ಗುಬ್ಬಿ | ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಸವ ಬಲಿ : ಗ್ರೌಂಡಿಂಗ್ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ನಾಗರೀಕರು

Date:

ವಿದ್ಯುತ್ ಕಂಬ ಬಳಿ ಗ್ರೌಂಡಿಂಗ್ ಮೂಲಕ ವಿದ್ಯುತ್ ನೆಲದಲ್ಲಿ ಹರಿದಾಡಿ ಅಲ್ಲೇ ನಡೆದು ಹೊರಟಿದ್ದ ಭದ್ರ ಹೆಸರಿನ ಬಸವ ಹಠಾತ್ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟ ದುರ್ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮುಂಜಾನೆಯಿಂದ ಸುರಿಯುತ್ತಿದ್ದ ಮಳೆಯಿಂದ ವಿದ್ಯುತ್ ಕಂಬಗಳಲ್ಲಿ ವೈರ್ ಗಳಿಂದ ವಿದ್ಯುತ್ ನೆಲದಲ್ಲಿ ಹರಿದಾಡಿದೆ. ಎಡಬಿಡದೆ ಸುರಿದ ಮಳೆಯಿಂದ ಬಸ್ ಸ್ಟ್ಯಾಂಡ್ ಮುಂದಿನ ಅಂಗಡಿ ಸಾಲಿನ ಬಳಿ ಗ್ರೌಂಡಿಂಗ್ ಆಗಿ ಕಂಬದ ಸುತ್ತಲಿನಲ್ಲಿ ವಿದ್ಯುತ್ ಹರಿದಿದೆ. ತನ್ನಷ್ಟಕ್ಕೆ ತಾನು ನಡೆದ ಬಸವ ಕ್ಷಣಾರ್ಧದಲ್ಲಿ ಬಲಿಯಾಗಿದೆ.

ಶ್ರೀ ಅಮರಗೊಂಡ ಮಲ್ಲಿಕಾರ್ಜುನಸ್ವಾಮಿ ಅವರಿಗೆ ವಿಧಿವಿಧಾನದಲ್ಲಿ ಬಿಟ್ಟ ಭದ್ರ ಹೆಸರಿನ ಬಸವ ಊರಿನಲ್ಲಿ ದೈವ ಸ್ವರೂಪವಾಗಿ ಓಡಾಡಿಕೊಂಡಿತ್ತು. ಇಂದು ಬೆಳಿಗ್ಗೆ ನಡೆದ ಘಟನೆಗೆ ಬೇಸರ ವ್ಯಕ್ತಪಡಿಸಿದ ಭಕ್ತವೃಂದ ವಿದ್ಯುತ್ ಕಂಬ ನಿರ್ವಹಣೆ ಬಗ್ಗೆ ಬೆಸ್ಕಾಂ ಇಲಾಖೆ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಈಗಾಗಲೇ ಮೂಕ ಪ್ರಾಣಿಗಳು ಬಲಿಯಾದ ಘಟನೆ ನಡೆದಿದೆ. ಮಹಾಲಕ್ಷ್ಮಿ ಬಡಾವಣೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬಳಿ ವಿದ್ಯುತ್ ಕಂಬ ಬಳಿ ವಿದ್ಯುತ್ ಹರಿದು ಹಸುವೊಂದು ಬಲಿಯಾಗಿದೆ. ಕೆಎಂಎಫ್ ಪಶು ಆಹಾರ ಘಟಕ ಬಳಿಯ ಕಂಬದ ಬಳಿ ಮೇಕೆಗಳ ಹಿಂಡು ಕೊದಲೆಳೆಯಲ್ಲಿ ಪಾರಾಗಿದ್ದವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗುಬ್ಬಿ ಪಟ್ಟಣದ ಹಲವು ಬಡಾವಣೆಯಲ್ಲಿ ವಿದ್ಯುತ್ ತಂತಿ ಹಾಗೂ ಕಂಬಗಳು ಶಿಥಿಲಾವಸ್ಥೆಯಲ್ಲಿವೆ. ಕೆಲ ಭಾಗದಲ್ಲಿ ತಂತಿ ವೈರ್ ಗಳು ಸ್ಕಿನ್ ಓಪನ್ ಆಗಿ ಕರೆಂಟ್ ಹರಿದಾಡುತ್ತಿದೆ. ಮೂಕ ಪ್ರಾಣಿಗಳು ಈಗಾಗಲೇ ಬಲಿಯಾಗುತ್ತಿವೆ. ಮನುಷ್ಯರ ಜೀವದ ಚೆಲ್ಲಾಟ ಆಡುವ ಬೆಸ್ಕಾಂ ಅಧಿಕಾರಿಗಳು ಹಳೆಯ ತಂತಿ ಬದಲಿಸಿ ಜೀವ ಉಳಿಸುವ ಕೆಲಸ ಮಾಡಬೇಕು. ಸ್ಥಳೀಯ ಪಟ್ಟಣ ಪಂಚಾಯಿತಿ ಸಹ ವಿದ್ಯುತ್ ತಂತಿಗಳ ಬಗ್ಗೆ ನಿಗಾವಹಿಸಿ ಕೂಡಲೇ ಸರಿ ಪಡಿಸಬೇಕು ” ಎಂದು ವಕೀಲ ಜಿ.ಎಂ.ಶಿವಾನಂದ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...