.ಅಣ್ಣಪ್ಪಸ್ವಾಮಿ, ಮುಖ್ಯಾಧಿಕಾರಿ ಮಂಜುಳಾದೇವಿ, ಟ್ರಸ್ಟ್ ಅಧ್ಯಕ್ಷ ಪಣಗಾರ್ ನಿಜಲಿಂಗಪ್ಪ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯರಾದ ಮಹಾದೇವ್, ಎಚ್.ಎನ್.ರಮೇಶ್, ನಾಗರಾಜ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...