ಗುಬ್ಬಿ | ಸ್ಥಳೀಯ ಪಪಂ ಆಯೋಜಿಸಿದ ಪೌರ ಕಾರ್ಮಿಕರ ಕ್ರೀಡಾಕೂಟ

Date:

ಹಗ್ಗಜಗ್ಗಾಟ, ಗುಂಡು ಎಸೆತ, ಮಡಿಕೆ ಹೊಡೆಯುವುದು, ನಿಂಬೆ ಚಮಚ ಓಟ, ಮ್ಯೂಸಿಕಲ್ ಚೇರ್ ಹೀಗೆ ಅನೇಕ ಕ್ರೀಡೆಗಳ ಆಟವಾಡಿದ ಪೌರ ಕಾರ್ಮಿಕರು ನಿತ್ಯದ ಜಂಜಾಟದಿಂದ ಹೊರತಾದ ಮನರಂಜನೆ ಅನುಭಿಸಲು ಸ್ಥಳೀಯ ಪಟ್ಟಣ ಪಂಚಾಯಿತಿ ಎಲ್ಲಾ ಪೌರ ಸಿಬ್ಬಂದಿಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಗುಬ್ಬಿ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ಕ್ರೀಡಾಕೂಟವನ್ನು ಉದ್ಘಾಟಿಸಿದ ಪಪಂ ಅಧ್ಯಕ್ಷೆ ಮಂಗಳಮ್ಮ ಹಾಗೂ ಉಪಾಧ್ಯಕ್ಷೆ ಮಮತಾ ಪಟ್ಟಣ ಸ್ವಚ್ಚತೆ ಬಗ್ಗೆ ನಿತ್ಯ ತಮ್ಮನ್ನೇ ತೊಡಗಿಸಿಕೊಂಡ ಕಾರ್ಮಿಕರು ಪೌರ ಕಾರ್ಮಿಕರ ದಿನಾಚರಣೆಯನ್ನು ಸಂತೋಷದಿಂದ ಆಚರಣೆ ಮಾಡಲು ಈ ವಿಶೇಷ ಕ್ರೀಡಾಕೂಟ ಆಯೋಜಿಸಲಾಗಿದೆ. ಮಹಿಳೆಯರು, ಪುರುಷರಿಗೆ ಪ್ರತ್ಯೇಕ ಆಟಗಳನ್ನು ಸ್ಥಳೀಯ ಶ್ರೀ ಚನ್ನಬಸವೇಶ್ವರ ಯುವಕ ಸಂಘ ಅಚ್ಚುಕಟ್ಟಾಗಿ ನಿರ್ವಹಿಸಿತು.

ಕ್ರೀಡಾಕೂಟಕ್ಕೆ ಶುಭ ಕೋರಿದ ಪಪಂ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಮಹಮ್ಮದ್ ಸಾದಿಕ್, ಜಿ.ಸಿ.ಕೃಷ್ಣಮೂರ್ತಿ, ಆನಂದ್ ಎಲ್ಲಾ ಆಟದಲ್ಲೂ ತಮ್ಮನ್ನು ತೊಡಗಿಸಿಕೊಂಡು ಪೌರ ಕಾರ್ಮಿಕರ ಜೊತೆ ಸಂತಸ ಹಂಚಿಕೊಂಡರು. ಕ್ರೀಡಾ ಮನೋಭಾವ, ಸ್ಫೂರ್ತಿ ತುಂಬಿ ಕ್ರೀಡೆಯಲ್ಲಿ ತೊಡಗುವ ಜೊತೆಗೆ ಕಾರ್ಮಿಕರ ಆರೋಗ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಆರೋಗ್ಯ ನಿರೀಕ್ಷಕಿ ವಿದ್ಯಾಶ್ರೀ, ಸಿಬ್ಬಂದಿಗಳಾದ ಲೋಕನಾಥ್, ಪ್ರೀತಂ, ಆಂತರಾಜು, ಶ್ರೀ ಚನ್ನಬಸವೇಶ್ವರ ಯುವಕ ಸಂಘದ ಕಾರ್ಯದರ್ಶಿ ಸಿ.ಆರ್. ಶಂಕರ್ ಕುಮಾರ್, ದೈಹಿಕ ಶಿಕ್ಷಕ ಗಿರೀಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...